Tag: HD Kumaraswamy

ಸಿಎಂ ನಾಟಿಯ ಕೃಷಿ ಪ್ರದೇಶ ಪರಿಶೀಲಿಸಿದ ಸಚಿವರು ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ
ಮಂಡ್ಯ

ಸಿಎಂ ನಾಟಿಯ ಕೃಷಿ ಪ್ರದೇಶ ಪರಿಶೀಲಿಸಿದ ಸಚಿವರು ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

August 8, 2018

ಪಾಂಡವಪುರ:  ಭತ್ತದ ನಾಟಿ ಹಾಕುವ ಕಾರ್ಯಕ್ಕೆ ಚಾಲನೆ ನೀಡಲು ಆ.11ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಾಲೂಕಿನ ಸೀತಾಪುರ ಗ್ರಾಮದ ಹೊರವಲಯದ ಜಮೀನಿಗೆ ತೆರಳಿ ಪರಿಶೀಲಿಸಿದರು. ಮಂಗಳವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಮಂಜುಶ್ರೀ, ಎಸಿ ಆರ್.ಯಶೋಧ, ತಹಶೀಲ್ದಾರ್ ಡಿ.ಹನುಮಂತ ರಾಯಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಸಚಿವ ಪುಟ್ಟರಾಜು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಹಿಂದೆ ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭ ರೈತರೊಂದಿಗೆ ಭತ್ತ…

ಆ. 13ಕ್ಕೆ ಸಂಪುಟ ವಿಸ್ತರಣೆ
ಮೈಸೂರು

ಆ. 13ಕ್ಕೆ ಸಂಪುಟ ವಿಸ್ತರಣೆ

August 7, 2018

ಕಾಂಗ್ರೆಸ್ ವರಿಷ್ಠರ ಸಲಹೆಯಂತೆ ಸಿಎಂ ಕುಮಾರಸ್ವಾಮಿ ನಿರ್ಧಾರ ಕಾಂಗ್ರೆಸ್‍ನ ಐದು, ಜೆಡಿಎಸ್‍ನ ಒಂದು ಸ್ಥಾನ ಭರ್ತಿಗೆ ತೀರ್ಮಾನ ಇದೇ ವೇಳೆ 30 ನಿಗಮ-ಮಂಡಳಿಗೂ ನೇಮಕ ಬೆಂಗಳೂರು:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲ ವಿಸ್ತರಿಸಲಿದ್ದಾರೆ. ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಲಹೆ ಮೇರೆಗೆ ಆಗಸ್ಟ್ 13 ರಂದು ಮಂತ್ರಿಮಂಡಲ ವಿಸ್ತರಣೆ ಜರುಗಲಿದೆ. ಮಂತ್ರಿಮಂಡಲ ವಿಸ್ತರಣೆಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂಬ ರಾಜ್ಯ…

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ
ಮೈಸೂರು

ಎ.ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ

August 6, 2018

ಬೆಂಗಳೂರು: ಹಿರಿಯ ರಾಜ ಕೀಯ ಮುತ್ಸದ್ಧಿ, ಮಾಜಿ ಸಂಸದ, ಹುಣಸೂರು ಶಾಸಕ ಅಡಗೂರು ಹೆಚ್. ವಿಶ್ವನಾಥ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡ ಮತ್ತು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವನಾಥ್ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ರಾಜ್ಯಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ನಂತರ ನಡೆದ ಸಮಾರಂಭದಲ್ಲಿ…

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ
ಮೈಸೂರು

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ

August 5, 2018

ಮೈಸೂರು: ಮೈಸೂರು-ಬೆಂಗಳೂರು 10 ಪಥದ ರಸ್ತೆ ಕಾಮಗಾರಿಗೆ ಇದೇ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸುತ್ತೂರು ಮಠದ ಆವರಣದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಮೈಸೂರು-ಬೆಂಗಳೂರು ನಡುವೆ 10 ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಸೆಪ್ಟೆಂಬರ್‌ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೈಸೂರು ನಗರ ಹಾಗೂ ಜಿಲ್ಲೆಗೆ ಸಮರ್ಪಕ ಕುಡಿಯುವ…

ಶಿಮ್ಲಾದಿಂದ ಮಾನಸಿಕ ಸಂತ್ರಸ್ತೆ  ಸುರಕ್ಷಿತವಾಗಿ ಮೈಸೂರಿಗೆ ವಾಪಸ್
ಮೈಸೂರು

ಶಿಮ್ಲಾದಿಂದ ಮಾನಸಿಕ ಸಂತ್ರಸ್ತೆ  ಸುರಕ್ಷಿತವಾಗಿ ಮೈಸೂರಿಗೆ ವಾಪಸ್

August 3, 2018

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿಕೆ ಮೈಸೂರು ವಿಜಯನಗರ ಮಹಿಳಾ ನಿಲಯದಲ್ಲಿ ಆಶ್ರಯ ಮೈಸೂರು: ಮಾನಸಿಕ ಅಸ್ವಸ್ಥತೆ ಯಿಂದ ಕಳೆದ 2 ವರ್ಷಗಳ ಹಿಂದೆ ಶಿಮ್ಲಾ ಸೇರಿದ್ದ ಪಿರಿಯಾಪಟ್ಟಣ ತಾಲೂಕು ಕಂಪಲಾಪುರ ಸಮೀಪದ ಮೂಕನ ಹಳ್ಳಿ ಪಾಳ್ಯದ ಸರಸ್ವತಿ ಅಲಿಯಾಸ್ ಪದ್ಮ ಅವರನ್ನು ಜಿಲ್ಲಾಡಳಿತವು ಇಂದು ರಾತ್ರಿ ಮೈಸೂರಿಗೆ ಕರೆ ತಂದಿದೆ. ಈಕೆಯನ್ನು ತವರಿಗೆ ಕರೆತರುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಪಾಟೀಲ್, ಜಿಲ್ಲಾ ಮಾನಸಿಕ ಆರೋಗ್ಯ…

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ
ಮೈಸೂರು

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ

August 3, 2018

ಮೈಸೂರು: ವನ್ಯ ಜೀವಿಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಬಂಡಿಪುರ ಅಭಯಾರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಬಂಧಿಸಿದ್ದ ರಾತ್ರಿ ಸಂಚಾರವನ್ನು ಪುನರಾರಂಭಿಸುವಂತೆ ಕೇರಳ ಸರ್ಕಾರ ಮತ್ತೊಮ್ಮೆ ಲಾಬಿ ಆರಂಭಿಸಿದ್ದು, ಕೇಂದ್ರ ಸರ್ಕಾರದ ಮೂಲಕ ರಾತ್ರಿ ಸಂಚಾರ ನಿರ್ಬಂಧ ಸಡಿಲಗೊಳಿಸುವುದರೊಂದಿಗೆ ರಸ್ತೆ ಅಗಲೀಕರಣಕ್ಕೆ ಶಿಫಾರಸ್ಸು ಮಾಡಿಸಿ, ವನ್ಯಜೀವಿಗಳ ಹಿತವನ್ನು ಬಲಿ ಕೊಡುವ ಯತ್ನ ಮಾಡಿದೆ. ನವದೆಹಲಿಯಲ್ಲಿ ಜು.17ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್…

ಖಾಸಗಿ ಸಹಭಾಗಿತ್ವದಲ್ಲಿ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪ್ರಾರಂಭ
ಮೈಸೂರು

ಖಾಸಗಿ ಸಹಭಾಗಿತ್ವದಲ್ಲಿ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪ್ರಾರಂಭ

August 2, 2018

ಮೈಸೂರು: ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸಹಭಾಗಿತ್ವ ದಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಚುಂಚನ ಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಸಂಬಂಧಿಸಿದಂತೆ ಈ ಭಾಗದ ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಅವರು, ಕಾರ್ಖಾನೆ ಪ್ರಾರಂಭಿಸುವ ಪ್ರಕ್ರಿಯೆಗೆ ಮುನ್ನವೇ ನೌಕರರ ಬಾಕಿ ವೇತನ ಪಾವತಿಸಲು ಆದೇಶಿಸಿದರು. ಕಾರ್ಮಿಕರ ವೇತನ ಬಾಕಿ 14.70 ಕೋಟಿ ರೂ.ಗಳಲ್ಲಿ ಈಗಾಗಲೇ ಅರ್ಧದಷ್ಟು ವೇತನ ಪಾವತಿಸಲು…

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ
ಮೈಸೂರು

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

August 1, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನಾಲ್ವರು ಸಚಿವರುಗಳಿಗೆ ತಲಾ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ನಿರೀಕ್ಷೆಯಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರಿಗೆ ಮೈಸೂರು ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಹಾಸನ ಜಿಲ್ಲೆಗೆ ಹೆಚ್.ಡಿ.ರೇವಣ್ಣ, ಮಂಡ್ಯಕ್ಕೆ ಸಿ.ಎಸ್.ಪುಟ್ಟರಾಜು, ಚಾಮರಾಜನಗರಕ್ಕೆ ಸಿ.ಪುಟ್ಟರಂಗಶೆಟ್ಟಿ, ಕೊಡಗಿಗೆ ಸಾ.ರಾ.ಮಹೇಶ್ ಅವರನ್ನು ಉಸ್ತುವಾರಿ ಸಚಿವರಾಗಿ ನೇಮಕ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಬೆಂಗಳೂರು ನಗರ ಮತ್ತು ತುಮಕೂರು, ಆರ್.ವಿ.ದೇಶಪಾಂಡೆ ಅವರಿಗೆ ಉತ್ತರ ಕನ್ನಡ…

ವಿದ್ಯಾವಂತ ಅಂಗವಿಕಲರಿಗೆ ಜಿಲ್ಲಾ ಮಟ್ಟದಲ್ಲೇ ಉದ್ಯೋಗ ಕಲ್ಪಿಸಿ
ಮೈಸೂರು

ವಿದ್ಯಾವಂತ ಅಂಗವಿಕಲರಿಗೆ ಜಿಲ್ಲಾ ಮಟ್ಟದಲ್ಲೇ ಉದ್ಯೋಗ ಕಲ್ಪಿಸಿ

August 1, 2018

ಬೆಂಗಳೂರು: ಮಾನವೀಯತೆ ದೃಷ್ಟಿಯಿಂದ ವಿದ್ಯಾ ವಂತ ಅಂಗವಿಕಲರಿಗೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ದೊರಕಿಸಿ ಕೊಡುವ ಪ್ರಯತ್ನ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಿಗೆ ಸೂಚಿಸಿದರು. ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಇಂದು ಮುಂದುವರೆದ ಸಭೆಯಲ್ಲಿ ಮಾತನಾಡಿದ ಅವರು, ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳನ್ನು ಜಿಲ್ಲಾಧಿಕಾರಿಗಳಿಗೆ ರವಾನಿ ಸಿದ ಸಂದರ್ಭದಲ್ಲಿ ಹಿಂಬರಹ ನೀಡಿದರೆ ಮಾತ್ರ ಪ್ರಕರಣ ಮುಕ್ತಾಯವಾಗಿದೆ ಎಂದು ಪರಿಗಣಿಸಲಾಗುವುದು. ಜಿಲ್ಲಾಧಿಕಾರಿಗಳ ಹಂತದಲ್ಲಿಯೇ…

ನಮ್ಮ ಸರ್ಕಾರ ಸುಭದ್ರ, ಅಭಿವೃದ್ಧಿಗೆ ಆದ್ಯತೆ ನೀಡಿ
ಮೈಸೂರು

ನಮ್ಮ ಸರ್ಕಾರ ಸುಭದ್ರ, ಅಭಿವೃದ್ಧಿಗೆ ಆದ್ಯತೆ ನೀಡಿ

July 31, 2018

ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ಮಾಧ್ಯಮಗಳ ವರದಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಮೈತ್ರಿ ಸರ್ಕಾರ ಕುರಿತು ಏನೇನೊ ವರದಿಗಳು ಬರುತ್ತಿವೆ. ಅವರ ವರದಿ ನೋಡಿ, ಅಧಿಕಾರಿಗಳು ದಾರಿ ತಪ್ಪಬಾರದು. ಮಾಧ್ಯಮಗಳಿಗೆ ಪಾಪ, ಬೇರೆ ಸುದ್ದಿಗಳು ಸಿಕ್ತಿಲ್ಲವೇನೋ, ನಾನು ನಾಲ್ಕು ಜಿಲ್ಲೆಗಳ ಮುಖ್ಯಮಂತ್ರಿ ಅಂತ ವರದಿ ಮಾಡುತ್ತಾರೆ. 2.18 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‍ನಲ್ಲಿ…

1 3 4 5 6 7 19
Translate »