ಬೆಂಗಳೂರು: ಬಂಡೀಪುರ-ತಲಚೇರಿ ನಡುವಿನ ಅಭಯಾರಣ್ಯದ ಹಾಲಿ ರಸ್ತೆ ತೆರವುಗೊಳಿಸಿ, ಕಾಡು ಬೆಳೆಸುವುದಾಗಿ ಕೇಂದ್ರ ಪರಿಸರ ಇಲಾಖೆ ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ರಸ್ತೆ ತೆರವಿನ ನಂತರ ಪ್ರಯಾಣಿಕರ ಅನುಕೂಲಕ್ಕಾಗಿ 47 ಕಿಲೋ ಮೀಟರ್ ಮೇಲ್ಸೇತುವೆ (ಎಲಿವೇಟೆಡ್ ಕಾರಿಡಾರ್) ನಿರ್ಮಿಸುವುದಾಗಿ ಹೇಳಿದೆ. ಕರ್ನಾಟಕ ಸರ್ಕಾರ ಈ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಮಾಡಿರುವುದನ್ನು ವಿರೋಧಿಸಿ ಕೇರಳ ಸರ್ಕಾರ ಮತ್ತು ಅಲ್ಲಿನ ಸಾರಿಗೆ ಸಂಘ ಗಳು ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದ್ದವು. ವಿಚಾರಣೆ ವೇಳೆ ಕೇಂದ್ರ ಮಧ್ಯೆ ಪ್ರವೇಶಿಸಿ,…