ಬೆಂಗಳೂರು: ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮವಾಗಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಗುಲಾಮ್ನಬಿ ಆಜಾದ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕರು ಪರಸ್ಪರ ಮಾತುಕತೆ ನಡೆಸಿ ಸಮಸ್ಯೆಗೆ ಅವಕಾಶವಿಲ್ಲದಂತೆ ಸಂಪುಟ ವಿಸ್ತರಣೆ ಮಾಡಲು ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಇಂದು ಅಥವಾ ನಾಳೆಯೊಳಗೆ ಎಲ್ಲವೂ ಇತ್ಯರ್ಥವಾಗಲಿದೆ ಎಂದು ಹೇಳಿದರು. ವಿದೇಶ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿಯವರು ದೆಹಲಿಗೆ ಮರಳಿದ ನಂತರ ಸಚಿವ ಸಂಪುಟ ವಿಸ್ತರಣೆ…
ಜಿಲ್ಲಾ ಕೇಂದ್ರಕ್ಕೆ ಹೆಚ್ಡಿಕೆ ಭೇಟಿ ನೀಡುವರೇ?
May 28, 2018ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಆರು ತಿಂಗ ಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಪ್ರತೀತಿಯನ್ನು ಮೆಟ್ಟಿನಿಂತರವರು ಎಚ್.ಡಿ.ಕುಮಾರಸ್ವಾಮಿ. ಈಗ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿರುವ ಕಾರಣ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಯಾವಾಗ ಭೇಟಿ ನೀಡುತ್ತಾರೆ? ಶ್ರೀಚಾಮ ರಾಜೇಶ್ವರ ಸ್ವಾಮಿಯ ದರ್ಶನವನ್ನು ಯಾವಾಗ ಪಡೆಯುತ್ತಾರೆ? ಎಂಬ ಪ್ರಶ್ನೆ ಜಿಲ್ಲೆಯ ಜನರಲ್ಲಿ ಮೂಡಿದೆ. ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿಗಳು ಆರು ತಿಂಗಳೊಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಪ್ರತೀತಿ ಇತ್ತು. ಇದಕ್ಕೆ ಪೂರಕವಾಗಿ ಎಸ್.ಆರ್. ಬೊಮ್ಮಾಯಿ,…
ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರೈತರ ಸಾಲ ಮನ್ನಾ ಜೊತೆಗೆ ಜನಪರ ಯೋಜನೆಗಳ ಜಾರಿಗೆ ರೈತರ ಮನವಿ
May 27, 2018ಮೈಸೂರು: ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿರುವಂತೆ ರೈತರ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳುವ ಜೊತೆಗೆ ಜನಪರ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮನವಿ ಸಲ್ಲಿಸಿದೆ. ಸಂಘದ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಸಂಘದ ಪರವಾಗಿ ಮನವಿ ಸಲ್ಲಿಸಿದ್ದು, ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವಂತೆ ರೈತರ ಸಾಲ ಮನ್ನಾ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ರೈತ ಸಮುದಾಯದ ಸಂಕಷ್ಟ ಪರಿಹಾರಕ್ಕೆ ಸಾಲಮನ್ನಾ ಮಾತ್ರ…
ಕುಮಾರಸ್ವಾಮಿಗೆ ವಿಶ್ವಾಸ ಮತ
May 26, 2018ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದ ಎಚ್ ಡಿ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪಡೆಯುವಲ್ಲಿ ಯಶಸ್ವಿಯಾದರು. ಪ್ರತಿಪಕ್ಷ ಬಿಜೆಪಿಯ ಸಭಾತ್ಯಾಗದ ನಡುವೆಯೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಿದರು. ಆರು ತಿಂಗಳ ಮಟ್ಟಿಗೆ ಸರ್ಕಾರಕ್ಕೆ ಯಾವುದೇ ಗಂಡಾಂತರವಿಲ್ಲ. ರಾಜ್ಯಪಾಲರು, ಕುಮಾರಸ್ವಾಮಿಗೆ 15 ದಿನಗಳ ಕಾಲಾವಕಾಶ ನೀಡಿದ್ದರು. ಮುಖ್ಯಮಂತ್ರಿಯವರ ವಿಶ್ವಾಸ ಮತ ಮಂಡನೆ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ತಮ್ಮ ಮಾತು ಮುಗಿಸಿ, ಕಲಾಪವನ್ನು ಬಹಿಷ್ಕರಿಸಿ, ತಮ್ಮ ಪಕ್ಷದ ಸದಸ್ಯರೊಟ್ಟಿಗೆ…
ಜಮೀರ್ಗೆ ಕೈ ಕೊಟ್ರಿ, ಬಾಲಕೃಷ್ಣ, ಚಲುವರಾಯಸ್ವಾಮಿಗೆ ಕೈ ಕೊಟ್ರಿ…
May 26, 2018ಬೆಂಗಳೂರು: ಗೌಡರ ಕುಟುಂಬದ ವಿರುದ್ಧ ಇದ್ದ ತಮ್ಮ ಕೋಪವನ್ನು ಯಡಿಯೂರಪ್ಪ ಮುಂದುವರಿಸಿ, “ಜಮೀರ್ಗೆ ಕೈ ಕೊಟ್ರಿ, ಬಾಲಕೃಷ್ಣ ಚಲುವರಾಯಸ್ವಾಮಿಗೆ ಕೈ ಕೊಟ್ರಿ. ಅಧಿಕಾರಕ್ಕೆ ನೀವು ಏನು ಬೇಕಾದ್ರೂ ಮಾಡುತ್ತೀರಿ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ಉದ್ದೇಶಿಸಿ ನೀವು ತುಂಬಾ ತಪ್ಪು ಮಾಡಿದ್ದೀರಿ, ನೀವು ಅನರ್ಹ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಮಾಡಿದ್ದೀರಿ. ನೀವು ಮುಂದೆ ಪಶ್ಚಾತ್ತಾಪ ಪಡುತ್ತೀರಿ ಎಂದರು. 53 ಸಾವಿರ ಕೋಟಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಸಮಯ ಬಂದಾಗ ನಿಮ್ಮ ಆಡಳಿತಾವಧಿಯಲ್ಲಿ…
ಸಾಲ ಮನ್ನಾಕ್ಕೆ ಆತುರ ಬೇಡ
May 26, 2018ಬೆಂಗಳೂರು: ರೈತರ ನೋವು ಚೆನ್ನಾಗಿ ಗೊತ್ತು, ಅವರ ಸಾಲ ಮನ್ನಾ ಮಾಡುತ್ತೇನೆ. ಅದಕ್ಕೆಲ್ಲ ಸ್ವಲ್ಪ ಸಮಯಾವಕಾಶ ಬೇಕು. ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ಮಾಡಿ, ಅವರ ವಿಶ್ವಾಸ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುತ್ತೇನೆ. ಬಿಎಸ್ವೈ ಅವರಿಗೆ ಇರುವ ಆತುರ ನಮಗೆ ಇಲ್ಲ. ಸಂಪೂರ್ಣ ವಿಶ್ವಾಸ ಮತ ಪಡೆದ ಬಳಿಕ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಜಗದೀಶ್ ಶೆಟ್ಟರ್ ಹೇಳಿಕೆ ಉಲ್ಲೇಖಿಸಿ ಟಾಂಗ್ ಕೊಟ್ಟ ಸಿಎಂ ಕುಮಾರಸ್ವಾಮಿ, ದಯವಿಟ್ಟು ಉತ್ತರ ಕರ್ನಾಟಕ- ದಕ್ಷಿಣ ಕರ್ನಾಟಕ ಎಂದು ವಿಭಾಗಿಸಬೇಡಿ ಎಂದರು….
ಅಧಿಕಾರಕ್ಕಾಗಿ ನಾವು ಯಾರ ಮನೆ ಬಾಗಿಲಿಗೂ ಹೋಗಲಿಲ್ಲ, ಕಾಂಗ್ರೆಸ್ ಮುಖಂಡರೇ ಸರ್ಕಾರ ರಚನೆ ಪ್ರಸ್ತಾಪ ಮುಂದಿಟ್ಟರು…
May 26, 2018ಬೆಂಗಳೂರು: ಸಂದಿಗ್ದ ಸನ್ನಿವೇಶದಲ್ಲಿ ಅಧಿಕಾರ ವಹಿಸಿಕೊಂಡಿದ್ದೇನೆ. ಚುನಾವಣೆಗೂ ಮುನ್ನ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸಿ, ರಾಜ್ಯಕ್ಕೆ ಮತ್ತು ನನ್ನ ಮೈತ್ರಿ ಪಕ್ಷವಾದ ಕಾಂಗ್ರೆಸ್ಗೆ ಇಡೀ ರಾಜ್ಯದಲ್ಲಿ ಒಳ್ಳೆ ಹೆಸರು ತಂದುಕೊಡುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಬಡವರು ಮತ್ತು ರೈತರ ಕಲ್ಯಾಣಕ್ಕೆ ನನ್ನ ಸರ್ಕಾರ ಸದಾ ಸಿದ್ಧ. ಮೈತ್ರಿ ಕಾಂಗ್ರೆಸ್ ನಾಯಕರೊಟ್ಟಿಗೆ ಚರ್ಚೆ ಮಾಡಿ, ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ವೇಳೆ ಮತ್ತೆ ಪುನರುಚ್ಛಾರ ಮಾಡಿದರು. ಅಧಿಕಾರಕ್ಕೆ ಬರಲು ಕಾರಣಕರ್ತರಾದ ಕಾಂಗ್ರೆಸ್…
2006ರಲ್ಲಿ ಕುಮಾರಸ್ವಾಮಿ ಜೊತೆ ಕೈಜೋಡಿಸಿ ಸರ್ಕಾರ ರಚನೆ ಮಾಡಿದ್ದು ನನ್ನ ಜೀವನದಲ್ಲಿ ನಾನು ಮಾಡಿದ ದೊಡ್ಡ ಅಪರಾಧ…
May 26, 2018ಬೆಂಗಳೂರು: 2006ರಲ್ಲಿ ಕುಮಾರಸ್ವಾಮಿ ಜೊತೆ ಕೈ ಜೋಡಿಸಿ ಸರ್ಕಾರ ಮಾಡಿದ್ದು ನನ್ನ ಜೀವನದಲ್ಲಿ ನಾನು ಮಾಡಿದ ದೊಡ್ಡ ಅಪರಾಧ. ಇದಕ್ಕಾಗಿ ನಾಡಿನ ಜನತೆಯ ಕ್ಷಮೆ ಯಾಚನೆ ಮಾಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಪಶ್ಚಾತ್ತಾಪ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮೇಲಿನ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಅವರು, 20 ತಿಂಗಳು ಹೊಂದಾಣ ಕೆ ರಾಜಕಾರಣ ಮಾಡಿಕೊಂಡು ಕುಮಾರಸ್ವಾಮಿ ಸರ್ಕಾರದಲ್ಲಿ ನಾನು ಉಪ ಮುಖ್ಯಮಂತ್ರಿ ಆಗಿದ್ದೆ. ಅವರು ಮುಖ್ಯಮಂತ್ರಿ ಆದ ಸಮಯದಲ್ಲಿ…
ಕುಮಾರಸ್ವಾಮಿಗೆ ಇಂದು ಅಗ್ನಿ ಪರೀಕ್ಷೆ ಶುಕ್ರವಾರ ಮಧ್ಯಾಹ್ನ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ
May 25, 2018ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನಾಳೆ ವಿಧಾನಸಭೆಯಲ್ಲಿ ಅಗ್ನಿ ಪರೀಕ್ಷೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ನಾಯಕರಾಗಿ ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ. ಸದ್ಯಕ್ಕೆ ಕುಮಾರಸ್ವಾಮಿ ಮ್ಯಾಜಿಕ್ ಸಂಖ್ಯೆ ಮುಟ್ಟಲು ಯಾವುದೇ ಸಮಸ್ಯೆ ಇಲ್ಲ. ಒಂದು ವೇಳೆ ವ್ಯತ್ಯಾಸವಾದರೆ ರಾಜ್ಯದ ಜನತೆ ಮತ್ತೊಮ್ಮೆ ಚುನಾವಣೆ ಎದುರು ನೋಡಬೇಕಾಗುತ್ತದೆ. ಈಗಾಗಲೇ ಅತೀ ಹೆಚ್ಚು ಸ್ಥಾನ ಹೊಂದಿದ್ದ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ನಂತರ ವಿಧಾನಸಭೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರು ವುದರಿಂದ ಅವರಿಗೆ ಮತ್ತೆ…
ಅಧಿಕಾರಕ್ಕೇರುವ ಮುನ್ನ ದೇವರ ಅನುಗ್ರಹ, ಸಿಎಂ ಗದ್ದುಗೆಗೇರಿದ ಮೇಲೆ ಮಠಾಧೀಶರ ಆಶೀರ್ವಾದ!
May 25, 2018ಬೆಂಗಳೂರು: ಅಧಿಕಾರ ವಹಿಸಿ ಕೊಳ್ಳುವುದಕ್ಕೂ ಮುನ್ನ ರಾಜ್ಯದ ವಿವಿಧ ಶಕ್ತಿ ದೇವತೆಗಳ ಅನುಗ್ರಹ ಪಡೆದ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಯಾದ ನಂತರ ವಿವಿಧ ಮಠಾಧೀಶರ ಆಶೀರ್ವಾದ ಪಡೆದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮರು ದಿನವೇ ತುಮಕೂರಿಗೆ ತೆರಳಿ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದು, ಅವರ ಜೊತೆ ಹತ್ತು ನಿಮಿಷಗಳ ಕಾಲ ಸಮಾಲೋಚನೆ ನಡೆಸಿದರು. ಇದಕ್ಕೂ ಮುನ್ನ ನಗರದ ಹೊರವಲಯ ದಲ್ಲಿರುವ ಉಳ್ಳಾಳದ ನಂಜಾವಧೂತ ಮಠಕ್ಕೆ ತೆರಳಿದ ಕುಮಾರಸ್ವಾಮಿ, ಶ್ರೀಗಳ ಆಶೀರ್ವಾದ ಪಡೆದರು. ನಂಜಾವಧೂತ ಶ್ರೀಗಳ ಭೇಟಿ…