ಮೈಸೂರು: ಹಜ್ ಭವನಕ್ಕೆ ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿಡಬೇಕೆಂದು ಡಾ. ಕಲಾಂ ಅಭಿಮಾನಿ ಬಳಗದ ಜಯಪ್ರಕಾಶ್ ರಾವ್ ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಲಾಂ ಅವರ ಪ್ರೀತಿಯ ಡಿಆರ್ಡಿಓ ಸಂಸ್ಥೆಯು ರಾಮೇಶ್ವರಂನಲ್ಲಿ ಕಲಾಂ ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸಿರುವುದನ್ನು ಬಿಟ್ಟರೆ ದೇಶದ ಎಲ್ಲಿಯೂ ಅವರ ಸ್ಮಾರಕಗಳು ನಿರ್ಮಾಣವಾಗಿಲ್ಲ. ಆದ್ದರಿಂದ ಹಜ್ ಭವನಕ್ಕೆ ಕಲಾಂ ಅವರ ಹೆಸರಿಡಲು ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮನವಿ…
ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ ತೀವ್ರ ಹೋರಾಟ
June 24, 2018ಬೆಂಗಳೂರು: ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಟ್ಟರೆ ಕರ್ನಾಟಕ ಮತ್ತೊಮ್ಮೆ ಹೊತ್ತಿ ಉರಿಯಲು ಕಾರಣವಾಗುತ್ತದೆ ಎಂದು ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ ಹಜ್ ಯಾತ್ರಿಕರಿಗೆ ಅನುಕೂಲ ಆಗಲು ಹಜ್ ಭವನ ನಿರ್ಮಾಣಕ್ಕೆ ಹಣ ಕೊಟ್ಟಿತ್ತೇ ಹೊರತು ಟಿಪ್ಪು ಹೆಸರು ಇಡಲು ಅಲ್ಲ, ಟಿಪ್ಪು ಒಬ್ಬ ಮತಾಂಧ, ಕೊಲೆ ಗಡುಕ ಎಂದು ಗುಡುಗಿದರು. ಹಜ್ ಭವನಕ್ಕೆ ಒಬ್ಬ ಮತಾಂಧ ಮತ್ತು ದೇಶದ್ರೋಹಿಯ ಹೆಸರು ಇಡಬಾರದು. ಟಿಪ್ಪು…
ಹಜ್ ಭವನಕ್ಕೆ ‘ಟಿಪ್ಪು ಸುಲ್ತಾನ್ ಹಜ್ಘರ್’ ಎಂದು ನಾಮಕರಣಕ್ಕೆ ಸಚಿವ ಜಮೀರ್ ಚಿಂತನೆ
June 23, 2018ಬೆಂಗಳೂರು: ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹಜ್ಘರ್ ಎಂಬ ನಾಮಕರಣ ಸಂಬಂಧ ಕಾಂಗ್ರೆಸ್ನ ಹಿರಿಯ ರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳ ಲಾಗುವುದು ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಜ್ ಭವನಕ್ಕೆ ಟಿಪ್ಪುಸುಲ್ತಾನ್ ಘರ್ ಹೆಸರಿಡಲು ಮುಸ್ಲಿಂ ಸಮುದಾಯದ ಮುಖಂಡರು ಸಲಹೆ ಮಾಡಿದ್ದಾರೆ. ಪಕ್ಷದ ಹಿರಿಯ ರಾದ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್ ಜೊತೆ ಚರ್ಚಿಸಿ ನಿರ್ಧ ರಿಸಲಾಗುವುದು. ಟಿಪ್ಪು ಜಯಂತಿ ಆಚರಣೆ ವಿಚಾರವೇ ಬೇರೆ,…