ಮೈಸೂರು: ಮೈಸೂರು ರೇಸ್ಕೋರ್ಸ್ ಆವರಣದಲ್ಲಿ ಬೃಹತ್ ಸಾಮೂಹಿಕ ಯೋಗ ಪ್ರದರ್ಶನಕ್ಕಾಗಿ 70 ಬ್ಲಾಕ್ಗಳನ್ನು ನಿರ್ಮಿಸಿದ್ದು, ಪ್ರತಿ ಬ್ಲಾಕ್ನಲ್ಲಿ ಸುಮಾರು 1200 ಮಂದಿ ಯೋಗಪಟು ಗಳು ಪ್ರದರ್ಶನ ನೀಡಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ನಾಳೆ(ಜೂ.21) ಇಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂ.21ರಂದು ಬೆಳಿಗ್ಗೆ 7 ಗಂಟೆಗೆ ವಿಶ್ವ ಯೋಗ ದಿನ ಆಚರಿಸುತ್ತಿದ್ದು, ಕಳೆದ ಬಾರಿಗಿಂತ ಅಂದರೆ, ಸುಮಾರು 70 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ….
ಆರು ಮಂದಿ ಯೋಗ ಸಾಧಕರಿಗೆ ಸನ್ಮಾನ
June 21, 2018ಮೈಸೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಆರು ಮಂದಿ ಯೋಗ ಸಾಧಕರಿಗೆ ಬುಧವಾರ `ಯೋಗ ಕಲಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಿಮಾಲಯ ಕಲಾ ಸಾಹಿತ್ಯ ವೇದಿಕೆ ಹಾಗೂ ಮೈಸೂರು ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹಿರಿಯ ಯೋಗಪಟುಗಳಾದ ಮೈಸೂರಿನ ವಿ.ಸೋಮಶೇಖರ್, ರಮೇಶ್, ಕೆಆರ್ ನಗರದ ಪಿ.ಆರ್.ವಿಶ್ವನಾಥಶೆಟ್ಟಿ, ಮೈಸೂರಿನ ಯೋಗಪಟುಗಳಾದ ಶಶಿಕುಮಾರ್, ಎನ್.ಆರ್.ಸಂದೀಪ್, ಕೆ.ಆರ್.ಪಾರ್ವತಮ್ಮ ಅವರಿಗೆ ಯೋಗ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ಸಮಾಜ…
ದೇಹ-ಮನಸ್ಸು ಸಮತೋಲನಕ್ಕೆ ಯೋಗ ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಮತ
June 21, 2018ಹಾಸನ: ದೇಹ ಮನಸ್ಸುಗಳೆರಡನ್ನು ಸಮತೋಲನ ಮಾಡಿಕೊಳ್ಳುವ ಶಕ್ತಿ ಯೋಗಕ್ಕಿದ್ದು, ಇಂದು ವಿಶ್ವ ಮನ್ನಣೆ ಪಡೆದಿದೆ ಎಂದು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವಕೇಂದ್ರ, ಎನ್ಎಸ್ಎಸ್, ಎನ್ಸಿಸಿ, ರೆಡ್ ಕ್ರಾಸ್, ಪತಂಜಲಿ ಯೋಗ ಪರಿವಾರ, ಸುಗ್ಗಿ-ಹುಗ್ಗಿ ಸಾಂಸ್ಕೃತಿಕ ಯುವಕ ಸಂಘ ಸಂಯುಕ್ತಾ ಶ್ರಯದಲ್ಲಿ ಸರ್ಕಾರಿ ಕಲಾ ವಾಣಿಜ್ಯ ಹಾಗೂ ಸ್ನಾತಕೋತ್ತರ ಸ್ವಾಯತ್ತ ಕಾಲೇಜು ಸಭಾಂಗಣ ದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಾತ್ಯಕ್ಷಿಕೆ ಹಾಗೂ ಜಿಲ್ಲಾ ಯುವ ಸಮಾವೇಶ…
ಯೋಗದಿಂದ ರೋಗ ಮುಕ್ತ: ಶಾಸಕ ನಿರಂಜನಕುಮಾರ್
June 21, 2018ಗುಂಡ್ಲುಪೇಟೆ: ಯೋಗಾಭ್ಯಾಸ ಮತ್ತು ಧ್ಯಾನ ಮಾಡುವು ದರಿಂದ ಮಾನಸಿಕ ಸುಸ್ಥಿರತೆ ಹಾಗೂ ಉತ್ತಮ ಆರೋಗ್ಯವನ್ನು ಹೊಂದಬಹು ದಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಮದ್ದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿರುವ ಮಹಾಮನೆ ಯೋಗ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ಶ್ರೀ ಮದ್ದಾ ನೇಶ್ವರ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ದರು. ಇಂದಿನ ಆಹಾರ ಪದ್ಧತಿ ಹಾಗೂ ಜೀವನ ವಿಧಾನಗಳಿಂದ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಆರೋಗ್ಯ ಸಂಬಂಧಿತ…
ಯೋಗ ಜಾಗೃತಿಗೆ ನಡೆದ ಜಾಥಾ
June 21, 2018ಚಾಮರಾಜನಗರ: ಜಿಲ್ಲಾ ಡಳಿತ, ಜಿಪಂ ವತಿಯಿಂದ ಹಮ್ಮಿಕೊಂಡಿ ರುವ ಅಂತರಾಷ್ಟ್ರೀಯ ಯೋಗ ದಿನಾ ಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದಿಸೆಯಲ್ಲಿ ಇಂದು ಜಾಥಾ ಹಾಗೂ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿಶಾ ಲಾಕ್ಷಿ ಅವರು ಯೋಗ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ನ್ಯಾಯಾಲಯ ಆವರಣ ದಿಂದ ಜಾಥಾ ಹೊರಟು ಜಿಲ್ಲಾಡಳಿತ ಭವ ನದ ಆವರಣದಲ್ಲಿ ಸಮಾವೇಶಗೊಂಡಿತು. ತದನಂತರ ಜಿಲ್ಲಾಡಳಿತ ಭವನದಲ್ಲಿ…
ವಿಶ್ವ ಯೋಗದ ದಿನದ ಅಂತಿಮ ತಾಲೀಮಿನಲ್ಲಿ 10 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಭಾಗಿ
June 18, 2018ಜೂ.21ರಂದು ಒಂದು ಲಕ್ಷ ಯೋಗಪಟುಗಳಿಂದ ಬೃಹತ್ ಯೋಗ ಪ್ರದರ್ಶನ ಮೈಸೂರಿನ ರೇಸ್ಕೋರ್ಸ್ ಆವರಣದಲ್ಲಿ ನಡೆದ ತಾಲೀಮಿನಲ್ಲಿ ಸಚಿವರು, ಶಾಸಕರು ಭಾಗಿ ಮೈಸೂರು: ವಿಶ್ವ ಯೋಗದ ದಿನದ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿನ ರೇಸ್ಕೋರ್ಸ್ ಆವರಣದಲ್ಲಿ ನಡೆದ ಅಂತಿಮ ತಾಲೀಮಿನಲ್ಲಿ ವಿವಿಧ ಯೋಗ ಸಂಸ್ಥೆಗಳು ಹಾಗು ಶಾಲಾ-ಕಾಲೇಜುಗಳ ಸುಮಾರು 10 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಪಾಲ್ಗೊಂಡಿದ್ದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ, ಎಸ್ಪಿವೈಎಸ್ಎಸ್, ಜಿಎಸ್ಎಸ್ ಯೋಗಿಕ್ ಫೌಂಡೇಶನ್, ಪತಂಜಲಿ ಸಂಸ್ಥೆ, ಮೈಸೂರು ಯೋಗ ಒಕ್ಕೂಟ,…
ಯೋಗದಿಂದ ದೈಹಿಕ, ಮಾನಸಿಕ ಉಲ್ಲಾಸ ಸಾಧ್ಯ
June 18, 2018ಮಂಡ್ಯ: ಯಾವುದೇ ಕೆಲಸ ವನ್ನೂ ಒಂದೇ ಮನಸ್ಸಿನಿಂದ ಮಾಡಲು ಯೋಗ ಸಹಕಾರಿಯಾಗುತ್ತದೆ. ಯೋಗ ದಿಂದ ಮನಸ್ಸು ಉಲ್ಲಾಸವಾಗುತ್ತದೆ. ದೇಹದ ಆರೋಗ್ಯ ಮತ್ತು ಚೇತೋಹಾರಿ ಯಾಗಿರುತ್ತದೆ ಎಂದು ಕಸಾಪ ಮಾಜಿ ಜಿಲ್ಲಾಧ್ಯಕ್ಷೆ ಮೀರಾಶಿವಲಿಂಗಯ್ಯ ತಿಳಿಸಿದರು. ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಭಾರತ ಸರ್ಕಾರ, ಆಯುಷ್ ಸಚಿವಾಲಯ, ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ, ಆಯುಷ್ ಇಲಾಖೆ, ಮಂಡ್ಯ ಜಿಲ್ಲಾ ವ್ಯಾಪ್ತಿಯ ಮೈಸೂರು ವಿವಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಸರ್ಕಾರಿ ಮಹಾವಿದ್ಯಾಲಯ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಜಾಗೃತಿ…
ಯೋಗಿಕ್ ಪ್ರೋಗ್ರಾಮ್ ಕ್ಯಾಂಪ್
June 18, 2018ಮೈಸೂರು: ವಿರ್ವಿಧ ಅಕಾಡೆಮಿ, ಶ್ರೀಪರಮಹಂಸ ಮಹಾ ವಿದ್ಯಾಲಯ ಟ್ರಸ್ಟ್ ಹಾಗೂ ಸ್ವಾಮಿ ವಿವೇಕಾನಂದ ಕೇಂದ್ರ, ಕನ್ಯಾಕುಮಾರಿ ಸಂಯುಕ್ತಾಶ್ರಯದಲ್ಲಿ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಉಚಿತ 10 ದಿನಗಳ ಫಿಟ್ ಅಂಡ್ಸ್ಲಿಮ್ ಸ್ವಿಚುಯಲ್ ಯೋಗಿಕ್ ಪ್ರೋಗ್ರಾಮ್ ಕ್ಯಾಂಪ್ ಆಯೋಜಿಸಲಾಗಿದೆ. ಜೂ. 21ರಿಂದ 30ರವರೆಗೆ ಪ್ರತಿ ದಿನ ಬೆಳಿಗ್ಗೆ 6.30ರಿಂದ 7.30ರವರೆಗೆ ಹಾಗೂ ಸಂಜೆ 7ರಿಂದ 8ಗಂಟೆ ವರೆಗೆ ಸರಸ್ವತಿಪುರಂನ ಎಸ್ಬಿಐ ಮುಂಭಾಗದಲ್ಲಿರುವ ವಿರ್ವಿಧ ಅಕಾಡೆಮಿಯಲ್ಲಿ ನಡೆಯಲಿದೆ. ಮಾಹಿತಿಗಾಗಿ ಮೊ. 9035506790, 8618126067 ಸಂಪರ್ಕಿಸಿ.
ಯೋಗವಾಕ್ ಜಾಗೃತಿ ಜಾಥಾಗೆ ಎಡಿಸಿ ಡಿ.ಎಂ.ಸತೀಶ್ ಕುಮಾರ್ ಚಾಲನೆ
June 18, 2018ಮಡಿಕೇರಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪೂರ್ವ ಭಾವಿಯಾಗಿ ಭಾನುವಾರ ನಗರದಲ್ಲಿ ಯೋಗವಾಕ್ ಜರುಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ಯೋಗಥಾನ್ ಜಾಗೃತಿ ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್ ಅವರು ಚಾಲನೆ ನೀಡಿದರು. ನಗರದ ಗಾಂಧಿ ಮೈದಾನದಲ್ಲಿ ಚಾಲನೆ ನೀಡಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು, ಯೋಗವು ಜೀವನದ ಅವಿಭಾಜ್ಯ ಅಂಗವಾಗಿದ್ದು, ಪ್ರತಿನಿತ್ಯ ಯೋಗದಲ್ಲಿ ತೊಡಗಿಸಿಕೊಳ್ಳುವುದರಿಂದ…
ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಧಿಕ ಸಂಖ್ಯೆಯಲ್ಲಿ ಯೋಗ ಪಟುಗಳ ಭಾಗಿಗೆ ಮನವಿ
June 17, 2018ಮೈಸೂರು: ಜೂನ್ 21ರಂದು ನಡೆಯಲಿರುವ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಗ ಪಟು ಗಳು ಭಾಗವಹಿಸಿ ಮೈಸೂರು ಮತ್ತೊಮ್ಮೆ ಗಿನ್ನಿಸ್ ದಾಖಲೆ ಪುಟ ಸೇರುವಂತೆ ಮಾಡಬೇಕೆಂದು ಹೋಟೆಲ್ ಮಾಲೀ ಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ಮನವಿ ಮಾಡಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಮೈಸೂರು ರೇಸ್ ಕೋರ್ಸ್ ಮೈದಾನದಲ್ಲಿ ನಡೆಯಲಿರುವ ವಿಶ್ವ ಯೋಗ ದಿನಾಚರಣೆಯನ್ನು ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದು, ಮೈಸೂರು ಯೋಗ ಒಕ್ಕೂಟಗಳು, ಟ್ರಾವೆಲ್ ಅಸೋಸಿಯೇಷನ್ ಗಳು…