ಗುಂಡ್ಲುಪೇಟೆ: ತಾಲೂಕಿನ ಹುತ್ತೂರು ಕೆರೆಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಭೇಟಿ ನೀಡಿ ಕೆರೆ ಗಳಿಗೆ ನದಿ ಮೂಲದಿಂದ ನೀರು ತುಂಬಿ ಸುವ ಕಾಮಗಾರಿಯನ್ನು ಪರಿಶೀಲಿಸಿದರು. ತಾಲೂಕಿನ ಹುತ್ತೂರು ಕೆರೆಯಿಂದ ಸಮೀ ಪದ ವಡ್ಡಗೆರೆ ಕೆರೆಗೆ ನೀರೆತ್ತಲು ಪಂಪ್ ಹೌಸ್ ನಿರ್ಮಾಣ ಹಾಗೂ ಪೈಪ್ ಲೈನ್ ಕಾಮಗಾರಿಗಳ ಬಗ್ಗೆ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್ ರಾಜೇಂದ್ರಪ್ರಸಾದ್ ಅವರಿಂದ ಮಾಹಿತಿ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ನಿರಂಜನಕುಮಾರ್, ಹುತ್ತೂರು ಕೆರೆ ಯಿಂದ ವಡ್ಡಗೆರೆಕೆರೆಗೆ ಮಾತ್ರ ಪೈಪ್ ಲೈನ್ ಅಳವಡಿಸಿ…
ವಿದ್ಯುತ್ ಸಂಪರ್ಕ ಕಡಿತ ಖಂಡಿಸಿ ಗುಂಡ್ಲುಪೇಟೆ, ಬೇಗೂರಿನಲ್ಲಿ ಅನ್ನದಾತನ ಪ್ರತಿಭಟನೆ
June 23, 2018ಗುಂಡ್ಲುಪೇಟೆ: ರೈತರ ವಿದ್ಯುತ್ ಬಿಲ್ ಬಾಕಿ ಕಟ್ಟುವವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುತ್ತಿ ರುವ ಸೆಸ್ಕ್ ಕ್ರಮದ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಸಮಾ ವೇಶಗೊಂಡ ರೈತ ಸಂಘದ ಪದಾಧಿಕಾರಿ ಗಳು ಮತ್ತು ಮುಖಂಡರು ಮತ್ತು ಕಾರ್ಯ ಕರ್ತರು ಪ್ರಮುಖ ರಸ್ತೆಗಳಲ್ಲಿ ಸಾಗಿ ನಂತರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ರಚಿಸಿ ಸೆಸ್ಕ್ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗಿ, ಕೆಲ ಕಾಲ ರಸ್ತೆ ತಡೆ ನಡೆಸಿ ಸೆಸ್ಕ್ ಅಧಿಕಾರಿಗಳ ವಿರುದ್ದ…
ಗುಂಡ್ಲುಪೇಟೆ ಬಳಿ ಬೈಕ್ಗಳ ಮುಖಾಮುಖಿ ಡಿಕ್ಕಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು
June 23, 2018ಗುಂಡ್ಲುಪೇಟೆ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರೂ ಸ್ಥಳದಲ್ಲಿಯೇ ಸಾವಿಗೀಡಾ ಗಿರುವ ಧಾರುಣ ಘಟನೆ ತಾಲೂಕಿನ ತೆಂಕಲಹುಂಡಿ ಸಮೀಪ ನಡೆದಿದೆ. ತಾಲೂಕಿನ ತೆಂಕಲಹುಂಡಿ ಗ್ರಾಮದ ಶಿವು, ಗುಂಡ್ಲುಪೇಟೆಯ ಮಹದೇವು ಮೃತಪಟ್ಟವರು. ಶಿವು ತನ್ನ ಸ್ನೇಹಿತರಾದ ಸಚಿನ್ ಹಾಗೂ ರಮೇಶ್ ಎಂಬುವರೊಡನೆ ಬೈಕಿನಲ್ಲಿ ಗ್ರಾಮದತ್ತ ತೆರಳುತ್ತಿದ್ದರು.ಈ ವೇಳೆ ಇನ್ನೊಂದು ಬೈಕಿನಲ್ಲಿ ಎದುರಿನಿಂದ ಬರುತ್ತಿದ್ದ ಪಟ್ಟಣದ ವಾಸಿ ಪೇಂಟರ್ ಮಹದೇವು ಎಂಬುವರ ಬೈಕ್ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎರಡೂ ಬೈಕ್ಗಳ ಡಿಕ್ಕಿಯ ರಭಸಕ್ಕೆ ಎರಡೂ ಬೈಕುಗಳ ಸವಾರರಾದ…
ಯೋಗದಿಂದ ರೋಗ ಮುಕ್ತ: ಶಾಸಕ ನಿರಂಜನಕುಮಾರ್
June 21, 2018ಗುಂಡ್ಲುಪೇಟೆ: ಯೋಗಾಭ್ಯಾಸ ಮತ್ತು ಧ್ಯಾನ ಮಾಡುವು ದರಿಂದ ಮಾನಸಿಕ ಸುಸ್ಥಿರತೆ ಹಾಗೂ ಉತ್ತಮ ಆರೋಗ್ಯವನ್ನು ಹೊಂದಬಹು ದಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಮದ್ದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿರುವ ಮಹಾಮನೆ ಯೋಗ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಶ್ರೀ ಮದ್ದಾ ನೇಶ್ವರ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದರು. ಇಂದಿನ ಆಹಾರ ಪದ್ಧತಿ ಹಾಗೂ ಜೀವನ ವಿಧಾನಗಳಿಂದ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಸಂಬಂಧಿತ…
ವಿದ್ಯುತ್ ಸ್ಪರ್ಶದಿಂದ ಆನೆ ಸಾವು
June 21, 2018ಗುಂಡ್ಲುಪೇಟೆ: ಆಹಾರವನ್ನು ಅರಸಿ ಬಂದ ಹೆಣ್ಣಾನೆ ಯೊಂದು ವಿದ್ಯುತ್ ಸ್ಪರ್ಶಿಸಿ ಸಾವಿ ಗೀಡಾಗಿರುವ ದುರ್ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಗೊಳ ಪಡುವ ಹೆಡಿಯಾಲ ಅರಣ್ಯ ಪ್ರದೇಶ ದಲ್ಲಿ ಬುಧವಾರ ನಡೆದಿದೆ. ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿ ಗೊಳಪಡುವ ಹೆಡಿಯಾಲ ಉಪವಿಭಾ ಗದ ಕಾಡಂಚಿನ ಗ್ರಾಮದ ಚಿಕ್ಕಬರಗಿ ಗ್ರಾಮದ ಶಿವಾಲಮ್ಮ ಎಂಬುವರ ಜಮೀನಿ ನಲ್ಲಿ ಈ ಘಟನೆ ನಡೆದಿದ್ದು, ಇವರ ಜಮೀನಿನಲ್ಲಿ ಹತ್ತಿ ಬೆಳೆಯಲಾಗಿತ್ತು. ಜಮೀನಿನ ಸುತ್ತಲೂ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಆಹಾರವನ್ನರಸಿ ಜಮೀನಿಗೆ…
ಗರಗನಹಳ್ಳಿ ಬಳಿ ಕರಡಿ ಪ್ರತ್ಯಕ್ಷ
June 21, 2018ಗುಂಡ್ಲುಪೇಟೆ: ತಾಲೂಕಿನ ಗರಗನಹಳ್ಳಿ ಸಮೀಪ ಕರಡಿಯೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರನ್ನು ಭೀತಿಗೊಳಿಸಿರುವ ಘಟನೆ ನಡೆದಿದೆ.ಬೆಂಗಳೂರು-ನೀಲಗಿರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗರಗನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಕೆಲ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಘಟನೆ ವಿವರ: ಗ್ರಾಮದ ವಾಸಿ ಮಹದೇವಪ್ಪ ಎಂಬುವರ ಜಮೀನಿನಲ್ಲಿ ಬುಧವಾರ ಮಧ್ಯಾಹ್ನ ಕರಡಿಯೊಂದು ಕಾಣಿಸಿಕೊಂಡು ಜಮೀನಿನ ಮಾಲೀಕ ಮಹದೇವಪ್ಪ ಅವರ ಮೇಲೆ ದಾಳಿ ನಡೆಸಲು ಪ್ರಯತ್ನಿಸಿದೆ. ಅಷ್ಟರಲ್ಲಿ ಕಿರುಚಿಕೊಂಡಾಗ ಸುತ್ತಮುತ್ತಲಿನ ಸಾರ್ವಜನಿಕರು ಬಂದು ಕರಡಿಯನ್ನು ಓಡಿಸಿದ್ದಾರೆ. ಅಲ್ಲಿಂದ ಓಡಿಹೋದ ಕರಡಿಯು ಪಕ್ಕದಲ್ಲಿರುವ ಬೇಲಿಯಲ್ಲಿ…
ಬಸವ ತತ್ವ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಟ
June 20, 2018ಗುಂಡ್ಲುಪೇಟೆ: ಮಾನವೀಯ ಮೌಲ್ಯ ಹಾಗೂ ಸಮಾನತೆಯನ್ನು ಸಾರಿದ ಬಸವ ತತ್ವ ವಿಶ್ವ ದಲ್ಲಿಯೇ ಅತ್ಯಂತ ಶ್ರೇಷ್ಠವಾಗಿದ್ದು, ಇದರ ಅನುಕರಣೆಯಿಂದ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ಸೋಮಹಳ್ಳಿ ವೀರಸಿಂಹಾಸನ ಶಿಲಾಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಪ್ಪ ಸ್ವಾಮೀಜಿ ಅಭಿಪ್ರಾಯಪಟ್ಟರು. ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವಾ ನುಭವ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜ್ಜಳ ಮಹಾರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ದ್ದರೂ ಸಹಾ ಅಧಿಕಾರ ದುರುಪಯೋಗ ಮಾಡಿಕೊಳ್ಳದೆ, ಸರ್ಕಾರದ ಬೊಕ್ಕಸದ ಹಣವನ್ನು ಬಳಸದೆಯೇ ಕಾಯಕದ ಮೂಲಕ ಸ್ವಯಾರ್ಜಿತವಾಗಿ ಗಳಿಸಿದ ಹಣದಿಂದ ಧಾರ್ಮಿಕ,…
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಉಳಿಸಿ: ಶಾಸಕರ ಕರೆ
June 18, 2018ಗುಂಡ್ಲುಪೇಟೆ: ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಮಾರಕ ವಾಗುತ್ತಿದೆ. ಆದ್ದರಿಂದ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ನಾವು ನಿಲ್ಲಿಸುವುದ ರೊಂದಿಗೆ ಪರಿಸರದ ಸಮ ತೋಲನೆಯನ್ನು ಕಾಪಾಡಲು ಮುಂದಾಗಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಪಟ್ಟಣದ ಪುರಸಭೆಯ ವತಿಯಿಂದ ಆಯೋಜಿಸಿದ್ದ ಪ್ಲಾಸ್ಟಿಕ್ ನಿಷೇಧ ಹಾಗೂ ಅವುಗಳ ಬಳಕೆಯಿಂದ ಆಗುವ ದುಷ್ಪರಿಣಾಮ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾ ಟಿಸಿ ಮಾತನಾಡಿದರು. ನಮ್ಮ ದಿನ ನಿತ್ಯದ ಬಳಕೆಯಲ್ಲಿ ಪ್ಲಾಸ್ಟಿಕ್ ಬಳಕೆ ದಿನೇ ದಿನೇ ಹೆಚ್ಚಾಗುತ್ತಿದೆ.ಇದರಿಂದ ನಾವು ಪರಿಸರಕ್ಕೆ ಹಾನಿ ಮಾಡುತ್ತಿದ್ದೇವೆ ಎಂದು ಗೊತ್ತಿದ್ದರೂ…
ಕ್ಷೇತ್ರದ ಉಳಿದ ಕೆರೆಗಳಿಗೆ ನೀರು ತುಂಬಿಸುವ ಚಿಂತನೆ ಇದೆ
June 18, 2018ಗುಂಡ್ಲುಪೇಟೆ: ಕ್ಷೇತ್ರದಲ್ಲಿನ ಉಳಿದ ಕೆರೆಗಳಿಗೆ ನೀರು ತುಂಬಿಸುವುದು, ಶುದ್ಧ ಕುಡಿ ಯುವ ನೀರು, ಉತ್ತಮ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು. ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹರವೆ ಹೋಬಳಿಯ ಕಲ್ಪುರ, ದೇಶೀಗೌಡನಪುರ, ಮಲೆಯೂರು ಹಾಗೂ ಹರವೆ ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗಳಿಗೆ ತೆರಳಿದ ಶಾಸಕ ಸಿ.ಎಸ್. ನಿರಂಜನಕುಮಾರ್ ಮತದಾರರಿಗೆ ಕೃತಜ್ಞತೆ ಅರ್ಪಿಸಿ ಮಾತನಾಡಿ, ಕುಡಿಯುವ ನೀರಿನ ಕೊರತೆ, ಅಂತರ್ಜಲ ಇಳಿಕೆ ಮುಂತಾದ ಕಾರಣಗಳಿಂದ ಬರಪೀಡಿತ ಹೋಬಳಿಯ…
ದಾನ-ಧರ್ಮದ ಸಂಕೇತ ರಂಜಾನ್
June 17, 2018ಜಿಲ್ಲಾದ್ಯಂತ ಸಡಗರ, ಸಂಭ್ರಮದ ರಂಜಾನ್ ಆಚರಣೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಚಾಮರಾಜನಗರ: ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯ ದವರು ಶ್ರದ್ಧಾ, ಭಕ್ತಿಯಿಂದ ಶನಿವಾರ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿದರು.ರಂಜಾನ್ ತಿಂಗಳ ಕೊನೆಯಲ್ಲಿ ಚಂದ್ರ ದರ್ಶನ ಆದ ಮರುದಿನ ಈ ಹಬ್ಬವನ್ನು ಪ್ರತಿವರ್ಷ ಆಚರಿಸಲಾಗುತ್ತದೆ. ಹಬ್ಬದ ಅಂಗವಾಗಿ ಬೆಳಿಗ್ಗೆ ಮುಸ್ಲಿಂ ಬಾಂಧವರು ಹೊಸಬಟ್ಟೆ ತೊಟ್ಟು ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು. ಪ್ರಾರ್ಥನೆ ಬಳಿಕ, ಒಬ್ಬರೊಬ್ಬರು ಅಪ್ಪಿಕೊಂಡು…