ಮೈಸೂರು: ಲಲಿತಕಲೆಗಳಲ್ಲಿ ಶೈಕ್ಷಣ ಕ ಅರ್ಹತೆ ಪಡೆದವರಿಗೆ ಸೂಕ್ತ ಉದ್ಯೋಗಾವಕಾಶಗಳ ಕೊರತೆ ಇರುವುದರಿಂದಾಗಿ ಯುವಜನರು ಲಲಿತಕಲೆಗಳಲ್ಲಿ ಪದವಿ ಪಡೆಯಲು ಹಿಂದೇಟು ಹಾಕುವಂತಾಗಿದೆ. ಹಾಗಾಗಿಯೇ ಸಂದೇಶದಂಥ ಲಲಿತಕಲಾ ಕಾಲೇಜುಗಳು ಮುಚ್ಚಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕರ್ನಾಟಕ ಅರೆಭಾಷೆ ಸಾಹಿತ್ಯ ಹಾಗೂ ಸಂಸ್ಕೃತಿ ಅಕಾಡೆಮಿ ಸದಸ್ಯೆ ಶ್ವೇತಾ ಮಡಪ್ಪಾಡಿ ಅಭಿಪ್ರಾಯಪಟ್ಟರು. ಮೈಸೂರಿನ ಸಂದೇಶ ಸಂಸ್ಕೃತಿ ಹಾಗೂ ಶಿಕ್ಷಣ ಪ್ರತಿಷ್ಠಾನ ಭಾನುವಾರ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿಯ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಲಲಿತಕಲೆಗಳಲ್ಲಿ ಪದವಿ…