ಸರ್ಕಾರದ ಆಸಕ್ತಿಯ ಬಗ್ಗೆ ಕಾರ್ಮಿಕ ಸಂಘಟನೆಗೆ ಸಚಿವರಾದ ಜಾರ್ಜ್, ಜಿಟಿಡಿ ವಿವರಣೆ ಮೈಸೂರು: ಪ್ರಮೋಟರ್ ಕರೆತಂದು ಮೈಸೂರಿನ ಕೆಆರ್ಎಸ್ ರಸ್ತೆಯಲ್ಲಿರುವ ಫಾಲ್ಕನ್ ಕಾರ್ಖಾನೆಯನ್ನು ಪುನರಾರಂಭಿಸಲು ಸರ್ಕಾರ ಆಸಕ್ತಿ ವಹಿಸಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಇಂದಿಲ್ಲಿ ಕಾರ್ಮಿಕ ಸಂಘಟನೆ ಮುಖಂಡ ರಿಗೆ ಭರವಸೆ ನೀಡಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಕಾರ್ಖಾನೆ ಕಾರ್ಮಿಕ ಸಂಘದ ಪದಾಧಿಕಾರಿಗಳು, ಸಿಪಿಐ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ, ಕಾರ್ಖಾನೆ ಆಡಳಿತ…
ಮೈಸೂರು
ಫಾಲ್ಕನ್ ಟೈರ್ಸ್ ಪುನರಾರಂಭ ಕುರಿತು ಇಂದು ಸಚಿವ ಕೆ.ಜೆ.ಜಾರ್ಜ್ ಸಭೆ
July 24, 2018ಮೈಸೂರು: ಮೂರು ವರ್ಷಗಳಿಂದ ಬಂದ್ ಆಗಿರುವ ಫಾಲ್ಕನ್ ಟೈರ್ಸ್ ಕಾರ್ಖಾನೆ ಪುನರಾರಂಭ ಸಂಬಂಧ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಕೆ.ಜೆ.ಜಾರ್ಜ್ ಅವರು ಮೈಸೂರಿನಲ್ಲಿ ಮಹತ್ವದ ಸಭೆ ನಡೆಸಲಿದ್ದು, 2 ಸಾವಿರಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳ ಭವಿಷ್ಯ ತಿಳಿಯಲಿದೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಳೆ(ಜು.24) ಬೆಳಿಗ್ಗೆ 11.30ಕ್ಕೆ ಸಭೆ ಏರ್ಪಡಿಸಲಾಗಿದ್ದು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಸ್ಥಳೀಯ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ. ಜೊತೆಗೆ ಸರ್ಕಾರದ ಉನ್ನತ ಅಧಿಕಾರಿಗಳು,…