ಭೇರ್ಯ: ಕುಂಭದ್ರೋಣ ಮಹಾಮಳೆಗೆ ತತ್ತರಿಸಿರುವ ಕೊಡಗಿನ ಜನರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯದ ಜನರು ನೆರವು ನೀಡಬೇಕೆಂದು ಸಮೀಪದ ಅರಕೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಎಸ್.ಸ್ವಾಮಿ ಮನವಿ ಮಾಡಿದರು. ಅವರು ಭೇರ್ಯ ಗ್ರಾಮದ ಗಾಂಧಿವೃತ್ತದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಕೊಡಗಿನ ಜನರ ಸಂಕಷ್ಟ ಪರಿಹಾರಕ್ಕೆ ಪರಿಹಾರ ನಿಧಿ ಸಂಗ್ರಹ ಮಾಡಿ ಮಾತನಾಡಿ ಸಂಕಷ್ಟ ದಲ್ಲಿರುವವರಿಗೆ ನೆರವು ನೀಡುವುದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು. ವಸತಿ ಶಾಲೆಯ ಮೂವತ್ತಕ್ಕೂ ಹೆಚ್ಚು ವಿಧ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಮುಂಜನಹಳ್ಳಿ…