ಮೈಸೂರು: ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಅಪ್ಪಂದಿರ ದಿನಾಚರಣೆಯನ್ನು ವಿಶಿಷ್ಟ ಶೈಲಿಯಲ್ಲಿ ಆಚರಿಸಲಾಯಿತು. ಕಾಲೇಜು ಪ್ರಾಂಶುಪಾಲ ಶ್ರೀಧರ್ ಮಕ್ಕಳೆಲ್ಲರಿಗೂ `ಮಾತೃ ದೇವೋ ಭವ, ಪಿತೃ ದೇವೋ ಭವ ಆಚಾರ್ಯ ದೇವೋ ಭವ’ ಎಂದು ಶ್ಲೋಕದ ಮೂಲಕ ಮಕ್ಕಳಿಗೆ ತಂದೆ-ತಾಯಿಗೆ ಜೀವನದಲ್ಲಿರುವ ಪ್ರಾಮುಖ್ಯತೆ ಮತ್ತು ಗುರುಗಳಿಂದ ನಮಗೆ ಇರುವ ಆಧಾರಗಳು ಬಹಳ ಮುಖ್ಯ ಎಂದು ತಿಳಿಸಿಕೊಟ್ಟರು. ಶಾಲಾ ಆಡಳಿತ ಸಂಯೋಜನಾಧಿಕಾರಿ ಶ್ರೀಮತಿ ಕಾಂತಿನಾಯಕ್ ತಮ್ಮ ಜೀವನದಲ್ಲಿ ತಮ್ಮ ತಂದೆಯೊಡನೆ ಇದ್ದ ಮತ್ತು ಕಳೆದ ದಿನಗಳ ಬಗ್ಗೆ…
ಮೈಸೂರು
ಗಂಗೋತ್ರಿ ಪಬ್ಲಿಕ್ ಶಾಲೆ, ಕಾಲೇಜು ಮಂತ್ರಿಮಂಡಲ ಪದಗ್ರಹಣ
June 12, 2018ಮೈಸೂರು: ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಮಂತ್ರಿಮಂಡಲದ ರಚನೆ ಹಾಗು ಪದಗ್ರಹಣ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ಶಾಲಾ ಸಂಸ್ಥಾಪಕ ಟಿ.ರಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಮಂತ್ರಿ ಮಂಡಲದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮಂತ್ರಿಮಂಡಲದಲ್ಲಿ ಮಂತ್ರಿಗಳು ಹಾಗೂ ನಾಯಕರುಗಳಿಗೆ ಗುರುತರವಾದ ಜವಾಬ್ದಾರಿ ಇರುತ್ತದೆ. ವಿದ್ಯಾರ್ಥಿಗಳು ಇದನ್ನು ಸರಿಯಾಗಿ ನಿಭಾಯಿಸಿಕೊಂಡು ಹೋಗಬೇಕು ಎಂದು ಕಿವಿಮಾತು ಹೇಳಿದರು. ಪ್ರಾಂಶುಪಾಲರಾದ ಶ್ರೀಧರ್ರವರು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜರೀನಾ ಬಾಬುಲ್ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಂದ ನೆರವೇರಿಸಿದರು. ಯು.ಮೌನ ಮುಖ್ಯಮಂತ್ರಿಯಾಗಿ,…