ಗುಂಡ್ಲುಪೇಟೆ: ಮತಯಾಚನೆಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್) ಅವರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು ತಮ್ಮ ಬೀದಿಗಳಿಗೆ ಬಂದು ಸಮಸ್ಯೆಗಳನ್ನು ಕಣ್ಣಾರೆ ನೋಡುವಂತೆ ಒತ್ತಾಯಿಸಿದ ಪ್ರಸಂಗ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಹುಂಡಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ನಂತರ ಹಿರಿಕಾಟಿಗೆ ಆಗಮಿಸಿದಾಗ ಗ್ರಾಮದ ಮಹಿಳೆಯರು ಮತ್ತು ಯುವಕರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ನಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಗ್ರಾಮದಲ್ಲಿ ರಸ್ತೆ, ಚರಂಡಿ ಮತ್ತು ಸ್ಮಶಾನ ಸೇರಿದಂತೆ ಹಲವು ಮೂಲಸೌಕರ್ಯಗಳ…
ಗುಂಡ್ಲುಪೇಟೆಯಲ್ಲಿ ಗೀತಾಮಹದೇವಪ್ರಸಾದ್ ಮತ ಯಾಚನೆ
April 27, 2018ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ದಿ ಸಾಕಷ್ಟು ಆಗಿದ್ದು, ಮತ್ತಷ್ಟು ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಸಚಿವೆ ಡಾ.ಎಂ.ಸಿ.ಮೋಹನಕುಮಾರಿ (ಗೀತಾಮಹದೇವಪ್ರಸಾದ್), ತಾಲೂಕಿನ ಅಣ್ಣೂರು, ಅಣ್ಣೂರುಕೇರಿ, ಚಿಕ್ಕಎಲಚೆಟ್ಟಿ, ಮಾಲಾಪುರ, ಬಾಚಹಳ್ಳಿ, ಸೋಮನಪುರ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಜಗದೀಶಮೂರ್ತಿ, ಜಿಪಂ ಸದಸ್ಯರಾದ ಕೆ.ಎಸ್.ಮಹೇಶ್, ಪಿ.ಚನ್ನಪ್ಪ, ಬಿ.ಕೆ.ಬೊಮ್ಮಯ್ಯ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಮುಖಂಡರಾದ ಎಚ್.ಎಂ.ಗಣೇಶ್ಪ್ರಸಾದ್. ಮುದ್ದಪ್ಪ ಹಾಗೂ ಇತತರು ಇದ್ದರು.
ಕಾಂಗ್ರೆಸ್ನ ಗೀತಾಮಹದೇವಪ್ರಸಾದ್, ಜೆಡಿಎಸ್-ಬಿಎಸ್ಪಿ ಅಭ್ಯರ್ಥಿ ಗುರುಪ್ರಸಾದ್ ನಾಮಪತ್ರ ಸಲ್ಲಿಕೆ
April 24, 2018ಗುಂಡ್ಲುಪೇಟೆ: ಇಲ್ಲಿನ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಸಾದ್ ಹಾಗೂ ಜೆಡಿಎಸ್ -ಬಿಎಸ್ಪಿ ಮೈತ್ತಿಕೂಟದ ಅಭ್ಯರ್ಥಿ ಸೋಮಹಳ್ಳಿ ಎಸ್.ಗುರುಪ್ರಸಾದ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೊದಲಿಗೆ ಸಚಿವೆ ಗೀತಾಮಹದೇವ ಪ್ರಸಾದ್ ಹಾಗೂ ಪುತ್ರ ಹೆಚ್.ಎಂ. ಗಣೇಶ್ ಪ್ರಸಾದ್ ತಮ್ಮ ಕುಟುಂಬ ಸದಸ್ಯರೊಡ ಗೂಡಿ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ಪಾರ್ವತಾಂಬೆಗೆ ಪೂಜೆ ಸಲ್ಲಿಸಿ ನಂತರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಜಯನಾರಾಯಣಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಲ್ಲಿ ಸಂಸದ ಆರ್. ಧ್ರುವನಾರಾಯಣ್ ಸಾಥ್ ನೀಡಿದರು. ನಂತರ ಪಕ್ಷದ ಮುಖಂಡರು…