Tag: House Burglary

ಮೈಸೂರಲ್ಲಿ ಹಾಡಹಗಲೇ ಚಿನ್ನಾಭರಣ ದೋಚಿದ್ದ ಖದೀಮರು ತುಮಕೂರಲ್ಲಿ ಬಂಧನ
ಮೈಸೂರು

ಮೈಸೂರಲ್ಲಿ ಹಾಡಹಗಲೇ ಚಿನ್ನಾಭರಣ ದೋಚಿದ್ದ ಖದೀಮರು ತುಮಕೂರಲ್ಲಿ ಬಂಧನ

July 19, 2018

ಮೈಸೂರು: ಕಾರ್ಪೊರೇಷನ್ ಅಧಿಕಾರಿಗಳೆಂದು ಹೇಳಿಕೊಂಡು ಮನೆ ಸರ್ವೇ ಮಾಡುವ ಸೋಗಿನಲ್ಲಿ ಮೈಸೂರಿನ ಕುವೆಂಪುನಗರ ಎನ್-ಬ್ಲಾಕ್‍ನಲ್ಲಿ ಹಾಡ ಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಮೂವರು ಖದೀಮರನ್ನು ತುಮಕೂರು ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದ ತುಮಕೂರು ಪೊಲೀಸರು, ಅವರನ್ನು ವಿಚಾರಣೆಗೊಳಪಡಿಸಿದ ವೇಳೆ ಕಾರ್ಪೊರೇಷನ್ ಅಧಿಕಾರಿಗಳೆಂದು ಹೇಳಿಕೊಂಡು ಮೈಸೂರಿನ ಮನೆಯಲ್ಲಿ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣವೂ ಬಯಲಾಯಿತು ಎಂದು ಹೇಳಲಾಗಿದೆ. ಖದೀಮರು…

ಮನೆಗಳ್ಳರ ಬಂಧನ: 18.56 ಲಕ್ಷ ಮೌಲ್ಯದ ವಸ್ತುಗಳ ವಶ
ಮಂಡ್ಯ

ಮನೆಗಳ್ಳರ ಬಂಧನ: 18.56 ಲಕ್ಷ ಮೌಲ್ಯದ ವಸ್ತುಗಳ ವಶ

July 12, 2018

ಶ್ರೀರಂಗಪಟ್ಟಣ:  ಹಗಲು ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಅವರಿಂದ 18,56,800ರೂ. ಮೌಲ್ಯದ ಚಿನ್ನ, ಬೆಳ್ಳಿ, ಟಿವಿ, ಸೀರೆಯನ್ನು ಕೆಆರ್‌ಎಸ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಲರಾಜ್(62), ಸೋಮಶೇಖರ್ ಅಲಿಯಾಸ್ ಸೋಮ(32), ಶ್ರೀಕಂಠ ಅಲಿಯಾಸ್ ಕಂಠ (32), ರಾಜು ಬಿನ್ ನಾಗರಾಜ(19) ಬಂಧಿತರಾಗಿದ್ದು, ಇವರೆಲ್ಲರು ಮೈಸೂರು ಜಿಲ್ಲೆ ಕೆ.ಆರ್.ನಗರದ ಪಟ್ಟಣದ ಬೋವಿ ಜನಾಂಗದ ಶ್ರೀರಾಮ ಬ್ಲಾಕ್‍ನ ನಿವಾಸಿ ಗಳಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು. ಈ ನಾಲ್ವರು ಟಾಟಾ ಏಸ್ ವಾಹನವನ್ನು ಬಳಸಿಕೊಂಡು ಹಾಡುಹಗಲೇ ಮನೆಗಳ ಕಳ್ಳತನ ಮಾಡುತ್ತಿರುವ ಬಗ್ಗೆ…

ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ದೋಚಿದ ಖದೀಮರು: ತನಿಖೆ ಚುರುಕು
ಮೈಸೂರು

ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ದೋಚಿದ ಖದೀಮರು: ತನಿಖೆ ಚುರುಕು

June 26, 2018

ಮೈಸೂರು: ಪಾಲಿಕೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿರುವ ಪ್ರಕರಣದ ತನಿಖೆಯನ್ನು ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಚುರುಕುಗೊಳಿಸಿದ್ದಾರೆ. ಕುವೆಂಪುನಗರ ಎನ್ ಬ್ಲಾಕ್, ಕೆಎಸ್ ಆರ್‍ಟಿಸಿ ಡಿಪೋ ರಸ್ತೆಯಲ್ಲಿರುವ ಕೆ.ಜೆ. ಲೀಲಾದೇವಿ ಅವರ ಮನೆಗೆ ಜೂ.22 ರಂದು ಪಾಲಿಕೆ ಅಧಿಕಾರಿಗಳೆಂದು ಹೇಳಿ ಕೊಂಡು ಬಂದಿದ್ದ ಇಬ್ಬರು ಖದೀಮರು, ಮನೆಯನ್ನು ಅಳತೆ ಮಾಡಿ, ಆಸ್ತಿ ಕಾರ್ಡ್ ನೀಡುವುದಾಗಿ ನಂಬಿಸಿ, ಮನೆಯ ಮಾಲೀಕರಾದ ಲೀಲಾದೇವಿ ಹಾಗೂ ಕೆಲಸದಾಕೆ ಮಂಗಳಮ್ಮ ಅವರನ್ನು ಟೆರೇಸ್‍ಗೆ ಕರೆದೊಯ್ದು, ಅದೇ ಸಮಯಕ್ಕೆ…

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ
ಹಾಸನ

ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ

June 24, 2018

ಹಾಸನ: ಒಂದೇ ರಾತ್ರಿಯಲ್ಲಿ ನಾಲ್ಕು ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ, ನಗದು ದೋಚಿ ಪರಾರಿ ಯಾಗಿರುವ ಘಟನೆ ನಗರದ ವಿವೇಕನಗರ ಬಡಾವಣೆ ಯಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ಸುತ್ತ ಮುತ್ತಲ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. ನಗರದ ವಿವೇಕ ನಗರ ಬಡಾವಣೆ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಸಂತೋಷ್ ಮತ್ತು ಶಶಿಕಲಾ ದಂಪತಿ ತಿರುಪತಿಗೆ ತೆರಳಿದ್ದ ವೇಳೆ ಕಳ್ಳರು ಅವರ ಮನೆಗೆ ನುಗ್ಗಿ ಲಾಕರ್ ಒಡೆದು ನಗದು ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ನಂತರ…

Translate »