ಶ್ರೀ ಜವರನಹಳ್ಳಿ ವಿರಕ್ತ ಮಠದ ಕಾರ್ಯಕ್ರಮದಲ್ಲಿ ಪ್ರಭು ಸ್ವಾಮೀಜಿ ಉಪನ್ಯಾಸ ಹಾಸನ: ಬದುಕು ಶ್ರೇಷ್ಠಮಟ್ಟ ಕ್ಕೇರಲು ಧಾರ್ಮಿಕವಾಗಿ ಮತ್ತು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಬಳ್ಳಾರಿಯ ಕಂಪ್ಲಿ ಮಠದ ಶ್ರೀ ಪ್ರಭು ಸ್ವಾಮೀಜಿ ಸಲಹೆ ನೀಡಿದರು. ನಗರದ ಶ್ರೀ ಜವೇನಹಳ್ಳಿ ಮಠದಲ್ಲಿ ಧ್ಯಾನ ಧಾಮ ಶ್ರೀ ಜವರನಹಳ್ಳಿ ವಿರಕ್ತ ಮಠದ ಶ್ರೀ ಸಂಗಮೇಶ್ವರ ಮಹಾಸ್ವಾಮೀಜಿ 33ನೇ ಪುಣ್ಯಾರಾಧನೆಯಲ್ಲಿ ಮಾತನಾ ಡಿದ ಅವರು, ಶರಣರ ತತ್ವ ಸಿದ್ಧಾಂತ ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ಜೀವನ ಇರುವುದೇ ಅಲ್ಪದಿನ. ಆ…
ಮಕ್ಕಳಿಗೆ ಕೆಲಸವಲ್ಲ, ಶಿಕ್ಷಣ ಕೊಡಿಸಿ: ಬಾಲಕಾರ್ಮಿಕ ವಿರೋಧಿ ದಿನಾಚರಣೆಯಲ್ಲಿ ಜಿಪಂ ಸಿಇಓ ಶ್ವೇತಾ
June 17, 2019ಹಾಸನ, ಜೂ.16- ಮಕ್ಕಳ ಬಾಲ್ಯ ಅಮೂಲ್ಯವಾದುದು. ಮಕ್ಕಳನ್ನು ಯಾವ ಕಾರಣಕ್ಕೂ ಕೆಲಸಕ್ಕೆ ತಳ್ಳದೇ ಕಡ್ಡಾಯ ವಾಗಿ ಶಿಕ್ಷಣ ಕೊಡಿಸಬೇಕು ಎಂದು ಜಿಪಂ ಅಧ್ಯಕ್ಷೆ ಶ್ವೇತಾ ಕರೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಡಳಿತ, ಜಿಪಂ, ಬಾಲಕಾರ್ಮಿಕ ತಡೆ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತಾಶ್ರಯ ದಲ್ಲಿ ಶನಿವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಳಿಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣ ತೊಡುವ ಪ್ರಮಾಣವಚನ…
ಕಡ್ಡಾಯ ಶಿಕ್ಷಣದಿಂದ ಬಾಲ ಕಾರ್ಮಿಕ ಪದ್ಧತಿ ಅಂತ್ಯ
June 17, 2019ಅರಸೀಕೆರೆ: ಶಿಕ್ಷಣ ಎಂಬುದು ಜೀವನದಲ್ಲಿ ಸಿಗುವ ದೊಡ್ಡ ಕೊಡುಗೆ. ಶಿಕ್ಷಣ ಪಡೆದು ಮಕ್ಕಳು ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಕಡ್ಡಾಯ ಶಿಕ್ಷಣ ದಿಂದ ಬಾಲಕಾರ್ಮಿಕ ಪದ್ಧತಿ ತೊಲಗು ತ್ತದೆ ಎಂದು ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ನಿರ್ಮಲಾ ಹೇಳಿದರು. ನಗರದ ಸೇಂಟ್ ಮೇರೀಸ್ ಪ್ರೌಢಶಾಲೆ ಯಲ್ಲಿ ಬಾಲಕಾರ್ಮಿಕರ ವಿರೋಧಿ ದಿನಾ ಚರಣೆಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಅವರು, ಮಕ್ಕಳು ವಿದ್ಯೆ ಯಿಂದ ವಂಚಿತರಾಗಿ ಬಾಲಕಾರ್ಮಿಕ ರಾಗಿ ದುಡಿಯಲು ಪೆÇೀಷಕರ ಅನಕ್ಷರತೆ ಮತ್ತು ಕುಟುಂಬದ ಆರ್ಥಿಕ ದುಃಸ್ಥಿತಿ…
ವಸತಿ ರಹಿತರಿಗಾಗಿ 3 ಸಾವಿರ ನಿವೇಶನ
June 16, 2019ಹಾಸನ: ನಗರದ ವಿವಿಧೆಡೆ 3000 ನಿವೇಶನಗಳಿಗೆ ಜಾಗ ಗುರುತಿಸ ಲಾಗಿದ್ದು, ಹಲವು ವರ್ಷಗಳಿಂದ ಹಾಸನ ನಗರದಲ್ಲಿ ವಾಸವಿರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಸದ್ಯದಲ್ಲೇ ವಿತರಣೆಯಾಗಲಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ನಗರಸಭೆ ಅಧಿಕಾರಿ ಗಳಿಗೆ ಶನಿವಾರ ನಿರ್ದೇಶನ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಹಾಸನ ನಗರದಲ್ಲಿ ಹಲವು ವರ್ಷಗಳಿಂದ ವಾಸವಿದ್ದೂ ಸ್ವಂತ ಮನೆ ಹೊಂದಲಾಗದೇ ಪರಿತಪಿಸುತ್ತಿರುವ ಬಡವರಿಗೆ ನಿವೇಶನ ನೀಡಬೇಕಿದೆ. ಈ ನಿಟ್ಟಿನಲ್ಲಿ ಜೂ.19ರಂದು…
`ಅಮೃತ್ ಯೋಜನೆ’ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 16, 2019ಹಾಸನ: ನಗರಕ್ಕೆ ಕುಡಿ ಯುವ ನೀರು ಪೂರೈಸುವ `ಅಮೃತ್ ಯೋಜನೆ’ ಅನುಷ್ಠಾನವನ್ನು ಕಾಲಮಿತಿ ಯಲ್ಲಿ ಪೂರ್ಣಗೊಳಿಸಿ ಎಂದು ಜಿಲ್ಲಾ ಧಿಕಾರಿ ಅಕ್ರಂ ಪಾಷ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಡಿಸಿ ಕಚೇರಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳ ಬೇಕಿರುವ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು ಕುಡಿಯುವ ನೀರಿನ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೈಪ್ಲೈನ್ ಆಳವಡಿಕೆಗೆ ಅರಣ್ಯ ಇಲಾಖೆಯಿಂದ ಇದ್ದ ಅಡ್ಡಿ ನಿವಾರಿಸಲು ಹಿರಿಯ…
ಪೋಷಕರು ಕಾಲಕಾಲಕ್ಕೆ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ
June 16, 2019ಅರಸೀಕೆರೆ: ಪೋಷಕರು ಶಾಲಾ-ಕಾಲೇಜಿಗೆ ಮಕ್ಕಳನ್ನು ಸೇರಿಸಿದರಷ್ಟೇ ಸಾಲದು, ತಿಂಗಳಿಗೊಮ್ಮೆ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಮಕ್ಕಳ ಚಟುವಟಿಕೆ, ವ್ಯಾಸಂಗದ ವೈಖರಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಅರಿಯುತ್ತಿರಬೇಕು ಎಂದು ಆದಿಚುಂಚನ ಗಿರಿ ಮಹಾಸಂಸ್ಥಾನದ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹಿತವಚನ ನೀಡಿದರು. ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಆದಿಚುಂಚನಗಿರಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ವರ್ಷಾರಂಭದಲ್ಲಿ ಶಿಕ್ಷಕ ವೃಂದ ಎಷ್ಟೇ…
ಬೇಲೂರಲ್ಲಿ ಸಸಿ ನೆಟ್ಟ ಸಾಲು ಮರದ ತಿಮ್ಮಕ್ಕ
June 16, 2019ಬೇಲೂರು: ನಾನು ಅಂದು ನೆಟ್ಟ ಸಸಿಗಳು ಇಂದು ದೊಡ್ಡ ಮರ ಗಳಾಗಿ ಬೆಳೆದಿರುವಂತೆ ಇಂದಿನ ಯುವ ಪೀಳಿಗೆ ಮತ್ತು ರೈತ ಮಕ್ಕಳು ಗಿಡ ಮರ ಗಳನ್ನು ಬೆಳೆಸುವ ಮೂಲಕ ನಾಡಿನ ಪರಿಸರಕ್ಕೆ ನೆರಳಾಗಲಿ ಎಂದು ಸಾಲು ಮರದ ತಿಮ್ಮಕ್ಕ ಹಾರೈಸಿದರು. ಬೇಲೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಗುರುವಾರ ಸಸಿ ನೆಡುವ ಮೂಲಕವೇ ಆ ಹಿರಿಯ ಜೀವ ನೆರೆದಿದ್ದ ವರಿಗೆ ಪರಿಸರದ ಪಾಠ ಹೇಳಿದರು. ದೇಶಾದ್ಯಂತ ಮಳೆ-ಬೆಳೆ ಸಾಕಷ್ಟು ಪ್ರಮಾಣದಲ್ಲಾಗಲಿ. ರೈತರ ಜೀವನ ಹಸನಾಗಲಿ. ಕನ್ನಡ ನಾಡಿನ ಉನ್ನತೀ…
ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ 27-85 ಅಗಲೀಕರಣಕ್ಕೆ ಮೊದಲ ಹೆಜ್ಜೆ
June 13, 2019* 3 ತಾಲೂಕುಗಳಲ್ಲಿ ರಸ್ತೆ ಅಗಲೀಕರಣಕ್ಕೆ ಮುಂದಾದ ಲೋಕೋಪಯೋಗಿ ಇಲಾಖೆ * ಅರಕಲಗೂಡು, ಸಕಲೇಶಪುರ, ಬೇಲೂರು ತಾಲೂಕುಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಹಾಸನ: ಜಿಲ್ಲೆಯ ವ್ಯಾಪ್ತಿಯ ರಾಜ್ಯ ಹೆದ್ದಾರಿ 27 ಮತ್ತು 85ರಲ್ಲಿ ರಸ್ತೆ ಅಗಲೀಕರಣದ ದಶಕಗಳ ಹಿಂದಿನ ಯೋಜನೆ ಕೊನೆಗೂ ಕಾರ್ಯರೂಪ ಕ್ಕಿಳಿಯುವ ಸೂಚನೆ ಹೊರಬಿದ್ದಿದೆ. ಎರಡೂ ರಾಜ್ಯ ಹೆದ್ದಾರಿಗಳನ್ನು ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ 111 ಕಿ.ಮೀ.ಗಳಷ್ಟು ದೂರ ಅಭಿವೃದ್ಧಿಪಡಿಸಲಿರುವ ರಾಜ್ಯ ಲೋಕೋಪಯೋಗಿ ಇಲಾಖೆಯು ಅರಕಲಗೂಡು, ಬೇಲೂರು ಮತ್ತು ಸಕಲೇಶಪುರ ತಾಲೂಕಿನ ವಿವಿಧೆಡೆ ಭೂಸ್ವಾಧೀನಕ್ಕೆ ಮುಂದಾಗಿದೆ. ಈ…
ಮನೆ ಮಂಜೂರಿಗೆ ಹಣ ಕೇಳುವ ಅಧಿಕಾರಿಗಳು
June 13, 2019ಅರಕಲಗೂಡು ತಾಪಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಎಟಿಆರ್ ಬೇಸರ ಅರಕಲಗೂಡು: ವಸತಿ ಯೋಜನೆ ಯಡಿ ಮನೆ ಮಂಜೂರು ಮಾಡುವುದಕ್ಕೆ ಫಲಾನು ಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಹೀಗಾದರೆ ಸರ್ಕಾರದ ಜನೋಪಯೋಗಿ ಯೋಜನೆಗಳನ್ನು ಜನರಿಗೆ ತಲುಪಿಸುವುದಾದರೂ ಹೇಗೆ ಎಂದು ಶಾಸಕ ಎ.ಟಿ. ರಾಮಸ್ವಾಮಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತ ನಾಡಿದ ಅವರು, ಅಧಿಕಾರಿಗಳು ಬದ್ಧತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ಸರ್ಕಾರದ…
ಮಳೆಗಾಲ: ಮುಂಜಾಗ್ರತಾ ಕ್ರಮ ಕೈಗೊಳ್ಳಿ
June 13, 2019ನಗರ ಪ್ರದಕ್ಷಿಣೆ ವೇಳೆ ಅಧಿಕಾರಿಗಳಿಗೆ ಶಾಸಕ ಪ್ರೀತಂ ಗೌಡ ಸೂಚನೆ ಹಾಸನ: ಮಳೆಗಾಲ ಆರಂಭ ವಾಗಿದ್ದು, ಅಧಿಕಾರಿಗಳು ಸಮಸ್ಯೆಗಳು ಎದು ರಾಗದಂತೆ ಮುಂಜಾಗರೂಕತಾ ಕ್ರಮ ಗಳನ್ನು ಕೈಗೊಳ್ಳಬೇಕು ಎಂದು ಹಾಸನ ಶಾಸಕ ಪ್ರೀತಂ ಗೌಡ ಸೂಚನೆ ನೀಡಿದರು. ಬುಧವಾರ ನಗರದಲ್ಲಿ ವಾರ್ಡ್ ವೀಕ್ಷಣೆ ಮಾಡಿದ ಶಾಸಕರು, ನಗರದಲ್ಲಿ ಮಳೆ ನೀರು ಸುಲಭವಾಗಿ ಹರಿದುಹೋಗಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆ ಗಾಲದಲ್ಲಿ ಯಾವುದೇ ಸಮಸ್ಯೆ ಬಾರ ದಂತೆ ಮುಂಚಿತವಾಗಿಯೇ ಜಾಗ್ರತೆ ವಹಿಸ ಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ…