ಚಾಮರಾಜನಗರ: ರೈತರ ಎಲ್ಲ ರೀತಿಯ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಸಂಘದ ಕಾರ್ಯಕರ್ತರು ಹಾಗೂ ರೈತರು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದಿಂದ ಭುವನೇಶ್ವರಿ ವೃತ್ತಕ್ಕೆ ಬಂದು ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಪ್ರತಿಭಟಿಸಿದರು. ಈ ವೇಳೆ…