Tag: Hassan

ಕನ್ನಡ ಭಾಷೆ-ಸಾಹಿತ್ಯ, ಕಲೆ ಉಳಿವಿಗೆ ಮೈಸೂರು ಸಂಸ್ಥಾನದ ಕೊಡುಗೆ ಅಪಾರ
ಹಾಸನ

ಕನ್ನಡ ಭಾಷೆ-ಸಾಹಿತ್ಯ, ಕಲೆ ಉಳಿವಿಗೆ ಮೈಸೂರು ಸಂಸ್ಥಾನದ ಕೊಡುಗೆ ಅಪಾರ

September 9, 2018

ಹಾಸನ: ಹತ್ತೊಂಬತ್ತನೇ ಶತಮಾನದಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡ ಪ್ರಾಂತ್ಯಗಳನ್ನು ಒಗ್ಗೂಡಿಸಿದ ಮೈಸೂರು ಸಂಸ್ಥಾನ, ಭಾಷೆ-ಸಾಹಿತ್ಯ, ಕಲೆ ಉಳಿಸುವ ನಿಟ್ಟಿನಲ್ಲಿ ಅಪಾರ ಕೊಡುಗೆ ನೀಡಿದೆ ಎಂದು ಮೈಸೂರಿನ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯಾ ಪೂರ್ವ ಮತ್ತು ನಂತರದ ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಮೈಸೂರು ಮಹಾಸಂಸ್ಥಾನ ರಾಜ್ಯಕ್ಕೆ ಉತ್ತಮ ಆಡಳಿತ…

ರಾಜಕೀಯ ಪ್ರವೇಶ ಊಹಾಪೋಹಕ್ಕೆ ತೆರೆ ಎಳೆದ ಯುವರಾಜ
ಹಾಸನ

ರಾಜಕೀಯ ಪ್ರವೇಶ ಊಹಾಪೋಹಕ್ಕೆ ತೆರೆ ಎಳೆದ ಯುವರಾಜ

September 9, 2018

ಹಾಸನ:  ಮೈಸೂರು ಯುವರಾಜರು ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಊಹಾಪೋಹಕ್ಕೆ ಸ್ವತಃ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೇ ತೆರೆ ಎಳೆದಿದ್ದಾರೆ. ಜಿಲ್ಲಾ ಕಸಾಪದಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿಲು ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ್ದ ಅವರು, ಸುದ್ದಿಗಾರರಿಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ರಾಜಕೀಯದ ಬಗ್ಗೆ ಸದ್ಯಕ್ಕೆ ನನಗೆ ಆಸಕ್ತಿಯಿಲ್ಲ. ಹಿಂದಿನಿಂದಲೂ ಜನರೊಂದಿಗೆ ರಾಜಪರಂಪರೆಯ ನಂಟು ಇದೆ. ಆ ಸಂಬಂಧವನ್ನು ಮುಂದುವರಿಸಿಕೊಂಡು ಹೋಗೋದಷ್ಟೇ ನನ್ನ ಮುಂದಿರುವ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು. ಮಂಡ್ಯದಿಂದ ಲೋಕಸಭೆಗೆ…

ಸಚಿವ ಹೆಚ್.ಡಿ.ರೇವಣ್ಣ ತಾಲೂಕಿಗೆ ಮಾತ್ರ ಉಸ್ತುವಾರಿ
ಹಾಸನ

ಸಚಿವ ಹೆಚ್.ಡಿ.ರೇವಣ್ಣ ತಾಲೂಕಿಗೆ ಮಾತ್ರ ಉಸ್ತುವಾರಿ

September 9, 2018

ಹೊಳೆನರಸೀಪುರ:  ಲೋಕೋ ಪಯೋಗಿ ಸಚಿವರು ಕೇವಲ ಅವರ ತಾಲೂಕಿಗೆ ಮಾತ್ರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗಾರಮೇಶ್ ಟೀಕಿಸಿದರು. ತಾಲೂಕಿನ ಗುಡ್ಡೇನಹಳ್ಳಿ ಏತನೀರಾ ವರಿ ಯೋಜನಾ ಯಂತ್ರಾಗಾರದ ಬಳಿ ವಿದ್ಯುತ್ ಟಿಸಿ ದುರಸ್ತಿಗಾಗಿ ಹಳ್ಳಿಮೈಸೂರು ಹೋಬಳಿ ಕಾರ್ಯಕರ್ತರು ಹಮ್ಮಿಕೊಂ ಡಿದ್ದ ಪ್ರತಿಭಟನೆ ನೇತೃತ್ವ ವಹಿಸಿದ್ದ ಅವರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದರು. ಏತನೀರಾವರಿ ಯೋಜನೆ ಮೂಲಕ ಹಳ್ಳಿಮೈಸೂರು ಹೋಬಳಿಯ ಎಲ್ಲಾ ಕೆರೆ ಗಳಿಗೂ ನೀರು ತುಂಬಿಸುವ ಯೋಜನೆಗೆ…

ತೈಲಬೆಲೆ ಏರಿಕೆ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ
ಹಾಸನ

ತೈಲಬೆಲೆ ಏರಿಕೆ ಖಂಡಿಸಿ ಎಸ್‍ಡಿಪಿಐ ಪ್ರತಿಭಟನೆ

September 9, 2018

ಹಾಸನ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಹೇಮಾವತಿ ಪ್ರತಿಮೆ ಬಳಿ ಜಮಾ ಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾ ತೈಲದ ಬೆಲೆಯೊಂದಿಗೆ ಹೋಲಿಸಿದರೆ ಭಾರ ತೀಯರು ಪೆಟ್ರೋಲಿಯಂ ಉತ್ಪನ್ನಗಳಿಗಾಗಿ ಮಾಡುತ್ತಿರುವ ವೆಚ್ಚ ಹೆಚ್ಚಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಪೆಟ್ರೋ ಲಿಯಂ ಉತ್ಪನ್ನ ಬೆಲೆ ಹೆಚ್ಚುವ ಮೂಲಕ ಬೊಕ್ಕಸಕ್ಕೆ…

ಹಾಸನದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೃದ್ಧ ಸಾವು
ಹಾಸನ

ಹಾಸನದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೃದ್ಧ ಸಾವು

September 8, 2018

ಹಾಸನ: ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಗರ ಹೊರವಲಯದಲ್ಲಿ ನಡೆದಿದೆ. ಸುಮಾರು 62 ವರ್ಷದ ವಯೋವೃದ್ಧ ಸಾವನ್ನಪ್ಪಿದ್ದು, ಮೃತರ ಚಹರೆ ತಿಳಿದು ಬಂದಿಲ್ಲ. ಹಾಸನ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಿದ್ದ ವೃದ್ಧ ಬಾಗಿಲಿನ ಬಳಿ ಬಂದು ನಿಂತಿದ್ದ ಎನ್ನಲಾಗಿದ್ದು, ಭೂವನಹಳ್ಳಿ ಬ್ರಿಡ್ಜ್ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ರೈಲ್ವೆ ಪೆÇಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರಲ್ಲದೆ, ನಗರದ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮೃತದೇಹ ರವಾನಿಸಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಣಾಯಕನಹಳ್ಳಿಯಲ್ಲಿ ಗ್ರಾಮಿಣ ಕೃಷಿ ಕಾರ್ಯಾನುಭವ ಶಿಬಿರ: ಹೈನುಗಾರಿಕೆಯಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲು ಸಲಹೆ
ಹಾಸನ

ಡಣಾಯಕನಹಳ್ಳಿಯಲ್ಲಿ ಗ್ರಾಮಿಣ ಕೃಷಿ ಕಾರ್ಯಾನುಭವ ಶಿಬಿರ: ಹೈನುಗಾರಿಕೆಯಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲು ಸಲಹೆ

September 7, 2018

ಹಾಸನ: ಹೈನುಗಾರಿಕೆಯಲ್ಲಿ ಮೊದಲು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಡಾ.ಮಂಜುನಾಥ್ ರೈತರಿಗೆ ಸಲಹೆ ನೀಡಿದರು. ತಾಲೂಕಿನ ಡಣಾಯಕನಹಳ್ಳಿಯಲ್ಲಿ ಕೃಷಿ ಮಹಾವಿದ್ಯಾಲಯದ ಹಾಸನದ ಅಂತಿಮ ಬಿಎಸ್‍ಸಿ ಕೃಷಿ ವಿದ್ಯಾರ್ಥಿಗಳ ಗ್ರಾಮಿಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಪಶು ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತ ನಾಡಿದರು. ಜಾನುವಾರುಗಳಲ್ಲಿ ಜಂತುಹುಳುಗಳ ನಿವಾರಣೆಗೆ 6 ತಿಂಗಳಿಗೊಮ್ಮೆ ಔಷಧಿ ಯನ್ನು ಕೊಡುತ್ತಿರಬೇಕು. ಗರ್ಭಧರಿಸಿದ ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ಜಂತುಹುಳುಗಳ ನಿವಾರಣಾ ಔಷಧಿ ಯನ್ನು…

ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯಲು ಸೂಚನೆ
ಹಾಸನ

ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ತೆರೆಯಲು ಸೂಚನೆ

September 7, 2018

ಹಾಸನ:ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನಡಿ 14 ದವಸ-ಧಾನ್ಯಗಳು, ಎಣ್ಣೆ ಕಾಳುಗಳು, ದ್ವಿದಳ ಧಾನ್ಯಗಳಿಗೆ ಬೆಂಬಲ ಬೆಲೆ ಘೋಷಿಸಿದ್ದು, ಜಿಲ್ಲೆಯಲ್ಲಿ ಖರೀದಿ ಕೇಂದ್ರ ತೆರೆಯಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮ ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಖರೀದಿ ಕೇಂದ್ರಗಳು ಸ್ಥಾಪನೆ ಕುರಿತಂತೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಸರ್ಕಾರ ನಿಗದಿ ಪಡಿಸಿರುವ ದವಸ ಧಾನ್ಯಗಳ ಪೈಕಿ ಜಿಲ್ಲೆಯಲ್ಲಿ ಭತ್ತ, ರಾಗಿ ಮತ್ತು ಮೆಕ್ಕೆ ಜೋಳ…

ಬೆಂಗಳೂರು ರಸ್ತೆ ವಿಸ್ತರಣೆ ಮುನ್ನವೇ ಡಾಂಬರೀಕರಣ ಕಾಮಗಾರಿ ಪ್ರಾರಂಭ
ಹಾಸನ

ಬೆಂಗಳೂರು ರಸ್ತೆ ವಿಸ್ತರಣೆ ಮುನ್ನವೇ ಡಾಂಬರೀಕರಣ ಕಾಮಗಾರಿ ಪ್ರಾರಂಭ

September 7, 2018

ವಿವಿಧ ಸಂಘಟನೆಗಳಿಂದ ರಸ್ತೆತಡೆ, ಪ್ರತಿಭಟನೆ ಶ್ರವಣಬೆಳಗೊಳ:  ಪಟ್ಟಣದ ಬೆಂಗಳೂರು ರಸ್ತೆಯ ವಿಸ್ತರಣೆ ಕಾಮ ಗಾರಿ ಪ್ರಾರಂಭಿಸುವ ಮುನ್ನವೇ ಡಾಂಬರೀ ಕರಣ ಕಾಮಗಾರಿಯನ್ನು ಕೈಗೆತ್ತಿಕೊಂಡಿ ರುವುದನ್ನು ವಿರೋಧಿಸಿ ಪಟ್ಟಣದಲ್ಲಿ ಬುಧವಾರ ರಾಜ್ಯ ರೈತ ಸಂಘ, ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಪಟ್ಟಣದ ಬೆಂಗಳೂರು ವೃತ್ತದಲ್ಲಿ ಸಮಾ ವೇಶಗೊಂಡ ಪ್ರತಿಭಟನಕಾರರು ಪುರ ಸಭೆಯ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮಹಾಮಸ್ತಕಾಭಿಷೇಕ ಮಹೋತ್ಸವ ಸಂದರ್ಭದಲ್ಲೇ ರಸ್ತೆ ವಿಸ್ತರಣೆ ಮಾಡ ಬೇಕಿತ್ತು. ಆದರೆ,…

ರಸ್ತೆ ಕಾಮಗಾರಿ ಸ್ಥಗಿತ: ಸಾರ್ವಜನಿಕರ ಪರದಾಟ
ಹಾಸನ

ರಸ್ತೆ ಕಾಮಗಾರಿ ಸ್ಥಗಿತ: ಸಾರ್ವಜನಿಕರ ಪರದಾಟ

September 7, 2018

ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ, ಶೀಘ್ರದಲ್ಲಿಯೇ ಪ್ರತಿಭಟನೆ ನಡೆಸುವ ಎಚ್ಚರಿಕೆ ಬೇಲೂರು:ಎಂಟು ತಿಂಗಳ ಹಿಂದೆ ಆರಂಭಗೊಂಡಿದ್ದ ಪಟ್ಟಣದ ಕನಕದಾಸರ ಬೀದಿಯ 4ನೇ ಅಡ್ಡರಸ್ತೆ ಕಾಮಗಾರಿ ಪುರಸಭೆ ಅಧಿಕಾರಿಗಳ ಹಾಗೂ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಸ್ಥಗಿತಗೊಂಡಿದ್ದು ಬಡಾವಣೆಯ ನಿವಾಸಿ ಗಳ ಓಡಾಟಕ್ಕೆ ಅಡ್ಡಿಯಾಗಿದೆ. ಪುರಸಭೆಯ ಅನುದಾನದಲ್ಲಿ ಚರಂಡಿ ನಿರ್ಮಿಸುವುದು ಹಾಗೂ ರಸ್ತೆಯಲ್ಲಿನ ಚಪ್ಪಡಿಗಳ ತೆರವುಗೊಳಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವ ಬಗ್ಗೆ 8 ತಿಂಗಳ ಹಿಂದೆಯೇ ತೀರ್ಥಹಳ್ಳಿಯ ಅತೀಫ್ ಎನ್ನುವವರು ಗುತ್ತಿಗೆ ಪಡೆದಿದ್ದರು. ಈ ಸಂಬಂಧ ಕೆಲಸ ಆರಂಭಿಸಿದ ಅವರು…

ಅತಿವೃಷ್ಟಿ, ಅನಾವೃಷ್ಟಿಯಿಂದ ಅಂದಾಜು 300 ಕೋಟಿ ರೂ. ಹಾನಿ
ಹಾಸನ

ಅತಿವೃಷ್ಟಿ, ಅನಾವೃಷ್ಟಿಯಿಂದ ಅಂದಾಜು 300 ಕೋಟಿ ರೂ. ಹಾನಿ

September 5, 2018

ಬೇಲೂರು: ಈ ಬಾರಿಯ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ತಾಲೂಕಿನಲ್ಲಿ ಕಾಫಿ, ಮೆಣಸು ಹಾಗೂ ಇನ್ನಿತರೆ ಬೆಳೆ ಸೇರಿದಂತೆ ರಸ್ತೆ, ಸೇತುವೆ ಸರ್ಕಾರಿ ಕಟ್ಟಡ, ಮನೆಗಳು ಹಾನಿಯಾಗಿ 300 ಕೋಟಿ ರೂ.ಗೂ ಹೆಚ್ಚು ನಷ್ಟ ಸಂಭವಿಸಿದ್ದು, ನಷ್ಟ ಭರಿಸುವುದಕ್ಕೆ ಕೇಂದ್ರ, ರಾಜ್ಯ ಸರ್ಕಾರ ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಕೆ.ಎಸ್.ಲಿಂಗೇಶ್ ಒತ್ತಾಯಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗ ಸಭೆ ನಡೆಸಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಸಂಭವಿಸಿದ ನಷ್ಟದ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು….

1 80 81 82 83 84 103
Translate »