ಹನೂರು: ಕಾಮ ಗಾರಿಗಳು ಮುಗಿವುವ ಮುನ್ನವೇ ತರಾ ತುರಿಯಲ್ಲಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಲೋಕಾ ರ್ಪಣೆಗೊಂಡ ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಯಿಂದಾಗಿ ಪ್ರಯಾಣಿಕರು ಪರದಾಡುವಂತಾ ಗಿದ್ದು ಮಳೆ ಬಂದರೆ ನಿಲ್ದಾಣ ಕೆಸರು ಮಾಯಾವಾಗಿ ತೊಂದರೆ ಅನುಭವಿಸವಂತಾ ಗಿದೆ ಎಂದು ಕರವೇ ಸ್ವಾಭಿಮಾನಿ ಬಣದ ಸಂಘಟನೆ ವತಿಯಿಂದ ಕೆಸರಿನಲ್ಲಿ ರಾಗಿ ಪೈರು ನಾಟಿ ಮಾಡುವ ಮೂಲಕ ವಿನೂತನ ವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಕರವೇ ಸ್ವಾಭಿಮಾನಿ ಬಣದ ಅಧ್ಯಕ್ಷ…
ರಸ್ತೆಗಾಗಿ ಭೂಸ್ವಾಧೀನಕೊಳಪಟ್ಟ ಜಮೀನಿನ ರೈತರಿಗೆ ಪರಿಹಾರ ವಿತರಣೆ
September 29, 2018ಹನೂರು: ಕೊಳ್ಳೇ ಗಾಲದಿಂದ ಹನೂರು ರಸ್ತೆ ಅಭಿವೃದ್ದಿ ಕೆಶಿಫ್ ಯೋಜನೆಯಡಿ ಭೂಸ್ವಾಧೀನಕ್ಕೆ ಮಂಜೂರಾತಿ ದೊರೆತಿದ್ದು, ರೈತರು, ಮಳಿಗೆ ಮಾಲೀಕರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ನೊಂದಾಣಿ ಮಾಡಿ, ಪರಿಹಾರ ಪಡೆದು ಅಭಿವೃದ್ಧಿಗೆ ಸಹಕಾರ ಪರಿಹಾರ ನೀಡುವಂತೆ ಕೊಳ್ಳೇಗಾಲ ಉಪವಿಭಾಗಾಧಿ ಕಾರಿ ಬಿ.ಫೌಜಿಯ ತರುನ್ನುಮ್ ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಭೂಸ್ವಾಧೀನ ರೈತರಿಗೆ ಪರಿಹಾರ ಚೆಕ್ ವಿತರಣೆ ಮಾಡಿ, ನಂತರ ಅವರು ಮಾತನಾಡಿದರು.ಕೆಶಿಫ್ ಯೋಜನೆಯಡಿ ಪ್ಯಾಕೇಟ್ ಕೊಳ್ಳೇ ಗಾಲದಿಂದ ಹನೂರುವರಗೆ 23.8 ಕೀಲೋ ಮೀಟರ್…
ಆರ್.ಎಸ್.ದೊಡ್ಡಿಯಲ್ಲಿ ಕುಡಿಯುವ ನೀರಿಗೆ ಪರದಾಟ
August 21, 2018ಹನೂರು: ಪಟ್ಟಣದ ಆರ್ಎಸ್ ದೊಡ್ಡಿ ಆಶ್ರಯ ಬಡಾವಣೆಗೆ ಕಳೆದ ಒಂದು ವಾರದಿಂದ ಕುಡಿಯುವ ನೀರು ಇಲ್ಲದೆ ಪರದಾಡು ತ್ತಿದ್ದು, ಪಟ್ಟಣ ಪಂಚಾಯಿತಿ ಪರ್ಯಾ ಯ ವ್ಯವಸ್ಥೆಯಾಗಿ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಬೇಕೆಂದು ಆಗ್ರಹಿಸಿ ಹತ್ತಾರು ಮಹಿಳೆಯರು ಪಟ್ಟಣ ಪಂಚಾಯಿತಿ ಕಚೆÉೀರಿಗೆ ಪ್ರತಿಭಟನೆ ನಡೆಸಿದರು. ಹನೂರು ಪ.ಪಂ. ವ್ಯಾಪ್ತಿಯ ಆರ್.ಎಸ್. ದೊಡ್ಡಿ ಆಶ್ರಯ ಬಡಾವಣೆಯಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ನಿವಾಸಿಗಳು ತಿಳಿಸಿದ್ದರೂ ಸಹ ಐದಾರು…
ದಂಟಳ್ಳಿ ಬಳಿ ಕಡವೆ ಮಾಂಸ ವಶ
August 9, 2018ಹನೂರು: ಕಡವೆಯನ್ನು ಕೊಂದು ಮಾಂಸವನ್ನು ಒಣಗಿ ಸಿಟ್ಟಿರುವ ಘಟನೆ ಕೌದಳ್ಳಿ ವನ್ಯಜೀವಿ ವಲಯದಲ್ಲಿ ನಡೆದಿದೆ. ವಲಯದ ದಂಟಳ್ಳಿ ಶಾಖೆಯಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿಗೆ ಮಾಂಸ ಒಣಗಿಸಿಟ್ಟಿರುವುದು ಕಂಡು ಬಂದ ತಕ್ಷಣ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿ ಸುಮಾರು 30 ಕೆ.ಜಿ.ಯಷ್ಟು ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಂಕರಾಜು ಅವರು ಪರಿ ಶೀಲನೆ ನಡೆಸಿದ್ದಾರೆ. ಬೇಟೆಗಾರರು ತಮಿಳುನಾಡಿನ ಮೂಲದವರಾಗಿದ್ದು ನದಿ ದಾಟಿ ಬಂದು ಬೇಟೆಯಾಡಿದ ಮಾಂಸವನ್ನು ಒಣಗಿಸುವ ವೇಳೆ ಗಸ್ತುನಲ್ಲಿದ್ದ ಅರಣ್ಯ ಸಿಬ್ಬಂದಿ…
ವ್ಯಕ್ತಿ ನಾಪತ್ತೆ
July 12, 2018ಹನೂರು: ಯುವಕನೊರ್ವ ಕಾಣೆಯಾಗಿರುವ ಬಗ್ಗೆ ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹನೂರು ಸಮೀಪದ ಉದ್ದನೂರು ಗ್ರಾಮದ ಮಹೇಶ್ (25 ವರ್ಷ) ಕಾಣೆಯಾದ ಯುವಕ. ಈ ಬಗ್ಗೆ ಅವರ ತಂದೆ ಮಹದೇವಪ್ಪ ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾಣೆಯಾದ ವ್ಯಕ್ತಿ ಬಗ್ಗೆ ತಿಳಿದು ಬಂದರೆ 08224-268803, 0821-2445168, ದೂರವಾಣಿ ಮೂಲಕ ಮಾಹಿತಿ ನೀಡುವಂತೆ ಇನ್ಸ್ಪೆಕ್ಟರ್ ಪರಶುರಾಮ್ ತಿಳಿಸಿದ್ದಾರೆ.
ಹನೂರು ಚೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ
July 11, 2018ಹನೂರು: ಚಾಮುಂ ಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ ಕಾರ್ಯವೈಖರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಹನೂರು ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ವತಿಯಿಂದ ಪಟ್ಟಣದ ಚೆಸ್ಕಾಂ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅಧ್ಯಕ್ಷ ವಿನೋದ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸುಮಾರು 8 ವರ್ಷಗಳ ಹಿಂದೆ ರೈತರೊ ಬ್ಬರು ನಿಗಮಕ್ಕೆ ನಿಗದಿತ ಶುಲ್ಕವನ್ನು ಪಾವತಿಸಿ ದ್ದರು…
ಅಕ್ರಮ ಮದ್ಯ ಮಾರಾಟ; ಆರೋಪಿ ಬಂಧನ
July 9, 2018ಹನೂರು: ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮ.ಬೆಟ್ಟ ಪೊಲೀಸರು ಮಾಲು ಸಮೇತ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಡ್ಯ ನಿವಾಸಿ ರಾಜು ಅನ್ನು ಬಂಧಿಸಿದ್ದು, ಇಂಡಿಕಾ ಕಾರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ವಿವರ: ಖಚಿತ ಮಾಹಿತಿ ಮೇರೆಗೆ ಮಲೈಮಹದೇಶ್ವರ ಬೆಟ್ಟದ ಇನ್ಸ್ಪೆಕ್ಟರ್ ದೇವ ರಾಜು, ಮುಖ್ಯಪೇದೆ ನಾಗರಾಜು, ಪೇದೆಗಳಾದ ಸಿದ್ದರಾಜು, ಶಂಕರ್, ಪ್ರಭು ದಾಳಿ ನಡೆಸಿದರು….
ನಾಪತ್ತೆಯಾಗಿದ್ದ ಬಾಲಕಿ ಮೈಸೂರಿನಲ್ಲಿ ಪತ್ತೆ
July 4, 2018ಹನೂರು: ತಾಲೂಕಿನ ಚಿಗತಾಪುರ ಗ್ರಾಮದಿಂದ ಜೂ. 30ರಂದು ಕಾಣೆಯಾಗಿದ್ದ ಬಾಲಕಿ ಮಂಗಳವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾಳೆ. ಸಮೀಪದ ಬಸಪ್ಪನದೊಡ್ಡಿ ಗ್ರಾಮದ ತನ್ವೀರ್ಪಾಷಾ ಹಾಗೂ ಚಿಗತಾಪುರ ಗ್ರಾಮ ಬಾಲಕಿಯೊಬ್ಬಳು ಒಟ್ಟಿಗೆ ಕಾಣೆಯಾಗಿದ್ದರು. ಈ ಸಂಬಂಧ ಬಾಲಕಿ ತಂದೆ ರಾಮಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಪಹರಣ ಪ್ರಕರಣದಡಿ ದೂರು ದಾಖಲಿಸಿಕೊಂಡಿದ್ದರು. ಕಾಣೆ ಯಾಗಿದ್ದ ಬಾಲಕಿ ಸಂಬಂಧಿಕರೊಬ್ಬರ ಮನೆಯಲ್ಲಿರುವುದು ಕಂಡು ಬಂದಿದೆ. ಈ ಸಂದರ್ಭದಲ್ಲಿ ತನ್ವೀರ್ಪಾಷಾ ಪರಾರಿಯಾಗಿದ್ದಾನೆ. ಬಾಲಕಿಯನ್ನು ವಶಕ್ಕೆ ಪಡೆದ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಾಲಮಂದಿರಕ್ಕೆ ಕಳುಹಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ದಾಂಪತ್ಯಕ್ಕೆ ಕಾಲಿಟ್ಟ 60 ನವ ಜೋಡಿಗಳು
July 2, 2018ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲಾಗುವ ಉಚಿತ ಸಾಮೂಹಿಕ ವಿವಾಹ ಕಾರ್ಯ ಗಳನ್ನು ಮೂರು ತಿಂಗಳಿಗೆ ಒಮ್ಮೆ ನಡೆಸಿದರೆ ಇನ್ನೂ ಅನೇಕ ಜನರಿಗೆ ಅನುಕೂಲ ವಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ಮಲೆಮಹದೇಶ್ವರ ಬೆಟ್ಟದಲ್ಲಿ ಮಹ ದೇಶ್ವರ ಬೆಟ್ಟ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಅವರು ಮಾತನಾಡಿದರು. ವಿವಾಹ ಮಾಡಲು ಬಡವರು ಕಲ್ಯಾಣ ಮಂಟಪಗಳಿಗೆ ಹಾಗೂ ಊಟೋಪಚಾ ರಕ್ಕೆ ಸಾಕಷ್ಟು ಹಣ ವ್ಯಯಿಸಬೇಕಾಗುತ್ತದೆ. ಈ ರೀತಿಯ ದುಂದು ವೆಚ್ಚದಿಂದ…
ಮೂಗೂರು ಬಳಿ ಅಪಘಾತ ಪ್ರಕರಣ ಪರಿಹಾರಕ್ಕೆ ಆಗ್ರಹಿಸಿ ಶವವಿಟ್ಟು ಪ್ರತಿಭಟನೆ
June 29, 2018ಹನೂರು: ಅಪಘಾತ ದಲ್ಲಿ ಮೃತಪಟ್ಟು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಆನಾಪುರ ಗ್ರಾಮಸ್ಥರು ಮಂಗಲ ಗ್ರಾಮದ ಮುಖ್ಯ ರಸ್ತೆಯಲ್ಲಿ ಶವ ಇಟ್ಟು ಪ್ರತಿಭಟನೆ ನಡೆಸಿದರು. ನಂಜನೂಡಿಗೆ ದೇವರ ದರ್ಶನಕ್ಕಾಗಿ ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಮೂಗೂರು ಗ್ರಾಮದ ರಾಷ್ಟ್ರೀಯ ಹೆದ್ಧಾರಿ 212ರಲ್ಲಿ ಖಾಸಗಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂ ಬದ ಮೂವರು ಸ್ಥಳದಲ್ಲೇ ಮೃತಪಟ್ಟಿ ದ್ದರು. ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ…