ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಲು ಡಿಸಿಗಳಿಗೆ ಸೂಚನೆ
September 1, 2020ಮೈಸೂರು,ಆ.31(ಎಸ್ಪಿಎನ್)-ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ, ಹಾವು ಕಡಿತ ಹಾಗೂ ಬಣವೆ ನಷ್ಟಕ್ಕೆ ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯ ಉಪ ಕಾರ್ಯದರ್ಶಿ ಜಯಲಕ್ಷ್ಮಿ ಅವರು ಆಗಸ್ಟ್ 26ರಂದು ಸುತ್ತೋಲೆ ಹೊರಡಿಸಿದ್ದಾರೆ. 2019-20ನೇ ಸಾಲಿಗೆ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ, ಹಾವು ಕಡಿತ, ಬಣವೇ ನಷ್ಟಕ್ಕೆ ಪರಿಹಾರ ನೀಡುವ ಯೋಜನೆಗಳನ್ನು ಈ ಸಾಲಿನಲ್ಲಿ ಕಂದಾಯ ಇಲಾಖೆಯಿಂದ ಅನುಷ್ಠಾನಗೊಳಿಸಲು ಈ ಸಾಲಿನ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ. ರೈತರ ಆತ್ಮಹತ್ಯೆ ಪ್ರಕರಣಗಳನ್ನು ಉಪವಿಭಾಗಾಧಿಕಾರಿಗಳ…
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ರೈತ ಸಂಘದಿಂದ ಹೆದ್ದಾರಿ ತಡೆ
June 21, 2020ಮೈಸೂರು, ಜೂ.20(ಪಿಎಂ)- ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79ಎ, ಬಿ ಮತ್ತು ಸಿ ಹಾಗೂ 80ನೇ ಕಲಂ ತಿದ್ದು ಪಡಿಗೆ ರಾಜ್ಯ ಸರ್ಕಾರ ಮುಂದಾಗಿರು ವುದನ್ನು ಖಂಡಿಸಿ `ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ ವತಿ ಯಿಂದ ಸಾಮೂಹಿಕ ನಾಯಕತ್ವದಲ್ಲಿ ಮೈಸೂರು ಎಪಿಎಂಸಿ ಎದುರು ನಂಜನ ಗೂಡು ರಸ್ತೆ ರಾಜ್ಯ ಹೆದ್ದಾರಿ ತಡೆದು ಶನಿವಾರ ಪ್ರತಿಭಟನೆ ನಡೆಸಲಾಯಿತು. ರೈತ ಸಮುದಾಯಕ್ಕೆ ಮಾರಕವಾಗುವ ರೀತಿ ಭೂ ಸುಧಾರಣಾ ಕಾಯ್ದೆಗೆ ತಿದ್ದು ಪಡಿ ತರಲು ಸರ್ಕಾರ ಮುಂದಾಗಿದೆ….
ಬೀಜೋಪಚಾರ ಮಾಹಿತಿಗಾಗಿ `ಆನ್ಲೈನ್ ಲೈವ್’ಗೆ ಬಂದ 30 ರೈತರು!
May 24, 2020ಮೈಸೂರು,ಮೇ 23(ಎಂಟಿವೈ)- ಮುಂಗಾರು ಇನ್ನೇನು ಆರಂಭವಾಗಲಿದ್ದು, ಜಿಲ್ಲಾದ್ಯಂತ ಕೃಷಿ ಚಟುವಟಿಕೆ ನಿಧಾನ ವಾಗಿ ಗರಿಗೆದರುತ್ತಿದೆ. ಆಧುನಿಕ ತಂತ್ರಜ್ಞಾನ ದೊಟ್ಟಿಗೆ ಹಂತಹಂತವಾಗಿ ನಂಟು ಸಾಧಿಸಿ ಕೊಳ್ಳುತ್ತಿರುವ ರೈತರು, ಈಗ `ಆನ್ಲೈನ್ ಲೈವ್’ಗೆ ಬಂದು ಕೃಷಿ ಸಂಶೋಧನಾ ಕೇಂದ್ರದೊಟ್ಟಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಬೀಜೋಪಚಾರದ ಬಗ್ಗೆ ಹೆಚ್ಚು ಮಾಹಿತಿ ಪಡೆದುಕೊಂಡಿದ್ದಾರೆ! ನಾಗನಹಳ್ಳಿ ವಿಸ್ತರಣಾ ಶಿಕ್ಷಣ ಘಟಕ ಮತ್ತು ಸಾವಯವ ಕೃಷಿ ಸಂಶೋಧನಾ ಕೇಂದ್ರವು ರೈತರಿಗೆ ಕ್ರಮಬದ್ಧ ಬೀಜೋ ಪಚಾರ ಮಾಡುವ ತರಬೇತಿ ಕಾರ್ಯ ಕ್ರಮವನ್ನು ಶನಿವಾರ ಆನ್ಲೈನ್ನಲ್ಲಿ ಆಯೋಜಿಸಿತ್ತು. ಆಸಕ್ತ…
ಬಜೆಟ್ನಲ್ಲಿ ರೈತರ ಬೇಡಿಕೆ ಈಡೇರಿಸದಿದ್ದರೆ ಹೋರಾಟ
February 8, 2020ಮೈಸೂರು: ರಾಜ್ಯದಲ್ಲಿ ರೈತರು, ಕಾರ್ಮಿಕರ ಸ್ಥಿತಿ ಶೋಚನೀಯ ವಾಗಿದ್ದು, ರಾಜ್ಯ ಸರ್ಕಾರ 2020ರ ಮುಂಗಡಪತ್ರದಲ್ಲಿ ರೈತರ ಬೇಡಿಕೆಗಳಿಗೆ ಅನುದಾನ ಕಾಯ್ದಿರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ಜೆ.ಜವರೇಗೌಡ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಈವರೆಗಿನ ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರ ಹಿತ ರಕ್ಷಿಸುವ ಯೋಜನೆ ರೂಪಿಸುವಲ್ಲಿ ವಿಫಲವಾಗಿವೆ. ಇದರಿಂದ ರೈತರ ಆತ್ಮಹತ್ಯೆ ನಡೆಯುತ್ತಲೇ ಇವೆ. ಈ ನಡುವೆ ಬೆಲೆ ಕುಸಿತ, ಅತಿವೃಷ್ಟಿ, ಬರ, ಉತ್ಪಾದನಾ ವೆಚ್ಚ ಹೆಚ್ಚಳ ರೈತವರ್ಗ ತತ್ತರಿಸಿದೆ. ಪಿಎಲ್ಡಿ…
ಬಡ ರೈತರಿಗೆ ಮಾಸಿಕ 3 ಸಾವಿರ ಪಿಂಚಣಿ
June 1, 2019ನವದೆಹಲಿ: ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಗದ್ದುಗೆ ಏರಿದ ಮರುದಿನವೇ ದೇಶದ ಬಡ ರೈತರು, ಬಡವರು, ಸಣ್ಣ ವ್ಯಾಪಾರಿ ಗಳು, ಹುತಾತ್ಮ ಯೋಧರ ಕುಟುಂಬಗಳಿಗೆ ಭರ್ಜರಿ ಉಡುಗೊರೆ ನೀಡಿದ್ದು, ದೇಶದಲ್ಲಿ ಬಡತನ ನಿರ್ಮೂ ಲನೆ ಮಾಡಲು ಐತಿಹಾಸಿಕ ಹೆಜ್ಜೆ ಇಟ್ಟಿದ್ದಾರೆ. ವಾರ್ಷಿಕ 6 ಸಾವಿರ ರೂ. ನೀಡುವ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸಿದ್ದು ಇದರಿಂದ 14.5 ಕೋಟಿ ರೈತರಿಗೆ ಪ್ರಯೋಜನವಾಗ ಲಿದೆ. ಇದಕ್ಕೆ ಕೇಂದ್ರ ಸರ್ಕಾರ ವಾರ್ಷಿಕ 87 ಸಾವಿರ ಕೋಟಿ ರೂ ವೆಚ್ಚ…
ಮೈಸೂರಲ್ಲಿ ರೈತರಿಂದ ದಿಢೀರ್ ಹೆದ್ದಾರಿ ತಡೆ
December 14, 2018ಮೈಸೂರು: ಕಬ್ಬು ಬೆಳೆಗಾರರು ಸೇರಿದಂತೆ ರೈತ ಸಮು ದಾಯದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯ ದಲ್ಲಿ ಗುರುವಾರ ರೈತರು ದಿಢೀರ್ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಎಪಿಎಂಸಿ ಸಮೀಪದ ರಿಂಗ್ ರಸ್ತೆ ಜಂಕ್ಷನ್ನಲ್ಲಿ ಜಮಾಯಿಸಿದ ರೈತರು, ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ದರು. ರೈತಪರ ಸರ್ಕಾರ ಎಂದು…
ರೈತರ ವಾಣಿಜ್ಯ ಬ್ಯಾಂಕ್ ಸಾಲ ಮನ್ನಾ ಪ್ರಕ್ರಿಯೆ ಡಿ.5ರಿಂದ ಆರಂಭ
November 28, 2018ಬೆಂಗಳೂರು: ರೈತರ ಸಾಲ ಮನ್ನಾ ಯೋಜನೆ ಕುರಿತಂತೆ ಕೆಲವು ವಲಯಗಳಲ್ಲಿ ಅನಗತ್ಯ ಅಪಪ್ರಚಾರ ನಡೆಯುತ್ತಿದೆ. ರೈತರ ಆತಂಕ ದೂರವಾಗಬೇಕು. ಜಿಲ್ಲಾಧಿಕಾರಿಗಳು ಡಿಸೆಂಬರ್ 1 ರೊಳಗಾಗಿ ಎಲ್ಲ ಮಾಹಿತಿಯನ್ನು ಸಂಗ್ರಹಿಸಿ, ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲಮನ್ನಾಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಡಿಸೆಂಬರ್ 5 ರಿಂದ ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು ಹಾಗೂ ಪ್ರಾದೇಶಿಕ ಆಯುಕ್ತರ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 33 ಬ್ಯಾಂಕುಗಳಿಂದ 20.8 ಲಕ್ಷ ರೈತರ ಬೆಳೆ…
ರೈತರಿಗೆ ಹೊಸ ಸಾಲ ನೀಡಲು ಸರ್ಕಾರ ಆದೇಶ
July 27, 2018ಬೆಂಗಳೂರು: ರೈತರ ಕೃಷಿ ಸಾಲ ಮನ್ನಾದ ಬಹು ದೊಡ್ಡ ಆರ್ಥಿಕ ಹೊರೆ ನಿರ್ವಹಣೆ ನಡುವೆಯೂ ಹೊಸದಾಗಿ ಸಾಲ ನೀಡಲು ಸರ್ಕಾರ ಆದೇಶ ಹೊರಡಿ ಸಿದೆ. ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂ. ವರೆಗಿನ ಬೆಳೆ ಸಾಲ ನೀಡು ವಂತೆ ಸಹಕಾರ ಸಂಘಗಳಿಗೆ ಸೂಚಿಸ ಲಾಗಿದೆ. ಇದೇ ವೇಳೆ 3 ಲಕ್ಷ ರೂ. ಗಿಂತ ಹೆಚ್ಚು ಮೊತ್ತದ ಕೃಷಿ ಸಾಲಕ್ಕೆ ಸಾಮಾನ್ಯ ಬಡ್ಡಿ ದರ ನಿಗದಿಪಡಿಸ ಲಾಗಿದೆ. ಈ ವರ್ಷದ ಏಪ್ರಿಲ್ 1ರಿಂದ 2019ರ ಮಾರ್ಚ್ 31ರವರೆಗೆ…
ಮುಸುಕಿನ ಜೋಳ ಕೀಟ ಬಾಧೆ: ಆತಂಕದಲ್ಲಿ ಅನ್ನದಾತ
July 13, 2018ಜಿಲ್ಲೆಯಲ್ಲಿ 85,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ, ರೈತರು ಮುಂಜಾಗ್ರತೆ ವಹಿಸಲು ಸಲಹೆ – ಎಸ್.ಪ್ರತಾಪ್ ಹಾಸನ: ಜಿಲ್ಲೆಯ ಹಲವು ಗ್ರಾಮ ಗಳಲ್ಲಿ ರೈತರು ಬಿತ್ತನೆ ಮಾಡಿದ ಮುಸುಕಿನ ಜೋಳ ಬೆಳೆಗೆ ಕೀಟಗಳ ಬಾಧೆ ಹೆಚ್ಚಾಗಿದ್ದು, ರೈತರು ಆತಂಕಿತರಾಗಿದ್ದಾರೆ. ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಶಾಂತಿಗ್ರಾಮ, ಬ್ರಹ್ಮ ದೇವರಹಳ್ಳಿ, ನಿಟ್ಟೂರು ಗ್ರಾಮಗಳು ಹಾಗೂ ಅರಕಲಗೂಡು, ಬೇಲೂರು ಸೇರಿ ದಂತೆ ಜಿಲ್ಲೆಯ ವಿವಿಧೆಡೆ ಮುಸುಕಿನ ಜೋಳವನ್ನು ಬಿತ್ತನೆ ಮಾಡಲಾಗಿದ್ದು, ಪ್ರಸ್ತುತ ಕಾಂಡಕೋರಕ ಕೀಟದ ಹಾವಳಿ ಜಾಸ್ತಿಯಾಗಿದ್ದು, ಎಲೆ ಹಾಗೂ ಸುರುಳಿ…