ಮೈಸೂರು: ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಉಪ ವಿಭಾಗಾಧಿಕಾರಿ ಕಚೇರಿ ಬುಧವಾರ ಅಕ್ಷರಶಃ ಜನಜಾತ್ರೆಯಂತಾಗಿತ್ತು. ಗ್ರೀನ್ ಬಡ್ಸ್ ಸಂಸ್ಥೆಯ ಅಧಿಕ ಬಡ್ಡಿ ಆಮಿಷಕ್ಕೆ ಒಳಗಾಗಿ ಕಷ್ಟಾರ್ಜಿತ ಹಣವನ್ನೆಲ್ಲಾ ಠೇವಣಿ ಇರಿಸಿ ಕಳೆದುಕೊಂಡಿರುವ ರಾಜ್ಯದ ವಿವಿಧೆಡೆಯ ಸಾವಿರಾರು ಹೂಡಿಕೆದಾರರು ತಮ್ಮ ಹಣ ವಾಪಸ್ ಕೊಡಿಸುವಂತೆ ಮನವಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಹೆಚ್.ಎನ್. ಶಿವೇಗೌಡರ ಕಚೇರಿಗೆ ಮುಗಿಬಿದ್ದಿದ್ದರು. ಕಳೆದೊಂದು ತಿಂಗಳಿಂದ ಹೂಡಿಕೆ ವಾಪಸ್ ಕೋರಿ ಮನವಿ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈವರೆಗೆ 1.18 ಲಕ್ಷ ಠೇವಣಿ ಬಾಂಡ್ಗಳು ಸಲ್ಲಿಕೆಯಾಗಿವೆ. ಬುಧವಾರ ಒಂದೇ…