ಪ್ರಗತಿ ಪರಿಶೀಲನಾ ಸಭೆಯಲ್ಲಿ ತಹಶೀಲ್ದಾರ್ಗಳಿಗೆ ಸಚಿವ ಹೆಚ್.ಡಿ.ರೇವಣ್ಣ ಸೂಚನೆ ಹಾಸನ: ‘ಮುಂದಿನ ಎರಡು ತಿಂಗಳೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಎಲ್ಲ ಸಾಮಾಜಿಕ ಭದ್ರತಾ ಪಿಂಚಣ ಗಳು ಬಿಪಿಎಲ್ ಕಾರ್ಡ್ಗಳ ವಿತರಣೆ ಪೂರ್ಣ ಗೊಳಿಸಬೇಕು’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ ರಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿ ಗ್ರಾಮವಾರು ವೃದ್ಯಾಪ್ಯ ವೇತನ, ವಿಧವಾ ವೇತನ,…
ಸೊಲ್ಲಾಪುರ ಎಕ್ಸ್ ಪ್ರೆಸ್ ರೈಲು ಹಾಸನಕ್ಕೆ ವಿಸ್ತರಣೆ
June 15, 2018ಶ್ರವಣಬೆಳಗೊಳ: ಸೊಲ್ಲಾಪುರದಿಂದ ಯಶವಂತಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಸೊಲ್ಲಾಪುರ ಎಕ್ಸ್ ಪ್ರೆಸ್ ರೈಲು ಸಂಚರವನ್ನು ಹಾಸನದವರೆಗೆ ವಿಸ್ತರಿಸಲಾಗಿದ್ದು, ಈ ರೈಲಿಗೆ ಶ್ರವಣಬೆಳಗೊಳದ ರೈಲ್ವೆ ನಿಲ್ದಾಣದಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಪೂರ್ಣಕುಂಭ ಸ್ವಾಗತ ಕೋರಿದರು. ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಭಗವಾನ್ ಬಾಹುಬಲಿ, ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಆಶೀರ್ವಾದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪರಿಶ್ರಮದಿಂದ ಮತ್ತೊಂದು ರೈಲು ಸಂಚಾರಕ್ಕೆ ಚಾಲನೆ ದೊರೆತಿದ್ದು, ಈ ಭಾಗದ ಪ್ರವಾಸೋ ದ್ಯಮ ಬೆಳೆಯಲು ಸಾಧ್ಯವಾಗಲಿದೆ ಎಂದರು. ಮಂತ್ರಾಲಯ, ರಾಯಚೂರು, ಕಲ್ಬುರ್ಗಿ,…
ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸ್ಥಳ ಪರಿಶೀಲನೆ ದಶಕಗಳಿಂದ ನೆನೆಗುದಿಗೆ ಬಿದ್ದ ಕಾಮಗಾರಿಗಳ ಪುನಾರಂಭಕ್ಕೆ ಸೂಚನೆ
June 13, 2018ಹಾಸನ: ಜಿಲ್ಲೆಯ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪುನಾರಂಭಿ ಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಬೆಳಿಗ್ಗೆಯಿಂದಲೇ ಜಿಲ್ಲೆಯ ಹೊಳೆನರಸೀಪುರ ಹಾಗೂ ಹಾಸನ ತಾಲೂಕುಗಳ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಹಾಸನ ನಗರದ ಹೊಸ ಬಸ್ ನಿಲ್ದಾಣದ ಬಳಿ ಸ್ಥಗಿತಗೊಂಡಿರುವ ಪ್ರವಾಸಿ ಹೋಟೆಲ್ ಮತ್ತು ಮನರಂಜನಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಇನ್ನಷ್ಟು ವಿನೂತನತೆ ಸೇರ್ಪಡೆಗೊಳಿಸಿ ಕಾಮಗಾರಿ ಮುಕ್ತಾಯ ಗೊಳಿಸಲು ಚಿಂತಿಸಿದ್ದು, ಇದಕ್ಕಾಗಿ ಲೋಕೋಪಯೋಗಿ, ಅರಣ್ಯ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಜಂಟಿಯಾಗಿ…
ಎಲ್ಲರೊಂದಿಗೆ ಚರ್ಚಿಸಿ ಬೇಲೂರು ಮುಖ್ಯರಸ್ತೆ ಅಗಲೀಕರಣ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ
June 11, 2018ಬೇಲೂರು: ವಿಶ್ವಪ್ರಸಿದ್ಧ ಪ್ರವಾಸಿ ಕೇಂದ್ರವಾದ ಬೇಲೂರು ಪಟ್ಟಣದ ಅಭಿವೃದ್ಧಿಗೆ ಮುಖ್ಯರಸ್ತೆ ಅಗಲೀಕರಣ ಅಗತ್ಯವಾಗಿದ್ದು, ವರ್ತಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ವಿಸ್ತರಣೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದರು. ಪಟ್ಟಣದ ಶ್ರೀಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಾನು ಮಂತ್ರಿಯಾಗಿದ್ದಾಗ ಬೇಲೂರು, ಶ್ರವಣಬೆಳಗೊಳ, ಹಳೇಬೀಡನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಪ್ರಯತ್ನಿಸಿದ್ದೆ. ವಿಶ್ವಪರಂಪರೆ ಪಟ್ಟಿಗೆ ಸೇರಿದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು….
ಸಚಿವ ಸಂಪುಟ ವಿಸ್ತರಣೆ, ಖಾತೆ ಸಂಬಂಧ ಇಂದು ಅಂತಿಮ ನಿರ್ಧಾರ: ರೇವಣ್ಣ-ಡಿಕೆಶಿ ನಡುವೆ ವಾಕ್ಸಮರ
June 1, 2018ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಗಳಿವೆ. ಈ ಸಂಬಂಧ ಇಂದು ಐಷಾರಾಮಿ ಹೋಟೆಲೊಂದರಲ್ಲಿ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಸಹ ಪಾಲ್ಗೊಂಡಿದ್ದರು. ಸಭೆಯ ಮುಕ್ತಾಯದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ಫಲಪ್ರದ ವಾಗಿದೆ. ದೆಹಲಿ ಮುಖಂಡರ ಮಾತು ಕತೆಯ ನಂತರ ಅಂತಿಮಗೊಳ್ಳಲಿದೆ. ನಾಳೆ ನಾನು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ…
ಜನರ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್, ಬಿಜೆಪಿ
May 8, 2018ಹೊಳೆನರಸೀಪುರ: ಕಾಂಗ್ರೆಸ್, ಬಿಜೆಪಿ ಸರ್ಕಾರಗಳು ಜನ ಸಾಮಾನ್ಯರ ಸಮಸ್ಯೆಗಳನ್ನು ಮರೆತು ಹಗರಣದಲ್ಲಿ ಭಾಗಿಯಾಗಿದ್ದರೂ ಸಹ ದಾರಿ ತಪ್ಪಿಸಲು ಸುಳ್ಳು ಭರವಸೆಗಳನ್ನು ನೀಡು ತ್ತಿವೆ ಎಂದು ಜೆಡಿಎಸ್ ಅಭ್ಯರ್ಥಿ, ಮಾಜಿ ಸಚಿವÀ ಹೆಚ್.ಡಿ.ರೇವಣ್ಣ ಆರೋಪಿಸಿದರು. ಪಟ್ಟಣದಲ್ಲಿನ ಅವರ ನಿವಾಸದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಈ ಕ್ಷೇತ್ರದ ಶಾಸಕನಾದ ಮೇಲೆ ಹತ್ತು ವರ್ಷ ನಮ್ಮ ಸರ್ಕಾರ ಇಲ್ಲದಿದ್ದರೂ ಸಹ ವಿರೋಧ ಪಕ್ಷದವರು ಒಪ್ಪುವ ರೀತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮತ್ತು ನಮ್ಮ ತಂದೆ…
ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸಿದ್ದರೆ ದೂರು ನೀಡಲಿ ಬಾಗೂರು ಮಂಜೇಗೌಡ ವಿರುದ್ಧ ಹೆಚ್.ಡಿ.ರೇವಣ್ಣ ಆಕ್ರೋಶ
April 28, 2018ಹಾಸನ: ನಾನು ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸುತ್ತಿದ್ದರೆ ಚುನಾವಣಾಧಿಕಾರಿಗಳಿಗೆ ದೂರು ನೀಡಲಿ ಎಂದು ಹೊಳೆನರಸೀ ಪುರ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಗುರುವಾರ ತಮ್ಮ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡರು ಆರೋಪಗಳನ್ನು ಅಲ್ಲಗೆಳೆದ ರಲ್ಲದೆ, ಬಾಗೂರು ಮಂಜೇಗೌಡ ವಿರುದ್ಧ ಆರೋಪಗಳ ಸುರಿಮಳೆಗೈದರು. ನಾನು ಹಾಲಿನ ಲಾರಿಗಳಲ್ಲಿ ಹಣ, ಮದ್ಯ ಸಾಗಿಸುತ್ತಿದ್ದರೆ. ಚುನಾವಣಾಧಿಕಾರಿಗಳಿಗೆ ದೂರು ನೀಡಲಿ. ಎಲ್ಲಾ ಹಾಲಿನ ವಾಹನಗಳನ್ನೂ ತಪಾಸಣೆ…
ಮೇ 15ರಂದು ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ
April 27, 2018ಮೈಸೂರು: ಚುನಾವಣಾ ಫಲಿತಾಂಶ ದಿನವಾದ ಮೇ 15ರಂದು, ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯ ಮುಕ್ತವಾಗುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲ ಲ್ಲಿರುವ ಸುತ್ತೂರು ಮಠಕ್ಕೆ ಗುರುವಾರ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಕೆಲ ಕಾಲ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ 113ರಿಂದ 120 ಸ್ಥಾನಗಳಲ್ಲಿ ಗೆದ್ದು, ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದ…
ಹೆಚ್.ಡಿ.ರೇವಣ್ಣ ಏನೇ ಪಿತೂರಿ ಮಾಡಿದ್ರೂ ನನ್ನ ಸೋಲಿಸಲು ಆಗಲ್ಲ ಬ್ಲಾಕ್ಮೇಲ್ ತಂತ್ರಕ್ಕೆ ನಾ ಹೆದರಲ್ಲ, ನೇರ ಸ್ಪರ್ಧೆಗೆ ಸಿದ್ಧರಾಗಿ: ಬಿ.ಪಿ. ಮಂಜೇಗೌಡ ಸವಾಲು
April 27, 2018ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಏನೇ ಪಿತೂರಿ ಮಾಡಿದರೂ ನನ್ನನ್ನು ಸೋಲಿಸಲು ಸಾಧ್ಯವಿಲ್ಲ, ಇಂತಹ ಬ್ಲಾಕ್ಮೇಲ್ ತಂತ್ರಕ್ಕೆ ನಾನು ಹೆದರುವುದಿಲ್ಲ, ನೇರ ಸ್ಪರ್ಧೆಗೆ ಸಿದ್ಧರಾಗಿ ಎಂದು ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇ ಗೌಡ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಆರ್ಟಿಓ ಇಲಾಖೆಯಿಂದ 700 ಕೋಟಿ ರೂ. ಆಸ್ತಿ ಮಾಡಿದ್ದಾರೆ ಎಂದು ರೇವಣ್ಣ ಅವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುತ್ತಿದ್ದಾರೆ. ನನ್ನ ಮೇಲೆ ಸುಳ್ಳು ಹೇಳುವ ಇವರ ಆಸ್ತಿ ಕಾಣುತ್ತಿಲ್ಲವೇ?…
ಸಾರಿಗೆ ಅಧಿಕಾರಿಗಳ ಮೂಲಕ ಹಣ ಹಂಚಿಕೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆರೋಪ
April 26, 2018ಹಾಸನ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 7 ಮಂದಿ ಸಾರಿಗೆ ಇಲಾಖೆ ಅಧಿಕಾರಿಗಳಿಂದ ವ್ಯಾಪಕ ಹಣ ಹಂಚಿಕೆಯಾಗುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದರು. ಹಾಸನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಬಿ.ಪಿ.ಮಂಜೇಗೌಡ ಅವರ ಸಹೋದರ ಕೊಪ್ಪಳದಲ್ಲಿ ಸಾರಿಗೆ ಇಲಾಖೆ ಅಧಿಕಾರಿ ಆಗಿರುವ ಕೃಷ್ಣೇಗೌಡ ನೇತೃತ್ವದಲ್ಲಿ ಹಣವನ್ನು ಹಂಚಿಕೆ ಮಾಡು ತ್ತಿದ್ದಾರೆ ಎಂದು ಆರೋಪಿಸಿದರು. ಹವಾಲಾ ಮೂಲಕ ಕ್ಷೇತ್ರದಲ್ಲಿ ಹಂಚಲು 10 ಕೋಟಿ ಹಣ ಕಳುಹಿಸಲಾಗುತ್ತಿದೆ. 7 ಮಂದಿ ಸಾರಿಗೆ ಇಲಾಖೆ ಅಧಿಕಾರಿ ಗಳು…