ಹಾಸನ: ಲೋಕಸಭೆ ಚುನಾ ವಣೆಯಲ್ಲಿ ತನ್ನ ಪುತ್ರ ಪ್ರಜ್ವಲ್ ಸೋಲುವ ಭೀತಿಯಲ್ಲಿ ಹತಾಶರಾಗಿ ನನ್ನನ್ನು ಡಾನ್ ಎಂದಿದ್ದು, ಇದು ರಾಜಕೀಯ ಯುದ್ಧ, ಇಲ್ಲಿ ಅವರ ಸಾಮಥ್ರ್ಯದಲ್ಲಿ ಗೆಲ್ಲಬೇಕೇ ಹೊರತು ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುವುದರ ಮೂಲಕ ಗೆಲ್ಲಲು ಸಾಧ್ಯ ವಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ತಿರುಗೇಟು ನೀಡಿದರು. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 1991ರಲ್ಲಿ ಹೆಚ್.ಡಿ.ದೇವೇಗೌಡರು ಸೋತು ಮನೆಯಲ್ಲಿ ಇದ್ದಾಗ ಕೆ.ಹೆಚ್. ಹನುಮೇಗೌಡ ಮತ್ತು ನನ್ನ ಸಹಕಾರ ಪಡೆದು, ಕ್ಷೇತ್ರದಲ್ಲಿ…
ಐಟಿ ದಾಳಿಯಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ: ಹೆಚ್.ಡಿ.ರೇವಣ್ಣ
April 17, 2019ಹಾಸನ: ಜೆಡಿಎಸ್ ಮುಖಂಡರ ಮತ್ತು ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇಂತಹ ಗೊಡ್ಡು ಬೆದರಿಕೆಗೆಲ್ಲ ನಾವು ಹೆದರುವುದಿಲ್ಲ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ನೋವು ಕೊಟ್ಟವರು ಯಾರೂ ಉಳಿಯುವುದಿಲ್ಲ. ಬಿಜೆಪಿಯವರು ಕಳೆದ ಹಲವು ದಿನಗಳಿಂದ ಆದಾಯ ತೆರಿಗೆ ಅಧಿಕಾರಿಗಳ ಮೂಲಕ ತಮ್ಮ ಮುಖಂಡರು ಹಾಗೂ ಕಾರ್ಯಕರ್ತರ ಮನೆ ಮೇಲೆ…
ದ್ವಿತೀಯ ಪಿಯುಸಿ: ಜಿಲ್ಲೆಗೆ 6ನೇ ಸ್ಥಾನ
April 16, 2019ಶೇ. 75.19 ಫಲಿತಾಂಶ, ವಿದ್ಯಾರ್ಥಿನಿಯರೇ ಮೇಲುಗೈ ಹಾಸನ: 2019ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯ 13,980 ವಿದ್ಯಾರ್ಥಿಗಳಲ್ಲಿ 10,511 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಶೇಕಡಾವಾರು ಫಲಿತಾಂಶವು ಪ್ರತಿಶತ ಶೇ.75.19 ರೊಂದಿಗೆ ರಾಜ್ಯದಲ್ಲಿ ಜಿಲ್ಲೆಯು 6ನೇ ಸ್ಥಾನದಲ್ಲಿದೆ. 2018ನೇ ಸಾಲಿನಲ್ಲಿ ಶೇ. 73.87 ರೊಂದಿಗೆ 8ನೇ ಸ್ಥಾನ ಹಾಗೂ 2017ನೇ ಸಾಲಿನಲ್ಲಿ ಶೇ.59.88 ಫಲಿತಾಂಶ ದೊಂದಿಗೆ ರಾಜ್ಯದಲ್ಲಿ 11ನೇ ಸ್ಥಾನ ದಲ್ಲಿತ್ತು. ಈ ಬಾರಿ ಶೇ.75.19 ಫಲಿ ತಾಂಶದೊಂದಿಗೆ 6ನೇ ಸ್ಥಾನಕ್ಕೇರಿದೆ. ಬಾಲಕಿಯರು ಶೇಕಡಾ…
ಹಾಸನ, ಬೇಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎ.ಮಂಜು ಪರ ಬೈಕ್ ರ್ಯಾಲಿ
April 16, 2019ಹಾಸನ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಎ.ಮಂಜು ಪರ ಕ್ಷೇತ್ರದ ಶಾಸಕ ಪ್ರೀತಮ್ ಜೆ.ಗೌಡ ನೇತೃತ್ವದಲ್ಲಿ ಸೋಮವಾರ ಬೃಹತ್ ಬೈಕ್ ರ್ಯಾಲಿ ನಡೆಯಿತು. ನಗರದ ಸಾಲಗಾಮೆರಸ್ತೆ, ರಿಂಗ್ ರಸ್ತೆಯ ವೃತ್ತದಲ್ಲಿ ಜಮಾಯಿಸಿದ ಒಂದು ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೈಕ್ ರ್ಯಾಲಿ ಮೂಲಕ ತೆರಳಿ ನಗರದ ವಿವಿಧ ಭಾಗಗಳಲ್ಲಿ ಸಂಚ ರಿಸಿ, ಬಿಜೆಪಿ ಅಭ್ಯರ್ಥಿ ಪರ ಮತ ಹಾಕು ವಂತೆ ಘೋಷಣೆ ಕೂಗಿದರು. ಈ ವೇಳೆ ಹಲವರು ಪ್ರಧಾನಿ ನರೇಂದ್ರ ಮೋದಿರವರ…
ಕೇಂದ್ರದಿಂದ ಐಟಿ, ಚುನಾವಣಾ ಆಯೋಗ ದುರ್ಬಳಕೆ: ಸಚಿವ ಹೆಚ್.ಡಿ.ರೇವಣ್ಣ ಆರೋಪ
April 16, 2019ಹಾಸನ: ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶಕ್ಕೆ ಐಟಿ ದಾಳಿ ಹಾಗೂ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಚುನಾವಣಾಧಿಕಾರಿ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ನೀಡುತ್ತಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮ್ಮೆ ನಾಮಪತ್ರ ಅಂಗೀಕಾರವಾದ ನಂತರ ಅದನ್ನು ಪ್ರಶ್ನೆ ಮಾಡಲು ಆಗುವುದಿಲ್ಲ. ಏನಿದ್ದರೂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಬಹುದು. ನನ್ನ ಮಗ ದೇವೇಗೌಡ ಎಂಬುವರ ಬಳಿ 10ಲಕ್ಷ…
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರೋಡ್ ಶೋ
April 16, 2019ಅರಸೀಕೆರೆ: ನಗರದಲ್ಲಿ ಭಾನು ವಾರ ರಾತ್ರಿ ಶಾಸಕ ಕೆ.ಎಂ.ಶಿವಲಿಂಗೇ ಗೌಡ ಹಾಗೂ ಜೆಡಿಎಸ್-ಕಾಂಗ್ರೆಸ್ ನಾಯ ಕರ ನೇತೃತ್ವದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ನಗರದ ಅಯ್ಯಪ್ಪಸ್ವಾಮಿ ದೇವಾಲಯ ದಿಂದ ರೋಡ್ ಶೋ ಆರಂಭಿಸಿದ ಅವರು, ಹಾಸನ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತ ಮೂಲಕ ರಾಷ್ಟ್ರೀಯ ಹೆದ್ದಾರಿ 206, ಬಿ.ಹೆಚ್.ರಸ್ತೆಯಲ್ಲಿ ಸಾಗಿ ಪಿ.ಪಿ. ವೃತ್ತದಲ್ಲಿ ಸಮಾವೇಶಗೊಂಡರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಜಿಲ್ಲೆಯ…
ಆರೋಗ್ಯ ಸೌಲಭ್ಯ ಉತ್ತಮಗೊಳಿಸಲು ಸೂಚನೆ
April 16, 2019ಹಾಸನ: ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ಆರೋಗ್ಯ ಚಿಕಿತ್ಸಾ ಸೌಲಭ್ಯ ಇನ್ನಷ್ಟು ಉತ್ತಮ ಗೊಳಿಸುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯ ಅರ್ಪಣಾ ಮನೋ ಭಾವದ ಸೇವೆ ಅಗತ್ಯ ಎಂದು ಜಿಪಂ ಸಿಇಓ ಡಾ.ಕೆ.ಎನ್.ವಿಜಯಪ್ರಕಾಶ್ ತಿಳಿಸಿದರು. ಹೊಳೆನರಸೀಪುರ ತಾಲೂಕು ಆಸ್ಪತ್ರೆ ಹಾಗೂ ಮೊಸಳೆ ಹೊಸಳ್ಳಿ, ಪಡುವಲ ಹಿಪ್ಪೆ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ಮಾಡಿ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳು, ವೈದ್ಯರ ಹಾಜರಾತಿಗಳ ಬಗ್ಗೆ ಪರಿಶೀಲಿಸಿದ ಅವರು ಸಾರ್ವಜನಿಕರ ಅನು ಕೂಲಕ್ಕಾಗಿ ನಿರ್ಮಿಸಲಾಗಿರುವ ಸುಸರ್ಜಿತ ಆಸ್ಪತ್ರೆ ಹಾಗೂ ಇತರ…
ಜಿಲ್ಲಾದ್ಯಂತ ಸಂವಿಧಾನ ಶಿಲ್ಪಿ ಜನ್ಮ ದಿನಾಚರಣೆ
April 14, 2019ಅಂಬೇಡ್ಕರ್ ಕೊಡುಗೆ ಅಪಾರ: ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಲ್ಲೆಡೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ ಹಾಸನ: ಜಿಲ್ಲಾದ್ಯಂತ ಭಾನು ವಾರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆಚರಿಸಲಾಯಿತು. ಹಾಸನ, ಆಲೂರು, ಅರಸೀಕೆರೆ, ಬೇಲೂರು, ಸಕಲೇಶಪುರ, ಅರಕಲಗೂಡು, ಶ್ರವಣ ಬೆಳಗೊಳ, ರಾಮನಾಥಪುರ, ಹೊಳೆನರ ಸೀಪುರ, ಚನ್ನರಾಯಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ವಿಟ್ಟು ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿ ಸುವ ಮೂಲಕ ಗೌರವ ಸಮರ್ಪಣೆ…
ರಾಮನವಮಿ: ರಾಮರಸ ಕುಡಿದು ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ
April 14, 2019ಹಾಸನ: ರಾಮರಸ ಕುಡಿದು 100ಕ್ಕೂ ಹೆಚ್ಚುಮಂದಿ ಅಸ್ವಸ್ಥರಾಗಿದ್ದು, ಅವರಲ್ಲಿ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿರುವ ಘಟನೆ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ನಂಜದೇವರ ಕಾವಲು ಗ್ರಾಮದಲ್ಲಿ ಶನಿವಾರ ಶ್ರೀರಾಮನವಮಿ ಅಂಗವಾಗಿ ರಾಮರಸವನ್ನು ವಿತರಿಸಲಾಯಿತು. ಇದನ್ನು ಸೇವಿಸಿದ 100ಕ್ಕೂ ಹೆಚ್ಚು ಮಂದಿ ಸುಸ್ತು, ವಾಂತಿಯಿಂದ ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಗ್ರಾಮದ ಲೋಕೇಶ್ (38), ಮಂಜೇಗೌಡ (50), ಶಂಕರಗೌಡ (55), ರಂಗಸ್ವಾಮಿ (26), ನವೀನ್ (28), ಪವನ್ (18) ಸೇರಿದಂತೆ ಒಟ್ಟು 9 ಜನರ…
ಮತದಾನಕ್ಕೆ 48 ಗಂಟೆಗಳ ಮುನ್ನ ಬಹಿರಂಗ ಪ್ರಚಾರಕ್ಕೆ ತೆರೆ
April 14, 2019ಹಾಸನ: ಲೋಕಸಭಾ ಚುನಾವಣೆಯಲ್ಲಿ ಮತದಾನ ಮುಕ್ತಾಯಗೊಳ್ಳುವ 48 ಗಂಟೆಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬಹಿರಂಗ ಪ್ರಚಾರ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಮತದಾನ ಮುಕ್ತಾಯದ ಅಂತಿಮ 48 ಗಂಟೆಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟ್ಗಳ ಸಭೆ ನಡೆಸಿದ ಅವರು ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ನಿರ್ದೇಶನ ನೀಡಿದರು….