ಮೈಸೂರು: ನಾವು ಸೇವಿಸುವ ಗಾಳಿ, ನೀರು, ಆಹಾರ ಗುಣಮಟ್ಟದಿಂದ ಕೂಡಿರ ಬೇಕಾದರೆ, ರಾಸಾಯನಿಕ ಮುಕ್ತ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರ ಶುದ್ಧ ಹಸಿರು ವಲಯವಾಗಿರಬೇಕು ಎಂದು ಕರ್ನಾಟಕ ರಾಜ್ಯ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಟಿ.ಮಹದೇವಸ್ವಾಮಿ ಅಭಿಪ್ರಾಯಪಟ್ಟರು. ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಪಕ್ಕದಲ್ಲಿರುವ ಜಿಲ್ಲಾ ಕಸಾಪ ಸಭಾಂಗಣದಲ್ಲಿ ಭಾರತೀಯ ಸಾಂಸ್ಕೃತಿಕ ವಿಕಾಸ ವೇದಿಕೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ನಡೆದ `ಪರಿಸರ ಜಾಗೃತಿ ಸಮಾವೇಶ ಮತ್ತು ಸ್ಮರಣೀಯರ ನುಡಿನಮನ’ ಕಾರ್ಯಕ್ರಮದಲ್ಲಿ…