ಮೈಸೂರು: ಪ್ರತಿಭಟನೆಯಲ್ಲಿ `ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಳಿನಿ ಬಾಲಕುಮಾರ್ಗೆ ಮೈಸೂರಿನ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆರಾಲ್ಡ್ ರುಡಾಲ್ಫ್ ಮೆಂಡೋನ್ಸಾ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದರು. ಆರೋಪಿಗಳು ಜಾಮೀನು ಕೋರಿ ಜ.20ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಜ.24ರಂದು ವಾದ-ಪ್ರತಿವಾದ ನಡೆದಿತ್ತಾದರೂ ಆದೇಶವನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಸೋಮವಾರ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು, 50 ಸಾವಿರ ರೂ. ಬಾಂಡ್, ಒಬ್ಬರ ಶ್ಯೂರಿಟಿ ನೀಡಬೇಕು. 15 ದಿನಗಳಿಗೊಮ್ಮ್ಮೆ…
ಮೈಸೂರು
ಮಾನಸಗಂಗೋತ್ರಿಯಲ್ಲಿ ‘ಫ್ರೀ ಕಾಶ್ಮೀರ್’ ಫಲಕ ಪ್ರದರ್ಶನ ಪ್ರಕರಣ: ಜ.27ಕ್ಕೆ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
January 25, 2020ಮೈಸೂರು: ಮಾನಸಗಂಗೋತ್ರಿಯಲ್ಲಿ ‘ಫ್ರೀ ಕಾಶ್ಮೀರ್’ ಫಲಕ ಪ್ರದರ್ಶಿಸಿದ ಪ್ರಕರಣ ಸಂಬಂಧ ಸಲ್ಲಿಸಿದ್ದ ಜಾಮೀನು ಅರ್ಜಿ ತೀರ್ಪನ್ನು ನ್ಯಾಯಾ ಲಯವು ಜನವರಿ 27ಕ್ಕೆ ಕಾಯ್ದಿರಿಸಿದೆ. ಈಗಾಗಲೇ ಮಧ್ಯಂತರ ಜಾಮೀನು ಮಂಜೂರಾಗಿರುವ ಪ್ರಕರಣದ ಆರೋಪಿ ನಳಿನಿ ಬಾಲಕುಮಾರ್ಗೆ ರೆಗ್ಯುಲರ್ ಬೇಲ್ ನೀಡುವಂತೆ ಆಕೆ ಪರ ಬೆಂಗಳೂರಿನ ಹಿರಿಯ ವಕೀಲ ದ್ವಾರಕಾನಾಥ್ ಹಾಗೂ ತಂಡ, ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಧೀಶ ಜೆರಾಲ್ಡ್ ರುಡಾಲ್ಫ್ ಮಂಡೊನ್ಯಾ ಅವರು,…