ಮೈಸೂರು: ಕೃಷ್ಣ ರಾಜ ಕ್ಷೇತ್ರಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಂಡಿರುವ ಶಾಸಕ ಎಸ್.ಎ.ರಾಮ ದಾಸ್ ಭಾನುವಾರ ತಮ್ಮ ತಂಡದೊಂ ದಿಗೆ ಗುಂಡೂರಾವ್ನಗರದ ಗವಿಮಠದ ಎದುರಿನ ಭಾಗದಲ್ಲಿ ಸ್ವಚ್ಛತಾ ಕಾರ್ಯ ಕ್ರಮ ಕೈಗೊಂಡರು. 55ನೇ ವಾರ್ಡ್ ವ್ಯಾಪ್ತಿಯ ಮೇದರ ಕೇರಿ ಭಾಗದಲ್ಲಿ ಸದ್ಭಾವನಾ ದಿನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಈ ವ್ಯಾಪ್ತಿ ಯಲ್ಲಿ ಕಾರ್ಯ ನಿರ್ವಹಿಸಬೇಕಾದ 39 ಮಂದಿ ಪೌರ ಕಾರ್ಮಿಕರ ಪೈಕಿ 9 ಮಂದಿ ಪೌರ ಕಾರ್ಮಿಕರು ಮಾತ್ರ ಹಾಜರಿದ್ದು ಕೆಲಸ ನಿರ್ವಹಿಸುತ್ತಿದ್ದದ್ದು ಹಾಜರಾತಿ ಪುಸ್ತಕ…