ಸಂಭ್ರಮದ 4ನೇ ಅಂತಾರಾಷ್ಟ್ರೀಯ ಯೋಗ ದಿನ ಸಾಮೂಹಿಕ ಧ್ಯಾನ, ವಿವಿಧ ಯೋಗಾಸನಗಳ ಪ್ರದರ್ಶನ ಯೋಗಾಭ್ಯಾಸಕ್ಕೆ ವಯಸ್ಸಿನ ಪರಿಮಿತಿ ಇಲ್ಲ: ಶಾಸಕ ಪ್ರೀತಂ ಜೆ.ಗೌಡ ಹಾಸನ: ಜಿಲ್ಲಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಂಜಾನೆಯ ಮಂಜಿನ ನಡುವೆ ಸೂರ್ಯನ ಕಿರಣಗಳು ಮೂಡುತ್ತಿದ್ದಂತೆ ಯೋಗ ಪ್ರದರ್ಶನ ಮತ್ತು ಯೋಗ ಕುರಿತದ್ದೇ ಚರ್ಚೆ. ಜಿಲ್ಲಾ ಕ್ರೀಡಾಂಗಣ, ಶಾಲಾ ಮೈದಾನದಲ್ಲಿ ಶ್ವೇತವಸ್ತ್ರ ಧರಿಸಿದ ಪಟುಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು. ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ…
ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ
June 22, 2018ಹಾಸನ: ನಾಡಪ್ರಭು ಕೆಂಪೇಗೌಡ ಜಯಂತಿ ಯನ್ನು ಜೂ. 27ರಂದು ನಗರದ ಹಾಸನಾಂಬ ಕಲಾ ಮಂದಿರ ದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರ ಅಧ್ಯಕ್ಷತೆ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ದತಾ ಸಭೆ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಮಾತನಾಡಿ, ಜಯಂತಿ ಕುರಿತು ನಗರದಲ್ಲಿ ವ್ಯಾಪಕ ಪ್ರಚಾರ ಮಾಡಿಸಲು ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರಿಗೆ ಸೂಚಿಸಿದರು….
ದೇಹ-ಮನಸ್ಸು ಸಮತೋಲನಕ್ಕೆ ಯೋಗ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಮತ
June 21, 2018ಹಾಸನ: ದೇಹ ಮನಸ್ಸುಗಳೆರಡನ್ನು ಸಮತೋಲನ ಮಾಡಿಕೊಳ್ಳುವ ಶಕ್ತಿ ಯೋಗಕ್ಕಿದ್ದು, ಇಂದು ವಿಶ್ವ ಮನ್ನಣೆ ಪಡೆದಿದೆ ಎಂದು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವಕೇಂದ್ರ, ಎನ್ಎಸ್ಎಸ್, ಎನ್ಸಿಸಿ, ರೆಡ್ ಕ್ರಾಸ್, ಪತಂಜಲಿ ಯೋಗ ಪರಿವಾರ, ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಯುವಕ ಸಂಘ ಸಂಯುಕ್ತಾ ಶ್ರಯದಲ್ಲಿ ಸರ್ಕಾರಿ ಕಲಾ ವಾಣಿಜ್ಯ ಹಾಗೂ ಸ್ನಾತಕೋತ್ತರ ಸ್ವಾಯತ್ತ ಕಾಲೇಜು ಸಭಾಂಗಣ ದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಾತ್ಯಕ್ಷಿಕೆ ಹಾಗೂ ಜಿಲ್ಲಾ ಯುವ ಸಮಾವೇಶ…
ಹೇಮಾವತಿ ಭರ್ತಿಗೆ 22 ಅಡಿಯಷ್ಟೇ ಬಾಕಿ
June 21, 2018ಹಾಸನ: ಮುಂಗಾರು ಮಳೆ ಅಬ್ಬರದಿಂದ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಸನದ ಜೀವ ನದಿ ಹೇಮಾ ವತಿಗೆ ಒಳ ಹರಿವು ಕೂಡ ಹೆಚ್ಚಿದ್ದು, ಜಲಾಶಯ ಭರ್ತಿಗೆ 22 ಅಡಿಗಳಷ್ಟೇ ಬಾಕಿ ಇದೆ. ಹೇಮಾವತಿ ಜಲಾಶಯದ ಒಟ್ಟು ನೀರಿನ ಸಂಗ್ರಹಣಾ ಸಾಮಥ್ರ್ಯ 2922 ಅಡಿಗಳು. ಹಾಸನ ಸೇರಿದಂತೆ ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಹೇಮಾವತಿಗೆ 2,900.37 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾ ಶಯದಲ್ಲಿ ನೀರಿನ…
ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿಸಿ ಕಚೇರಿ ಎದುರು ಸಿಪಿಐ ಪ್ರತಿಭಟನೆ
June 21, 2018ಹಾಸನ: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 2014ರಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯು ಪಾತಾಳಕ್ಕೆ ಕುಸಿಯಿತು. ಬ್ಯಾರಲಿಗೆ 130 ಡಾಲರ್ ಇದ್ದ ಕಚ್ಚಾ ತೈಲದ ಬೆಲೆ 45 ಡಾಲರ್ಗೆ ಕುಸಿದಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ತೈಲ ಬೆಲೆ ಇಳಿಕೆ…
ಹಾಸನದ ಉತ್ತರ ಬಡಾವಣೆಗೆ ಶಾಸಕ ಪ್ರೀತಮ್ ಭೇಟಿ ಶತಮಾನದ ಸರ್ಕಾರಿ ಶಾಲೆ ವೀಕ್ಷಣೆ
June 20, 2018ಹಾಸನ: ನಗರದ ಉತ್ತರ ಬಡಾವಣೆಯಲ್ಲಿರುವ ಶತಮಾನ ಪೂರೈ ಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಪ್ರೀತಂ ಜೆ.ಗೌಡ ಅವರಿಂದು ಭೇಟಿ ನೀಡಿ, ವೀಕ್ಷಿಸಿ ದರಲ್ಲದೆ, ಸಮಸ್ಯೆ ಆಲಿಸಿದರು. ಇಂದು ಬೆಳಿಗ್ಗೆ ಶಾಲೆಗೆ ಭೇಟಿ ನೀಡಿದ ಅವರು, ಮೊದಲು ಇಲ್ಲಿನ ಶಿಕ್ಷಕರಿಂದ ಮಾಹಿತಿ ಪಡೆದುಕೊಂಡರು. ಉತ್ತರ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂದೇ ಹೆಸರಾಗಿರುವ ಈ ಶಾಲೆ ಈಗ ನೂರು ವರ್ಷ ದಾಟಿ ಶಾಲಾ ಕಟ್ಟಡ ಶಿಥಿಲಗೊಂಡಿದೆ. ಮಳೆ ಬಂದರೆ ತರಗತಿ ಗಳ ಮೇಲ್ಛಾವಣಿ ಸೋರುತ್ತದೆ….
ಲಾರಿ-ಮಿನಿ ಲಾರಿ ಮುಖಾಮುಖಿ ಡಿಕ್ಕಿ ತಾಯಿ, ಮಗಳು ಸ್ಥಳದಲ್ಲೇ ಸಾವು
June 20, 2018ಹಾಸನ: ಪೈಪ್ ತುಂಬಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದು, ಐವರು ಘಟನೆ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಗೌರಿ ಪಾಳ್ಯ ನಿವಾಸಿ ಷಹಜಾತ್(35), ಪುತ್ರಿ ಉಮರ್(3) ಮೃತರು. ಇವರು ತಮ್ಮ ಕುಟುಂಬದವರೊಂದಿಗೆ ಟಿಟಿ ವಾಹನದಲ್ಲಿ ಹಾಸನದ ದರ್ಗಾವೊಂದಕ್ಕೆ ಹೊರಟಿದ್ದರು ಎನ್ನಲಾಗಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿಯಲ್ಲಿದ್ದ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟಿಟಿಯಲ್ಲಿದ್ದವರು ಗಾಯ ಗೊಂಡಿದ್ದಾರೆ….
ಹುಣಸಿನಕೆರೆ ಭರ್ತಿ: ಶಾಸಕ ಪ್ರೀತಮ್ರಿಂದ ಬಾಗಿನ
June 19, 2018ಹಾಸನ: ಕೆಲ ದಿನಗಳಿಂದ ಸುರಿದ ಮಳೆಯಿಂದ ನಗರ ಸಮೀಪದ ಐತಿಹಾಸಿಕ ಹುಣಸಿನಕೆರೆ ಸಂಪೂರ್ಣ ಭರ್ತಿಯಾಗಿದ್ದು, ಶಾಸಕ ಪ್ರೀತಮ್ ಜೆ.ಗೌಡ ಇಂದು ಬೆಳಿಗ್ಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಇದೇ ವೇಳೆ ಸುತ್ತ ಮುತ್ತಲ ಅನೇಕರು ಹುಣಸಿನಕೆರೆ ಅಭಿವೃದ್ಧಿ ಕುರಿತು ಶಾಸಕರಲ್ಲಿ ಮನವಿ ಮಾಡಿದರು ಕೆರೆ ಸುತ್ತ ಭೂಮಿ ಒತ್ತುವರಿಯಾಗಿದ್ದು, ಕರೆ ಅಭಿವೃದ್ಧಿ ಗೊಳಿಸಿ, ಬೋಟಿಂಗ್ ವ್ಯವಸ್ಥೆ ಮಾಡು ವಂತೆ ಒತ್ತಾಯಿಸಿದರು. ಮನವಿ ಆಲಿಸಿದ ಶಾಸಕ ಪ್ರೀತಮ್ ಜೆ.ಗೌಡ, ಐತಿಹಾಸಿಕ ಹುಣಸಿನಕೆರೆ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಲಾಗು…
ವಿವಿಧ ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ
June 19, 2018ಹಾಸನ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾ ರರು, ಡಿಸಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿ ಆಗ್ರಹಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷಿ ಕ್ಷೇತ್ರದ ತೊಂದರೆಗಳನ್ನು ಅರಿತು ಸಂಕಷ್ಟದಲ್ಲಿ ರುವ ಕೃಷಿ ಕ್ಷೇತ್ರಕ್ಕೆ ಕೊಂಚ…
ಜಿಲ್ಲೆಯೆಲ್ಲೆಡೆ ರಂಜಾನ್ ಸಡಗರ, ಸಾಮೂಹಿಕ ಪ್ರಾರ್ಥನೆ
June 17, 2018ಹಾಸನ: ನಗರ ಸೇರಿದಂತೆ ಜಿಲ್ಲೆಯಲ್ಲೆಡೆ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ರಂಜಾನ್ ಆಚರಿಸಿದರು. ಹಾಸನ ನಗರ: ರಂಜಾನ್ ಅಂಗವಾಗಿ ನಗರದ ಹುಣಸಿನಕೆರೆ ಬಳಿ ಇರುವ ಹೊಸ ಈದ್ಗಾ ಮೈದಾನದಲ್ಲಿ ಸಾವಿರಾರು ಜನ ಮುಸ್ಲಿಂ ಬಾಂಧವರು ಒಟ್ಟಾಗಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ 1ತಿಂಗಳಿನಿಂದ ಶ್ರದ್ಧಾ-ಭಕ್ತಿಯಿಂದ ಉಪವಾಸದಲ್ಲಿದ್ದು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ದಿನದಂದು ಹೊಸ ಬಟ್ಟೆ ಧರಿಸಿ ಸಡಗರದಿಂದ ಪಾಲ್ಗೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಪ್ರಾರ್ಥನೆ ಹಿನ್ನೆಲೆ ಹೊಸ ಈದ್ಗಾ…