ಹಾಸನ: ಸಕಲೇಶಪುರ ತಾಲೂಕಿನಲ್ಲಿ ಕಳೆದ 15 ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಹಾನಿಗೀಡಾಗಿರುವ ಹಾನುಬಾಳು ಹೋಬಳಿಯ ಹುರುಡಿ, ಅಚ್ಚರಡಿ, ದೇವಾಲಕೆರೆ, ಬೆಟ್ಟದ ಭೈರೇಶ್ವರ ಮತ್ತಿತರ ಪ್ರದೇಶಗಳಿಗೆ ಶಾಸಕ ಕುಮಾರಸ್ವಾಮಿ ಭೇಟಿ ನೀಡಿ, ಪರಿಶೀಲಿಸಿದರು. ಹಾನಿಗೀಡಾಗಿರುವ ರಸ್ತೆ ಸೇತುವೆಗಳನ್ನು ಪರಿಶೀಲಿಸಿ ಕೂಡಲೇ ಪರಿಹಾರ ಕ್ರಮ ಕೈ ಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಕಲೇಶಪುರ ತಹಶೀಲ್ದಾರು, ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಜರಿದ್ದರು. ಪರಿಹಾರ ಚೆಕ್ ವಿತರಣೆ: ಹಾಸನ ತಾಲೂಕು ಕಟ್ಟಾಯ ಹೋಬಳಿ ಕಾರ್ಲೆ ಮತ್ತು ಪದುಮನಹಳ್ಳಿ…
ಸಮುದ್ರವಳ್ಳಿಯಲ್ಲಿ ಮನೆ ಕುಸಿತ
June 13, 2018ಹಾಸನ: ವಾರದಿಂದ ಸತತವಾಗಿ ಸುರಿ ಯುತ್ತಿರುವ ಮಳೆ ಗಾಳಿಗೆ ತಾಲೂಕಿನ ಸಮುದ್ರವಳ್ಳಿಯಲ್ಲಿ ಮನೆ ಕುಸಿದು ಅಪಾರ ನಷ್ಟವಾದ ಘಟಕ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಗ್ರಾಮದ ನಿವಾಸಿ ಕಮಲಮ್ಮ ಎಂಬುವರ ಮನೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಇದ್ದ ಲಕ್ಷ್ಮಮ್ಮ ಅವರ ಮನೆಯೂ ಹಾನಿಯಾಗಿದೆ. ಸೋಮವಾರ ರಾತ್ರಿ ಪೂರ್ಣಗಾಳಿ ಸಹಿತ ಮಳೆ ಸುರಿದ್ದರಿಂದ ಬೆಳಗಿನ ಜಾವದಲ್ಲಿ ಕಮಲಮ್ಮ ಎಂಬುವರ ಮನೆ ಗೋಡೆ ಕುಸಿದಿದೆ. ಅಲ್ಲದೆ ಗೋಡೆ ಬಿದ್ದ ಪರಿಣಾಮ ನೆರೆ ಮನೆಯ ಗೋಡೆ ಕೂಡ ಬಹುತೇಕ ಹಾನಿಯಾಗಿದೆ. ಗೋಡೆ ಬೀಳುವ…
ಹಾಸನದಲ್ಲಿ ವರುಣನ ಆರ್ಭಟ
June 12, 2018ಹೇಮಾವತಿ ಜಲಾಶಯದಲ್ಲಿ ಜೀವಕಳೆ ಶಾಲಾ-ಕಾಲೇಜುಗಳಿಗೆ ರಜೆ ವಿದ್ಯುತ್, ರಸ್ತೆ-ರೈಲು ಸಂಚಾರ ವ್ಯತ್ಯಯ ಹಾಸನ: ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ರಸ್ತೆ, ರೈಲು ಸಂಚಾರ ಅಸ್ತವ್ಯಸ್ತವಾಗಿರುವುದಲ್ಲದೆ, ಅನೇಕ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮುಂಗಾರಿನ ಆರ್ಭಟ ಕಳೆದ ನಾಲ್ಕು ದಿನದಿಂದ ಜೋರಾಗಿದ್ದು, ಭಾನುವಾರ ಸುರಿದ ಭಾರೀ ಮಳೆಗೆ ಜನರು ತತ್ತರಿಸಿದ್ದಾರೆ. ಹಲವೆಡೆ ಮರಗಳು ಧರೆಗುರುಳಿದ್ದು, ಮನೆಗಳ ಗೋಡೆಗಳು ಕುಸಿದಿವೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯೂ ಸಂಭವಿಸಿದೆ. ಹಾಸನ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ರೈಲು…