ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹಾಸನ: ಸಂಪೂರ್ಣವಾಗಿ ಮೂಲಭೂತ ಸೌಕರ್ಯ ಇರುವಂತಹ ನಿವೇಶನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು. ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿಂದು ಆಯೋಜಿಸಿದ್ದ ಹುಡಾ ಅದಾಲತ್ ಅರ್ಜಿ ವಿತರಣೆ ಮತ್ತು ಸ್ವೀಕೃತಿ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಅವರು, ಶೇ.100 ರಷ್ಟು ಮೂಲಭೂತ ಸೌಕರ್ಯವಿರುವ ನಿವೇಶನಗಳನ್ನು ಮಾತ್ರವೇ ಮಾರಾಟ ಮಾಡಿ. ಸಮಸ್ಯೆಗಳಿರುವಂತಹ ನಿವೇಶನ ಗಳನ್ನು ಮಾರಾಟ ಮಾಡಬೇಡಿ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಗಳಿಗೆ ಸೂಚನೆ ನೀಡಿದರು. ಸುಮಾರು…
ಗೆಂಡೇಹಳ್ಳಿ ರಸ್ತೆ ವಿಸ್ತರಣೆ ಕಾಮಗಾರಿಗೆ ರೇವಣ್ಣ ಚಾಲನೆ
February 25, 2019ಬೇಲೂರು: ಗೆಂಡೇಹಳ್ಳಿ ಯಿಂದ ಬೇಲೂರಿಗೆ ತೆರಳುವ ಲೋಕೋ ಪಯೋಗಿ ರಸ್ತೆ ವಿಸ್ತರಣೆ ಕಾಮಗಾರಿ ಗುದ್ದಲಿಪೂಜೆ ಹಾಗೂ ಸರ್ಕಾರಿ ಪಿಯು ಕಾಲೇಜು ಕಟ್ಟಡದ ಉದ್ಘಾಟನೆಯನ್ನು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಸೇತುವೆಗಳ ನಿರ್ಮಾಣದ ಅಗತ್ಯವಿದೆ. ಜಾವಗಲ್ ಹೋಬಳಿಯ ರಸ್ತೆ, ಸೇತುವೆ ಕಾಮಗಾರಿಗೆ 58 ಕೋಟಿ ರೂ.ಗಳ ಅನುದಾನಕ್ಕೆ ಮಂಜೂರಾತಿ ನೀಡ ಲಾಗುತ್ತಿದೆ. ಈ ಹೋಬಳಿಯಲ್ಲಿ 5 ಸೇತುವೆ ನಿರ್ಮಿಸುವ ಉದ್ದೇಶವಿದೆ. ಗೆಂಡೇಹಳ್ಳಿ ಬಳಿ ಇರುವ ಪಿರಂಗಹಳ್ಳ ಸೇತುವೆಗೂ ಅನುದಾನ…
ಡ್ರಾಪ್ ಕೊಡುವ ನೆಪದಲ್ಲಿ ಹಣ ದೋಚುತ್ತಿದ್ದ ದರೋಡೆಕೋರರ ಬಂಧನ
February 25, 2019ಹಾಸನ: ಡ್ರಾಪ್ ಕೊಡುವ ನೆಪ ದಲ್ಲಿ ಕಾರಿಗೆ ಹತ್ತಿಸಿಕೊಂಡು ಮಾರ್ಗ ಮಧ್ಯೆ ಹಲ್ಲೆ ನಡೆಸಿ ಹಣ ದೋಚುತ್ತಿದ್ದ ಇಬ್ಬರು ದರೋಡೆಕೋರರನ್ನು ಬಡಾವಣೆ ಠಾಣೆ ಪೆÇಲೀಸರು ಬಂಧಿಸಿದ್ದು, 9 ಸಾವಿರ ರೂ. ನಗದು, 100 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ 2 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಗೊರೂರು ನಿವಾಸಿ ಇನಾ ಯತ್ (26), ಮಂಡ್ಯ ತಾಲೂಕು ಡಣಾಯ ಕನಪುರದ ಶ್ರೀನಿವಾಸ್ (33) ಬಂಧಿತ ಆರೋಪಿಗಳಾಗಿದ್ದು, ಆಲೂರಿನ ಇಮ್ರಾನ್ ಎಂಬಾತ ನಾಪತ್ತೆಯಾಗಿದ್ದಾನೆ ಎಂದು ಬಡಾವಣೆ ಠಾಣೆ ಪಿಎಸ್ಐ ಪಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ…
ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ
February 25, 2019ಬೇಲೂರು: ಇದೇ 26 ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದು, ಸುಮಾರು 500 ಕೋಟಿ ರೂ. ವೆಚ್ಚದಡಿ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆ ಯಾದ ತಾಲೂಕಿನ ವಿವಿಧ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ಹಾಗೂ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಲು ಫೆ.26ರಂದು ಮಧ್ಯಾಹ್ನ ಹಳೇಬೀಡಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಅಭಿವೃದ್ಧಿ…
ಬೃಹತ್ ಉದ್ಯೋಗ ಮೇಳಕ್ಕೆ ಸಚಿವ ರೇವಣ್ಣ ಚಾಲನೆ
February 24, 2019120 ಕಂಪನಿ ಭಾಗಿ, ಮೊದಲ ದಿನವೇ 12 ಸಾವಿರ ಉದ್ಯೋಗ ಆಕಾಂಕ್ಷಿಗಳ ನೋಂದಣಿ ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕೌಶಲ್ಯ ಮಿಷನ್, ಕೈಗಾ ರಿಕಾ ತರಬೇತಿ ಮತ್ತು ಉದ್ಯೋಗ ಇಲಾ ಖೆಯಿಂದ ಎರಡು ದಿನಗಳ ಕಾಲ ಏರ್ಪ ಡಿಸಲಾಗಿರುವ ಬೃಹತ್ ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಉದ್ಯೋಗ ಮೇಳಗಳಲ್ಲಿ 120 ವಿವಿಧ ಕಂಪನಿಗಳು ಬಂದಿದ್ದು, ಸುಮಾರು 12 ಸಾವಿರ…
ಸೇವಾ ಮನೋಭಾವ ಬೆಳೆಸಲು ಸ್ಕೌಟ್ಸ್, ಗೈಡ್ಸ್ ಸಹಕಾರಿ
February 24, 2019ಆಲೂರು: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಾಗತಿಕವಾಗಿ ಬೆಳೆದ ಸಂಸ್ಥೆ. ಇದರ ಸದಸ್ಯರಾಗುವುದೇ ಒಂದು ಪುಣ್ಯದ ಕೆಲಸ. ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ವಾಗಿರುವ ಶಿಸ್ತು, ಸಂಯಮ, ಸೇವಾ ಮನೋಭಾವ, ಶ್ರದ್ಧೆ, ಜೀವನ ಕೌಶಲ ಗಳನ್ನು ಕಲಿಸುವಲ್ಲಿ ಸ್ಕೌಟ್ ಮತ್ತು ಗೈಡ್ಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ಪ್ರಾಂಶುಪಾಲ ನಾಗೇಶ್ ಹೇಳಿದರು. ತಾಲೂಕಿನ ಮರಸು ಹೊಸಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಯಿಂದ ಹಮ್ಮಿಕೊಂಡಿದ್ದ ಲಾರ್ಡ್ ಬೇಡನ್ ಪೊವೆಲ್ ಜನ್ಮ…
ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ
February 23, 2019ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾ ವಣೆ ಮಾಡಲಾಗಿದೆ. ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು 2017ರ ಜುಲೈ 23 ರಂದು ಹಾಸನ ಡಿಸಿಯಾಗಿ ನೇಮಕ ಮಾಡಲಾಗಿತ್ತು. ಆದರೆ, 2018ರ ಫೆ. 6ರಂದು ಅವರನ್ನು ವರ್ಗಾ ವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ವರ್ಗಾವಣೆ…
ಬಾಕಿ ಕಡತಗಳ ತುರ್ತು ವಿಲೇವಾರಿಗೆ ಡಿಸಿ ಸೂಚನೆ
February 22, 2019ಹಾಸನ: ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ತುರ್ತಾಗಿ ವಿಲೇವಾರಿ ಮಾಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸ ಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗಳ ಬಾಕಿ ಇರುವ ಅರ್ಜಿ ಗಳನ್ನು ತ್ವರಿತವಾಗಿ ವಿಲೇವಾರಿ ಮಾಡ ಬೇಕು ಎಂದು ಸೂಚನೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ಸಂಬಂಧಿಸಿ ದಂತೆ…
ಏ. 8ರಿಂದ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಅಂಗವಾಗಿ ಪೂರ್ವಭಾವಿ ಸಭೆ
February 22, 2019ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆಗೆ ಸೂಚನೆ ಬೇಲೂರು: ಚನ್ನಕೇಶವಸ್ವಾಮಿ ರಥೋತ್ಸವದ ಅಂಗವಾಗಿ ದೇಗುಲದ ಕಚೇರಿ ಯಲ್ಲಿ ಪೂರ್ವಭಾವಿ ಸಭೆ ನಡೆಯಿತು.ಏ. 8ರಿಂದ 21ರವರೆಗೆ ವಿವಿಧ ಉತ್ಸವ ಹಾಗೂ ರಥೋತ್ಸವ ಜರುಗಲಿದೆ. ಈ ಸಂದರ್ಭ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಹಾಗೂ ಪಟ್ಟಣದ ಅಲಂಕಾರದ ಬಗ್ಗೆ ಹೆಚ್ಚು ಗಮನ ಹರಿಸಲು ಸಭೆಯಲ್ಲಿ ತೀರ್ಮಾನಿಸ ಲಾಯಿತು. ಉತ್ಸವ ಸಾಗುವ 8 ಬೀದಿಗಳಲ್ಲಿ ಪ್ರತಿನಿತ್ಯ ಸ್ವಚ್ಛತೆ ಹಾಗೂ ರಸ್ತೆಗೆ ನೀರು ಹಾಕು ವುದು ವಿಷ್ಣು ಸಮುದ್ರ ಕೆರೆಯ ಬಳಿ ಕುಡಿ…
ಸಮಾಜಕ್ಕೆ ಶಿವಕುಮಾರ ಸ್ವಾಮೀಜಿ ಕೊಡುಗೆ ಅಪಾರ
February 22, 2019ಅರಸೀಕೆರೆ: ನಡೆದಾಡುವ ದೇವರು ಡಾ.ಶ್ರೀ.ಶಿವಕುಮಾರ ಸ್ವಾಮೀಜಿ ಯಾವುದೇ ಜಾತಿ, ಮತ ಮತ್ತು ಧರ್ಮ ಗಳಿಗೆ ಸೀಮಿತವಾಗಿರದೇ ಎಲ್ಲರಿಗೂ ಶಿಕ್ಷಣ, ಅನ್ನದಾಸೋಹ ಸೇರಿದಂತೆ ಜೀವನ ರೂಪಿಸಿ ಕೊಳ್ಳಲು ಮಾರ್ಗದರ್ಶಕರಾಗಿದ್ದರು. ಅವರು ಸಮಾಜಕ್ಕೆ ನೀಡಿದ ಕೊಡುಗೆಯಿಂದ ಇಂದಿಗೂ ಎಲ್ಲರ ಮನಸ್ಸಿನಲ್ಲೂ ಶಾಶ್ವತವಾಗಿ ಉಳಿದಿ ದ್ದಾರೆ ಎಂದು ಸುಕ್ಷೇತ್ರ ಹಾರನಹಳ್ಳಿ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ನಗರದ ಕೋಡಿಮಠ ಕಾಲೇಜು ಆವರ ಣದಲ್ಲಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಯುವ ಬಳಗದಿಂದ ಆಯೋಜಿಸಿದ್ದ ಸಿದ್ದಗಂಗಾ ಮಠದ ಲಿಂಗೈಕ್ಯ…