ಮಾನವೀಯತೆ ಜೊತೆಗೆ ಹೆಂಗರುಳು ಇರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಬಡವರು-ಕಷ್ಟದಲ್ಲಿರುವವರನ್ನು ಕಂಡರೆ ಮನ ಕರಗಿ ಕಣ್ಣೀರು ಬರುತ್ತೆ. ದೇಹಿ ಎಂದು ಬಂದವರಿಗೆ ಕೈಲಾಗುವ ನೆರವು ನೀಡುವುದು, ಅಧಿಕಾರದಲ್ಲಿದ್ದಷ್ಟು ಕಾಲ ಜನ ಮೆಚ್ಚುವ ಕೆಲಸ ಮಾಡುವ ಕಳಕಳಿ ಇದ್ದಂತೆ ಕಾಣುತ್ತಿದೆ. ಗ್ರಾಮೀಣ ಜನರ ಜೀವನ ಹಾಗೂ ನಾಡಿ-ಮಿಡಿತಬಲ್ಲ ಅವರಿಗೆ ಸಹಾಯ ಮಾಡುವ ಹೃದಯ ಶ್ರೀಮಂತಿಕೆಯು ಇದೆ. ಶಕ್ತಿ ಕೇಂದ್ರವೆಂದು ಕರೆಯುವ ವಿಧಾನಸೌಧ ಹಾಗೂ ಅದರ ಸುತ್ತ ಮುತ್ತ ಇರುವ ಸರ್ಕಾರಿ ಕಛೇರಿ ಗಳು ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ. ವಿಧಾನಸೌಧ ಒಂದು…
ಬಜೆಟ್ನಲ್ಲಿ ರೈತರ ಸಾಲಮನ್ನಾ ಗೊಂದಲಕ್ಕೆ ತೆರೆ
June 14, 2018ರಾಜ್ಯದಲ್ಲಿ ಪ್ಲಾನಿಂಗ್ ಕಮೀಷನ್ ಉತ್ತಮಗೊಳಿಸಲು ಯೋಜನೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಜಾರಿಗೆ ಚಿಂತನೆ: ಹೆಚ್ಡಿಕೆ ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ) : ‘ರೈತರ ಸಾಲಮನ್ನಾ ವಿಚಾರದಲ್ಲಿ ಗೊಂದಲ ಬೇಡ. ಈಗಾಗಲೇ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚಿಸ ಲಾಗಿದ್ದು, ಬಜೆಟ್ನಲ್ಲಿ ಯಾವ ಪ್ರಮಾಣದ ಸಾಲಮನ್ನಾ ಮಾಡಲಾಗುವುದು ಎಂಬು ದರ ಬಗ್ಗೆ ತಿಳಿಸುತ್ತೇನೆ’ ಎಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಾಗಮಂಗಲ ತಾಲೂಕಿನ ಆದಿಚುಂಚನ ಗಿರಿ ಕ್ಷೇತ್ರದ ಶ್ರೀಕಾಲಭೈರವೇಶ್ವರಸ್ವಾಮಿಗೆ ಅಮಾವಾಸ್ಯೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿ ಗಾರರೊಂದಿಗೆ ಅವರು ಮಾತನಾಡಿದರು.ಸಾಲಮನ್ನಾ…
ಅಮಾವಾಸ್ಯೆ ಪೂಜೆ ಸಲ್ಲಿಸಿದ ಎಚ್ಡಿಕೆ ದಂಪತಿ
June 14, 2018ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ): ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಯೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ನಾಗಲಿಂಗೇಶ್ವರಸ್ವಾಮಿ ಸನ್ನಿಧಿ ಯಲ್ಲಿ ಆಯೋಜಿಸಲಾಗಿದ್ದ ಮೃತ್ಯುಂ ಜಯ ಹೋಮದ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಶ್ರೀ ಕಾಲಭೈರವೇಶ್ವರ ಸ್ವಾಮಿಯ ಗರ್ಭ ಗುಡಿಯ ಮುಂಭಾಗದಲ್ಲಿ ಹೆಚ್.ಡಿ. ಕುಮಾರಸ್ವಾಮಿ ದಂಪತಿ ಸಮ್ಮುಖದಲ್ಲಿ ನಡೆದ ವಿಶೇಷ ಪೂಜೆಯನ್ನು ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ…
ಮತ್ತೊಂದು ತನಿಖಾ ಸಂಸ್ಥೆ ಸ್ಥಾಪನೆಗೆ ಸಿದ್ಧತೆ
June 13, 2018ಬೆಂಗಳೂರು: ಅಧಿಕಾರಿಗಳ ಭ್ರಷ್ಟಾಚಾರ ಹತ್ತಿಕ್ಕಲು ಲೋಕಾಯುಕ್ತ, ಎಸಿಬಿಗೆ ಪರ್ಯಾಯ ವಾಗಿ ಮತ್ತೊಂದು ತನಿಖಾ ಸಂಸ್ಥೆ ಸ್ಥಾಪಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ವಿಶ್ವದ ಮುಂದುವರೆದ ರಾಷ್ಟ್ರಗಳಲ್ಲಿ ಇರುವ ತನಿಖಾ ಸಂಸ್ಥೆಗಳನ್ನು ಮಾದರಿ ಯಾಗಿ ಇಟ್ಟುಕೊಂಡು ಒಂಬಡ್ಸ್ಮನ್ ಮಾದರಿಯಲ್ಲಿ ಸಂಸ್ಥೆ ಅಸ್ತಿತ್ವಕ್ಕೆ ಬರ ಲಿದೆ. ಸರ್ಕಾರಿ ಮಟ್ಟದಲ್ಲಿರುವ ಆಯ್ದ 10 ಶುದ್ಧ ಹಸ್ತದ ಅಧಿಕಾರಿಗಳು ಈ ಸಂಸ್ಥೆಯ ಜವಾಬ್ದಾರಿ ಹೊರುತ್ತಾರೆ. ಕಾನೂನಾತ್ಮಕವಾಗಿ ಸಂಸ್ಥೆಗೆ ಬಲ ತುಂಬಲು ಮುಖ್ಯಮಂತ್ರಿ ಅವರು ನಿರ್ಧ ರಿಸಿದ್ದಾರೆ. ಇದಕ್ಕಾಗಿ ಒಂದು ಮಸೂದೆ ತರಲೂ ಸಿದ್ಧವಿದ್ದಾರೆ…
ರಾಜ್ಯ ಯೋಜನಾ ಮಂಡಳಿ ಅಧ್ಯಕ್ಷರನ್ನಾಗಿ ಇನ್ಫೋಸಿಸ್ ಮುಖ್ಯಸ್ಥ ನಾರಾಯಣಮೂರ್ತಿ ನೇಮಕಕ್ಕೆ ನಿರ್ಧಾರ
June 13, 2018ಬೆಂಗಳೂರು: ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರನ್ನಾಗಿ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರನ್ನು ನೇಮಕ ಮಾಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮಂಡಳಿಯಲ್ಲಿ ನಾರಾಯಣಮೂರ್ತಿ ಅವರು ಹೆಸರಿಸುವ ತಜ್ಞರೇ ಇರಲಿದ್ದಾರೆ. ಇದುವರೆಗೂ ಮಂಡಳಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗುತ್ತಿತ್ತು. ಇನ್ನು ಮುಂದೆ ಮಂಡಳಿಗೆ ಸಂಪುಟ ದರ್ಜೆ ಸ್ಥಾನ ನೀಡಿ, ವಿಧಾನಸೌಧ ಅಥವಾ ವಿಕಾಸಸೌಧದಲ್ಲಿ ಕೊಠಡಿ ನೀಡಲಾಗುವುದು. ನಿರುದ್ಯೋಗ ಸಮಸ್ಯೆ ಬಗೆಹರಿಸಲು ರಾಜ್ಯದಲ್ಲಿ ಉದ್ಯಮಗಳ ಸ್ಥಾಪನೆ ಮತ್ತು ಸಂಪನ್ಮೂಲ ಕ್ರೋಢೀಕರಣ, ಹೊಸ ಯೋಜನೆಗಳ ಅನುಷ್ಠಾನದ ಉದ್ದೇಶ ದಿಂದ ಇದೇ ಮೊದಲ…
ಭ್ರಷ್ಟಾಚಾರದ ಬಗ್ಗೆ ಬಾಯ್ಬಿಟ್ರೆ 2 ಸೆಕೆಂಡ್ನಲ್ಲಿ ಅಧಿಕಾರದಿಂದ ಕೆಳಗಿಳಿಸ್ತಾರೆ!
June 12, 2018ಬೆಂಗಳೂರು: ಮಾರಕ ಕ್ಯಾನ್ಸರ್ನಂತೆ ಹಬ್ಬಿರುವ ಭ್ರಷ್ಟಾಚಾರವನ್ನು ತಕ್ಷಣವೇ ಮಟ್ಟ ಹಾಕಲು ಹೋದರೆ ಎರಡು ಸೆಕೆಂಡ್ಗಳಲ್ಲಿ ಅಧಿಕಾರದಿಂದ ಕೆಳ ಗಿಳಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಇಂದಿಲ್ಲಿ ಅಸಹಾಯಕತೆ ತೋಡಿಕೊಂಡಿದ್ದಾರೆ. ವಿಧಾನಸೌಧದ 3ನೇ ಮಹಡಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಬಹುದು. ಆದರೆ, ಆಳವಾಗಿ ಬೇರೂರಿರುವ ಭ್ರಷ್ಟಾ ಚಾರವನ್ನು ಬುಡಸಮೇತ ಕಡಿಯಲು ಹೋದರೆ ಅದು ನಮ್ಮ ಮೇಲೇ ಬೀಳುತ್ತದೆ. ಭ್ರಷ್ಟಾಚಾರವನ್ನು ಸಂಪೂರ್ಣ ವಾಗಿ ಅಲ್ಲದಿದ್ದರೂ, ಅದನ್ನು ತೊಡೆದುಹಾಕಲು ಸಾಕಷ್ಟು ಸಮಯಾವಕಾಶ ಬೇಕು ಎಂದಿದ್ದಾರೆ. ಸ್ವಾತಂತ್ರ್ಯ ಯೋಧರು ಹಾಗೂ ಗಾಂಧಿ ಅನುಯಾಯಿಗಳು ನಗರದ ಗಾಂಧಿ…
ಜಿಟಿಡಿಗೆ ಉನ್ನತ ಶಿಕ್ಷಣ ಬದಲು ಸಹಕಾರ ಸಾಧ್ಯತೆ
June 12, 2018ಬೆಂಗಳೂರು: ಉನ್ನತ ಶಿಕ್ಷಣ ಖಾತೆ ಬಗ್ಗೆ ಆಸಕ್ತಿ ತೋರದ ಜಿ.ಟಿ. ದೇವೇಗೌಡರಿಗೆ ಸಹಕಾರಿ ಇಲಾಖೆ ಹೊಣೆಗಾರಿಕೆ ವಹಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಪುಟದ ಇನ್ನಿತರ ಕೆಲವರ ಖಾತೆ ಬದಲಾವಣೆಗೂ ಮುಂದಾಗಿ ದ್ದಾರೆ. ದೇವೇಗೌಡರಿಗೆ ನೀಡಲಾದ ಉನ್ನತ ಶಿಕ್ಷಣವನ್ನು ಬಂಡೆಪ್ಪ ಕಾಶೆಂಪೂರ್ ಅವರಿಗೆ ನೀಡಿ ಸಹಕಾರಿ ಖಾತೆಯನ್ನು ಗೌಡರಿಗೆ ನೀಡಲಿ ದ್ದಾರೆ. ಇದೇ ಸಂದರ್ಭದಲ್ಲಿ ಕೆಲವರ ಖಾತೆಗಳಲ್ಲಿ ಸಣ್ಣಪುಟ್ಟ ಬದಲಾವಣೆ ಸಾಧ್ಯತೆ ಇವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ…
ಮೈಸೂರಿನ ಇನ್ಫೋಸಿಸ್ ಗೆಸ್ಟ್ ಹೌಸ್ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು
June 11, 2018ಕೊಡಗಿನ ರೆಸಾರ್ಟ್ವೊಂದರಲ್ಲಿ ಅತೃಪ್ತ ಸಚಿವ ಜಿ.ಟಿ.ದೇವೇಗೌಡ ಮನವೊಲಿಕೆಗೂ ಹೆಚ್.ಡಿ.ಕುಮಾರಸ್ವಾಮಿ ಯತ್ನ ಮೈಸೂರು: ನಿರೀಕ್ಷಿತ ಖಾತೆ ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರಂತರ ಹೆಣಗಾಡುತ್ತಿದ್ದಾರೆ. ಶನಿವಾರ ಈ ಇಬ್ಬರೂ ಸಚಿವರುಗಳ ಬೆಂಬಲಿಗರು ಮೈಸೂರು ಹಾಗೂ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಫೋನ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಜಿ.ಟಿ.ದೇವೇಗೌಡ ಮತ್ತು ಸಿ.ಎಸ್.ಪುಟ್ಟರಾಜು ಅವರು ಅಜ್ಞಾತ…
ಹೆಚ್ಡಿಕೆ ಮಾದರಿಯಲ್ಲೇ ಗ್ರಾಮ ವಾಸ್ತವ್ಯ ಹರದನಹಳ್ಳಿಯಲ್ಲಿ ಸಚಿವ ಸಾರಾ ಮಹೇಶ್ ಹೇಳಿಕೆ
June 11, 2018ಭೇರ್ಯ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮವಾಸ್ತವ್ಯ ಮಾದರಿಯಲ್ಲೇ ತಾನೂ ತಾಲೂಕಿನಲ್ಲಿ ಗ್ರಾಮವಾಸ್ತವ್ಯ ಕಾರ್ಯ ಕ್ರಮ ಆರಂಭಿಸುವುದಾಗಿ ಪ್ರವಾಸೋ ದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್ ಪ್ರಕಟಿಸಿದರು. ಅವರು ಕೆ.ಆರ್.ನಗರ ತಾಲೂಕು ಹರದನಹಳ್ಳಿಯಲ್ಲಿ ಭಾನುವಾರ ಗ್ರಾಮಸ್ಥ ರಿಂದ ಅಭಿನಂದನೆ ಸ್ವೀಕರಿಸಿ ಮಾತ ನಾಡಿದರು. ಹರದನಹಳ್ಳಿಯಿಂದಲೇ ಗ್ರಾಮವಾಸ್ತವ್ಯ ಕಾರ್ಯಕ್ರಮ ಪ್ರಾರಂಭ ಗೊಳ್ಳಲಿದ್ದು, ಜುಲೈ 6 ರಂದು ರಾತ್ರಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾಡಳಿದ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡ ಲಾಗುವುದು. ಜು.7ರಂದು ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ 60…
ಮೊದಲು ಮಂತ್ರಿ ಸ್ಥಾನ, ನಂತರ ವಿಧಾನಸೌಧ 3ನೇ ಮಹಡಿ ಕಚೇರಿ, ಸರ್ಕಾರಿ ಮನೆ ಕೇಳುತ್ತಾರೆ…
June 10, 2018ಬೆಂಗಳೂರು: ಸಚಿವ ರಾಗಿ ಸೇವೆ ಸಲ್ಲಿಸಲು ಉನ್ನತ ಶಿಕ್ಷಣ, ನೀರಾವರಿಗಿಂತ ಉತ್ತಮ ಖಾತೆಗಳು ಬೇಕೇ ಎಂದು ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ತಮ್ಮ ಪಕ್ಷದ ಸಚಿವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಜನರಿಗೆ ಸಮೀಪವಾಗಿರುವ ಇಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸಿ ತಮ್ಮ ಸಾಮಥ್ರ್ಯವನ್ನು ತೋರಿಸಬೇಕು, ಇಲ್ಲವೇ ತಮಗೆ ಹಣಕಾಸು, ಇಂಧನ, ಸಾರಿಗೆ ಯಂತಹ ಇಲಾಖೆಗಳೇಬೇಕೆಂದು ಕೇಳ ಬೇಕು. ಮೊದಲು ಮಂತ್ರಿ ಸ್ಥಾನ ಕೇಳು ತ್ತಾರೆ, ಆನಂತರ ವಿಧಾನ ಸೌಧದಲ್ಲಿ ಮೂರನೇ ಮಹಡಿಯ ಕಚೇರಿ ಕೇಳು ತ್ತಾರೆ. ಆನಂತರ…