ಹಾಸನ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಬರ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯ 8 ತಾಲೂಕುಗಳು ಈಗಾಗಲೇ ಬರಪೀಡಿತ ಎಂದು ಘೋಷಿತವಾಗಿದ್ದು ಜನ ಜಾನುವಾರುಗಳಿಗೆ ನೀರಿನ ಯಾವುದೇ ತೊಂದರೆ ಉಂಟಾಗದಂತೆ ಪರಿಸ್ಥಿತಿ ನಿಭಾ ಯಿಸಿ ಎಂದು…
ಸಂಭ್ರಮದ ಮಹದೇಶ್ವರ ಜಾತ್ರಾ ಮಹೋತ್ಸವ
March 24, 2019ಗ್ರಾಮಸ್ಥರಿಂದ ಕೋಡಿ ಮಠದ ಶ್ರೀಗಳಿಗೆ ಭಿಕ್ಷಾಟನೆಯ ಗೌರವ ಅರಸೀಕೆರೆ: ತಾಲೂಕಿನ ಸುಕ್ಷೇತ್ರ ಶ್ರೀ ಕೋಡಿಮಠ ಮಹಾ ಸಂಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಹಾರನಹಳ್ಳಿ ಗ್ರಾಮಸ್ಥರು ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತು ಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಅವರಿಗೆ ಭಿಕ್ಷಾಟನೆ ನೀಡಿ ಗೌರವ ಸಮರ್ಪಣೆ ಮಾಡಿದರು. ಕಳೆದ ಎರಡು ದಿನಗಳಿಂದ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ಪ್ರಮುಖ ಧಾರ್ಮಿಕ ಕಾರ್ಯ ಕ್ರಮ ಭಿಕ್ಷಾಟನೆಯು…
ದೇಶದ ಭದ್ರತೆಗಾಗಿ ಬಿಜೆಪಿ ಬೆಂಬಲಿಸಿ: ಎ.ಮಂಜು
March 24, 2019ಬೇಲೂರು: 2019ರ ಲೋಕಸಭಾ ಚುನಾವಣೆ ದೇಶದ ಭದ್ರತೆಯ ಚುನಾವಣೆಯಾಗಿದೆ ಹೊರತು ಎ.ಮಂಜು ಪರವಾದ ಚುನಾವಣೆಯಲ್ಲ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಹೇಳಿದರು. ಬೇಲೂರು ಪಟ್ಟಣದ ಶ್ರೀ ಮಂಜು ನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯ ಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಮತದಾರರು ಚುನಾ ವಣೆಯಲ್ಲಿ ರಾಜಕೀಯ ವಿಶ್ಲೇಷಣೆ ಅರಿಯ ಬೇಕಾಗಿದೆ. ದೇಶದ ಸುಭದ್ರತೆ ಹಾಗೂ ರಕ್ಷಣೆಗಾಗಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಾಗಿದೆ. ಈ ಕಾರಣ ಜಿಲ್ಲೆಯ ಮತ್ತು ತಾಲೂಕಿನ ಪ್ರತಿಯೊಬ್ಬ ಮತದಾ ರರು ಭಾರತೀಯ…
ಜಿಲ್ಲೆಯ ವಿವಿಧೆಡೆ ವಿಶ್ವ ಜಲ ದಿನಾಚರಣೆ
March 24, 2019ಹಾಸನ: ಜಿಲ್ಲೆಯ ವಿವಿಧೆಡೆ ವಿಶ್ವ ನೀರು ದಿನಾಚರಣೆಯನ್ನು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸಲಾಯಿತು.ನೀರು ಅಮೂಲ್ಯ ಪ್ರಾಕೃತಿಕ ಸಂಪತ್ತು. ಇದು ಪ್ರತಿಯೊಂದು ಜೀವಿಯು ಬದುಕುಳಿಯಲು ವಿಕಾಸ ಹೊಂದಲು ಜೀವಾಮೃತವಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಧಿಕಾರಿ ಕೆ.ಸಿ.ದೇವರಾಜೇಗೌಡ ತಿಳಿಸಿದರು. ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಶುಕ್ರ ವಾರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಯಿಂದ ನಡೆದ ವಿಶ್ವಜಲ ದಿನಾ ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾಗರಿಕತೆ ಬೆಳೆದಂತೆಲ್ಲಾ…
ಹಾಸನದಲ್ಲಿ ಪ್ರಜ್ವಲ್ ನಾಮಪತ್ರ ಸಲ್ಲಿಕೆ
March 23, 2019ಹಾಸನ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಶುಕ್ರವಾರ ಅಪಾರ ಬೆಂಬಲಿಗರು, ಕಾರ್ಯಕರ್ತರೊಂದಿಗೆ ನಗರದ ಪ್ರಮುಖ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮಧ್ಯಾಹ್ನ 12.35ರಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳು ಆದ ಜಿಲ್ಲಾಧಿಕಾರಿ ಅಕ್ರಂಪಾಷ ಅವರಿಗೆ ನಾಮಪತ್ರ ಸಲ್ಲಿಸಿದರು. ಪ್ರಜ್ವಲ್ರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಇದ್ದರು. ಈ ವೇಳೆ ಸಿಎಂ…
ಲೋಕಸಭಾ ಚುನಾವಣೆ 2019: ಜಿಲ್ಲಾದ್ಯಂತ ಮತದಾನ ಜಾಗೃತಿ
March 22, 2019ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಕರಪತ್ರ ಹಂಚಿಕೆ, ಮತದಾನದಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಹಾಸನ: ಏಪ್ರಿಲ್ 18ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಆಡಳಿತ ಚುನಾವಣಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾ ಗಿದ್ದು, ಗುರುವಾರ ಜಿಲ್ಲಾದ್ಯಂತ ಜಾಗೃತಿ ಜಾಥಾ, ಕರಪತ್ರ ಹಂಚಿಕೆ, ಬೀದಿ ನಾಟಕ ಮೂಲಕ ಮತದಾನದ ಬಗ್ಗೆ ಸಾರ್ವ ಜನಿಕರಲ್ಲಿ ಅರಿವು ಮೂಡಿಸಲಾಯಿತು. ಮತದಾನ ಜಾಗೃತಿಗೆ ಚುನಾವಣಾ ವೀಕ್ಷಕರಿಂದ ಚಾಲನೆ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಹಾಸನ ನಗರಸಭೆ…
ಕಾಂಗ್ರೆಸ್ ಮುಖಂಡರ ಮನೆಗೆ ರೇವಣ್ಣ ಭೇಟಿ
March 22, 2019ಪುತ್ರನಿಗೆ ಬೆಂಬಲ ನೀಡುವಂತೆ ಬಿ.ಕೆ.ರಂಗಸ್ವಾಮಿ, ಎಸ್.ಎಂ. ಆನಂದ್ಗೆ ಮನವಿ ಹಾಸನ: ಲೋಕಸಭೆ ಚುನಾ ವಣೆಯಲ್ಲಿ ಪುತ್ರ ಪ್ರಜ್ವಲ್ ಗೆಲ್ಲಿಸಲು ಪಣ ತೊಟ್ಟಿರುವ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಗುರುವಾರವೂ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರಿದರು. ಕಾಂಗ್ರೆಸ್ ನಾಯಕರಾದ ಬಿ.ಕೆ.ರಂಗ ಸ್ವಾಮಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ.ಆನಂದ್ ನಿವಾಸಕ್ಕೆ ಭೇಟಿ ನೀಡಿದ ಅವರು ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಅವರನ್ನು ಬೆಂಬಲಿಸು ವಂತೆ ಮನವಿ ಮಾಡಿದರು. ನಗರದ ವಿದ್ಯಾನಗರದಲ್ಲಿನ ಬಿ.ಕೆ.ರಂಗ ಸ್ವಾಮಿ ನಿವಾಸಕ್ಕೆ…
ವಿಶ್ವ ಅರಣ್ಯ ದಿನಾಚರಣೆ
March 22, 2019ಅರಸೀಕೆರೆ: ನಗರದವ ತಾಲೂಕು ಕಚೇರಿ ಆವರಣದಲ್ಲಿ ವಲಯ ಸಾಮಾಜಿಕ ಅರಣ್ಯ ಇಲಾಖೆಯಿಂದ ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಅರಣ್ಯ ದಿನ ಆಚರಿಸಲಾಯಿತು. ವಲಯ ಅರಣ್ಯಾಧಿಕಾರಿ ಶ್ರೀಲಕ್ಷ್ಮಿ ಮಾತನಾಡಿ, ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಉತ್ತಮ ಪರಿಸರ ಹಾಗೂ ಮಳೆಗಾಗಿ ನಾವು ಗಿಡ ಮರಗಳನ್ನು ಹೆಚ್ಚು ಬೆಳೆಸಬೇಕು. ಶಾಲಾ ಮಕ್ಕಳಿಗೆ ಈ ಕುರಿತು ಪಠ್ಯಕ್ರಮದಲ್ಲಿ ಹೆಚ್ಚಿನ ಒತ್ತು ನೀಡಿ ಅರಿವು ಮೂಡಿಸ ಬೇಕು. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡಿದರೆ ಪ್ರಕೃತ್ತಿಯು ತನ್ಮೂಲಕ ಭಾರೀ ನಷ್ಟವನ್ನು…
ಬೇಲೂರು ತಾಪಂ ಉಪಾಧ್ಯಕ್ಷರಾಗಿ ಜಮುನಾ ಆಯ್ಕೆ
March 22, 2019ಬೇಲೂರು: ಬೇಲೂರು ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಅರೇಹಳ್ಳಿ ತಾಲೂಕು ಪಂಚಾಯಿತಿ ಕ್ಷೇತ್ರದ ಜಮುನಾ ಅಣ್ಣಪ್ಪ ಆಯ್ಕೆಯಾದರು. ಉಪಾಧ್ಯಕ್ಷರಾಗಿದ್ದ ಕಮಲಚಿಕ್ಕಣ್ಣ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಜಮುನಾ ಅಣ್ಣಪ್ಪ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸ ಲಾದ ಹಿನೆÀ್ನಲೆಯಲ್ಲಿ ಹೆಚ್ಚಿನ ಸದಸ್ಯರ ಬಲ ಹೊಂದಿರುವ ಜೆಡಿಎಸ್ನ ಒಳ ಒಪ್ಪಂದ ದಂತೆ ಮೊದಲ ಅವಧಿಗೆ ಕಮಲಮ್ಮ ದೊರೆ ಸ್ವಾಮಿ ಉಪಾಧ್ಯಕ್ಷರಾಗಿದ್ದು, ಎರಡನೇ ಅವಧಿಯಲ್ಲಿ ಕಮಲಾಚಿಕ್ಕಣ್ಣ ಕೂಡ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಪಕ್ಷದ…
ಚುನಾವಣಾ ಕರ್ತವ್ಯ ಲೋಪ: ಮೂವರ ಅಮಾನತು
March 21, 2019ಹಾಸನ: ಲೋಕಸಭಾ ಚುನಾವಣೆ ಕರ್ತವ್ಯದಲ್ಲಿ ಲೋಪವೆಸ ಗಿದ ಮೂವರು ಸರ್ಕಾರಿ ನೌಕರರನ್ನು ಅಮಾನತುಗೊಳಿಸಿರುವ ಜಿಲ್ಲಾ ಚುನಾ ವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಅಕ್ರಂ ಪಾಷ, ಪೊಲೀಸ್ ಇಲಾಖೆಯ ಇಬ್ಬರು ಸಿಬ್ಬಂದಿ ವಿರುದ್ಧ ಕ್ರಮ ಕೈಗೊ ಳ್ಳುವಂತೆ ಎಸ್ಪಿ ಎ.ಎನ್.ಪ್ರಕಾಶ್ ಗೌಡ ಅವರಿಗೆ ಶಿಫಾರಸು ಮಾಡಿದ್ದಾರೆ. ಬಸವಾಪಟ್ಟಣದ ಹೆಚ್.ಎಂ.ಎಸ್ ಸರ್ಕಾರಿ ಪಿಯು ಕಾಲೇಜು ಉಪ ನ್ಯಾಸಕ ದೀಪು ಎಸ್.ವೈ, ಬನ್ನೂರು ಮತ್ತು ಆಲದಹಳ್ಳಿ ಗ್ರಾಪಂ ಕಾರ್ಯ ದರ್ಶಿಗಳಾದ ಸುನೀಲ್ ಕುಮಾರ್ ಮತ್ತು ಯೋಗೇಶ್ ಚುನಾವಣಾ ಕರ್ತವ್ಯದಲ್ಲಿ ಲೋಪವೆಸಗಿ ಅಮಾನತುಗೊಂಡವರು. ಅರಕಲಗೂಡು…