ಮೈಸೂರು: `ಚೆನ್ನಾಗಿ ಓದಿ ಡಾಕ್ಟರ್ ಆಗಿ. ಈಗ ತಿಳಿಯಿತಾ ಡಾಕ್ಟರ್ ಆಗುವುದು ಎಷ್ಟು ಮಹತ್ವದ್ದು ಎಂದು’ ಚಾಮರಾಜನಗರ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಗುರುವಾರ ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಿಂದ ಬಿಡುಗಡೆಯಾದ ಮಕ್ಕಳ ಆರೋಗ್ಯ ವಿಚಾರಿಸಿ, ಪ್ರೀತಿಯಿಂದ ತಿಳಿವಳಿಕೆ ಹೇಳಿದ ಪರಿಯಿದು. ಆಸ್ಪತ್ರೆಯಲ್ಲಿದ್ದ ಎಲ್ಲಾ 9 ಮಕ್ಕಳು ಹಾಗೂ ಐವರು ವಯಸ್ಕರ ಭೇಟಿ ಮಾಡಿ, ಅವರಿಗೆ ನೀಡುತ್ತಿರುವ ಚಿಕಿತ್ಸಾ ವಿವರ ಹಾಗೂ ಆರೋಗ್ಯದ ಸ್ಥಿತಿ ಕುರಿತು ಮಾಹಿತಿ ಪಡೆದರು.ಇದೇ ವೇಳೆ ಆಸ್ಪತ್ರೆಯಿಂದ ಬಿಡುಗಡೆ ಯಾಗುವ…
ಸುಯೋಗ್ ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ 7 ಮಕ್ಕಳು ಬಿಡುಗಡೆ
December 21, 2018ಮೈಸೂರು: ಸುಳವಾಡಿ ಮಾರಮ್ಮ ದೇವಾಲಯದಲ್ಲಿ ವಿಷ ಬೆರೆಸಿದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಮೈಸೂ ರಿನ ರಾಮಕೃಷ್ಣನಗರದಲ್ಲಿರುವ ಸುಯೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಮಕ್ಕಳಲ್ಲಿ ಗುರುವಾರ 7 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಗುಣಮುಖರಾದ ಮಕ್ಕಳಿಗೆ ಚಾಮ ರಾಜನಗರದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಅಪರ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಸುಯೋಗ್ ಆಸ್ಪತ್ರೆಯ ಸಂಸ್ಥಾಪಕ ಡಾ.ಎಸ್.ಪಿ.ಯೋಗಣ್ಣ, ಚಾಮರಾಜ ನಗರ ಜಿಲ್ಲಾ ಸರ್ಜನ್ ಡಾ.ರಘುರಾಮ್, ಜಿಲ್ಲಾ ಆರೋಗ್ಯಾಧಿಕಾರಿ(ಚಾ.ನಗರ) ಡಾ. ಪ್ರಸಾದ್ ಸೇರಿದಂತೆ ಇನ್ನಿತರರು ಮಕ್ಕಳಿಗೆ ಶುಭ ಕೋರಿ, ಬೀಳ್ಕೊಟ್ಟರು. ಇದೇ ವೇಳೆ ಸುಯೋಗ…
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸುಳವಾಡಿ ವಿಷ ಪ್ರಸಾದ ಸಂತ್ರಸ್ತರಿಗೆ ಹಣ್ಣು ಹಂಪಲು ವಿತರಣೆ
December 21, 2018ಮೈಸೂರು: ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕದ ವತಿಯಿಂದ ಸುಳವಾಡಿ ವಿಷ ಪ್ರಸಾದ ದುರಂತದಲ್ಲಿ ಅಸ್ವಸ್ಥಗೊಂಡವರಿಗೆ ಹಣ್ಣು ಹಂಪಲು ವಿತರಿಸಲಾಯಿತು. ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘÀದ ಪದಾಧಿಕಾರಿಗಳು ಗುರು ವಾರ ಸಂಜೆ ಕೆ.ಆರ್.ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡಿರುವವರ ಆರೋಗ್ಯ ವಿಚಾ ರಿಸಿ, ಸಾಂತ್ವನ ಹೇಳಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್. ಮಂಜುನಾಥ್ ಮಾತನಾಡಿ, ಸುಳವಾಡಿ ವಿಷ ಪ್ರಸಾದ ದುರಂತದಲ್ಲಿ ಅಸ್ವಸ್ಥ ಗೊಂಡವರು ಬಡವರೇ ಆಗಿದ್ದು, ಅವರಿಗೆ ಸಾಂತ್ವನ…
ಸುಳವಾಡಿ ವಿಷ ಪ್ರಸಾದ ದುರಂತ ಮೃತರಿಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ
December 21, 2018ಹನೂರು: ತಾಲೂಕಿನ ಸುಳವಾಡಿ ಗ್ರಾಮದ ಕಿಚ್ ಗುತ್ ಮಾರಮ್ಮ ದೇವಸ್ಥಾನದಲ್ಲಿ ವಿತರಿ ಸಿದ ವಿಷ ಪ್ರಸಾದ ಸೇವಿಸಿ ದುರಂತ ಸಾವಿ ಗೀಡಾದ 15 ಮಂದಿ ಮೃತರಿಗೆ ಗ್ರಾಮಸ್ಥರು ಹಾಗೂ ಇತರರು ಶ್ರದ್ಧಾಂಜಲಿ ಸಲ್ಲಿಸಿದರು. ಗ್ರಾಮದ ಬ್ರಹ್ಮೇಶ್ವರ ದೇವಾಲಯದ ಮುಂಭಾಗ ಗುರುವಾರ ನಡೆದ ಶ್ರದ್ಧಾಂ ಜಲಿ ಸಭೆಯಲ್ಲಿ ಪಾಲ್ಗೊಂಡಿದ್ದ ಮೃತರ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಪ್ರಮುಖ ನಾಯಕರು ಸೇರಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಬಳಿಕ, ಮೂರು ನಿಮಿಷ ಮೌನಾಚರಣೆ ಮಾಡಿ ಗೌರವ ಸಲ್ಲಿಸಿ ದರು. ಪ್ರಸಾದದಲ್ಲಿ ವಿಷ…
ಸಾಲೂರು ಮಠದ ಕಿರಿಯ ಸ್ವಾಮೀಜಿ ಪೊಲೀಸ್ ವಶಕ್ಕೆ
December 19, 2018ಕೊಳ್ಳೇಗಾಲ: ಸುಳವಾಡಿ ಕಿಚ್ಗುತ್ ಮಾರಮ್ಮನ ದೇವಸ್ಥಾನ ದಲ್ಲಿ ಪ್ರಸಾದಕ್ಕೆ ವಿಷ ಬೆರೆಸಿದ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ಇಂದು ಮಧ್ಯರಾತ್ರಿ ಸಾಲೂರು ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ತನಿಖೆಗಾಗಿ ಕರೆದೊಯ್ದಿದ್ದಾರೆ. ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಮತ್ತು ಚಾಮರಾಜನಗರ ಜಿಲ್ಲಾ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಅವರು ಇಂದು ಇಡೀ ದಿನ ಕೊಳ್ಳೇಗಾಲದ ಡಿವೈಎಸ್ಪಿ ಕಚೇರಿಯಲ್ಲೇ ಇದ್ದು, ಆರೋಪಿಗಳ ತನಿಖೆ ನಡೆಸಿದ್ದರು. ಸುಳವಾಡಿ ಮಾರಮ್ಮ…
ಪ್ರಸಾದ ಸೇವನೆ ಪ್ರಕರಣ: ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಪರಿಹಾರ ವಿತರಣೆ
December 19, 2018ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿಯ ಕಿಚ್ಗುತ್ ಮಾರ ಮ್ಮನ ದೇವಾಲಯದ ಪ್ರಸಾದ ಸೇವನೆಯಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದ ಪರಿಹಾರ ಹಣವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹಾಗೂ ಶಾಸಕ ಆರ್.ನರೇಂದ್ರ ಅವರು ಮಂಗಳವಾರ ವಿತರಿಸಿದರು. ಸುಳವಾಡಿ, ಕೋಟೆಪೊದೆ, ಬಿದರಹಳ್ಳಿ, ವಡ್ಡರದೊಡ್ಡಿ, ಎಂ.ಜಿ.ದೊಡ್ಡಿ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೃತರ ಕುಟುಂಬ ಸ್ಥರಿಗೆ ಸಾಂತ್ವನ ಹೇಳಿ ಪರಿಹಾರದ ಚೆಕ್ ವಿತರಿಸಿದರು. ಈ ವೇಳೆ ಅಕ್ಕಿ, ಬೆಳೆ, ಸಕ್ಕರೆ, ಎಣ್ಣೆ, ಇನ್ನಿತರ ಪಡಿತರ…
ದೇವಾಲಯ ಟ್ರಸ್ಟ್ ನ ಪ್ರಭಾವಿ ನಾಲ್ವರು ಪ್ರಮುಖರ ಕೈವಾಡ
December 18, 2018ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳವಾಡಿ ದೇವಾಲಯದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶನ ದುರಂತಕ್ಕೆ ಇಬ್ಬರು ಅರ್ಚಕರು, ಟ್ರಸ್ಟ್ ನ ಪ್ರಭಾವಿ ಸೇರಿದಂತೆ ನಾಲ್ಕು ಮಂದಿ ಕಾರಣರಾಗಿದ್ದಾರೆ. ಸರ್ಕಾರದ ಕೈಸೇರಿರುವ ವರದಿಯಲ್ಲಿ ಈ ನಾಲ್ಕು ಮಂದಿಯ ಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಆದರೆ ಇದನ್ನು ಇದುವರೆಗೂ ಬಹಿರಂಗಗೊಳಿಸಿಲ್ಲ. ಸುಳವಾಡಿ ದೇವಾಲಯದ ಆಡಳಿತ ಮಂಡಳಿ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವ ವಿಚಾರದಲ್ಲಿನ ವಿವಾದದ ಹಿನ್ನೆಲೆ ಯಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ಗೂಬೆ ಕೂರಿಸುವ ಯತ್ನ ಇಂತಹ ಹೀನ ಕೃತ್ಯಕ್ಕೆ ಕಾರಣವಾಯಿತು…
ವಿಷ ಪ್ರಸಾದ ಪ್ರಕರಣ: ಸಾವಿನ ಸಂಖ್ಯೆ 14ಕ್ಕೆ ಪತಿ ಸಾವಿನ 3 ದಿನದ ನಂತರ ಪತ್ನಿ ಸಾವು
December 18, 2018ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳವಾಡಿ ಕಿಚ್ಗುತ್ ಮಾರಮ್ಮ ದೇವಾಲಯದಲ್ಲಿ ವಿಷ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೇರಿದೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಓರ್ವ ಮಹಿಳೆ ಇಂದು ಅಸುನೀಗಿದ್ದಾರೆ. ವಿಷ ಪ್ರಸಾದ ಸೇವಿಸಿ ಅಸ್ವಸ್ಥ ರಾಗಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟೆಪೋದೆ (ಮಾರ್ಟಳ್ಳಿ) ಗ್ರಾಮದ ಮೈಲಿಬಾಯಿ (35) ಬಹು ಅಂಗಾಂಗ ವೈಫಲ್ಯ ದಿಂದ ಮೃತಪಟ್ಟರು. ಶುಕ್ರವಾರ ಮೈಸೂರಿಗೆ ಕರೆತಂದಿದ್ದಾಗ ಗಂಭೀರ ಸ್ಥಿತಿಯಲ್ಲಿದ್ದ ಮೈಲಿಬಾಯಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ…