ಪಿರಿಯಾಪಟ್ಟಣ, ಫೆ.13(ವೀರೇಶ್)-ರಾಜಕೀಯ ಹಸ್ತ ಕ್ಷೇಪವಿದ್ದರೆ ಸಹಕಾರಿ ಸಂಘಗಳು ಉಳಿಯಲು ಸಾಧ್ಯವೇ ಇಲ್ಲ ಎಂದು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆದ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಜಿ.ಡಿ.ಹರೀಶ್ಗೌಡ ಇಂದಿಲ್ಲಿ ಅಭಿಪ್ರಾಯಪಟ್ಟರು. ಪಿರಿಯಾಪಟ್ಟಣದಲ್ಲಿ ಶನಿವಾರ ತಾಲೂಕಿನ ವಿವಿಧ ಕೃಷಿ ಪತ್ತಿನ ಸಹಕಾರ ಸಂಘಗಳು ಏರ್ಪಡಿಸಿದ್ದ ಸಮಾ ರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಇರಲೇ ಬಾರದು ಎಂದು ಹೇಳಿದರು. ಸಹಕಾರಿ ಕಾರ್ಯಕ್ರಮಗಳು ಯಾವುದೇ ಜಾತಿ, ಪಕ್ಷ ಹಾಗೂ ಧರ್ಮ ರಹಿತವಾಗಿ ನಡೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲಾ…