ಮೈಸೂರು: ಅತಿಥಿ ಸತ್ಕಾರ ಕ್ಷೇತ್ರದಲ್ಲಿ ನುರಿತ ಮತ್ತು ಅರ್ಹ ಮಾನವ ಸಂಪನ್ಮೂಲವನ್ನು ಹೋಟೆಲ್ ಉದ್ಯಮಕ್ಕೆ ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಫುಡ್ ಕ್ರಾಫ್ಟ್ ಸಂಸ್ಥೆ ಮೈಸೂರಿನಲ್ಲಿ ತರಬೇತಿ ಕೇಂದ್ರವನ್ನು ಆರಂಭಿಸುತ್ತಿದೆ ಎಂದು ಸಂಸ್ಥೆಯ ಉಪನ್ಯಾಸಕ ಜಗದೀಶ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಪ್ರವಾಸೋದ್ಯಮ ಸಚಿವಾಲಯ, ರಾಜ್ಯ ಪ್ರವಾಸೋದ್ಯಮ ಇಲಾಖೆ ಹಾಗೂ ನ್ಯಾಷನಲ್ ಕೌನ್ಸಿಲ್ ಫಾರ್ ಹೋಟೆಲ್ ಮ್ಯಾನೇಜ್ ಮೆಂಟ್ ಅಂಡ್ ಕೇಟರಿಂಗ್ ಟೆಕ್ನಾಲಜಿಯಿಂದ ಅನುಮೋದಿಸಲ್ಪಟ್ಟಿರುವ…