ಚಾಮರಾಜನಗರ: ‘ನಾಯಕ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ವ್ಯಾಸಂಗ ಮಾಡಬೇಕು’ ಎಂದು ತಾಪಂ ಸದಸ್ಯ ಎಚ್.ವಿ.ಚಂದ್ರು ಸಲಹೆ ನೀಡಿದರು. ನಗರದ ಶ್ರೀಮಹರ್ಷಿ ವಾಲ್ಮೀಕಿ ಭವನದಲ್ಲಿ ನಾಯಕ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ 5ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಸಮಾರಂಭದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು. ನಾಯಕ ಜನಾಂಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶವಿದೆ. ಸಮುದಾಯದ ಮಕ್ಕಳ ಎಸ್ಎಸ್ಎಲ್ಸಿ, ಪಿಯುಸಿಗೆ ಶಿಕ್ಷಣವನ್ನು ಮೊಟಕುಗೊಳಿಸದೇ ಉನ್ನತ ಶಿಕ್ಷಣ ವ್ಯಾಸಂಗಮಾಡಿ…