ಬೆಂಗಳೂರು, ಅ.12: ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ಸಂಚಲನ ಸೃಷ್ಟಿಸಿದ್ದು, ಸಾವಿನ ಸುತ್ತಾ ಅನುಮಾನದ ಹುತ್ತ ಹುಟ್ಟಿಕೊಳ್ಳುತ್ತಿದೆ. ರಮೇಶ್ ಸಾಯುವ ಸ್ವಲ್ಪ ಸಮಯದ ಮುಂಚೆಯ ಸಿಸಿಟಿವಿ ದೃಶ್ಯಾವಳಿ ಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದು ಸಾಮಾಜಿಕ ಜಾಲತಾಣ ದಲ್ಲಿಯೂ ಹರಿದಾಡುತ್ತಿವೆ. ಇಂದು ಬೆಳಿಗ್ಗೆ 9 ಗಂಟೆಗೆ ವೇಳೆಗೆ ಉಲ್ಲಾಳದ ತಮ್ಮ ಮನೆಯಿಂದ ರಮೇಶ್ ಚೌಕಳಿ ಶರ್ಟ್ ಧರಿಸಿ ಹೊರ ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಿಗ್ಗೆ ಸದಾಶಿವನಗರದ ಪರಮೇಶ್ವರ್ ಮನೆಯಿಂದ ಹೊರಬಂದ ರಮೇಶ್ ನೇರವಾಗಿ ತಮ್ಮ ಮನೆಗೆ ಬಂದು…
ಜಾಲಪ್ಪ, ಪರಮೇಶ್ವರ್ ಮೆಡಿಕಲ್ ಕಾಲೇಜ್, ಮನೆಗಳು, ಕಚೇರಿಗಳ ಮೇಲೆ ಐಟಿ ದಾಳಿ
October 11, 2019ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ನಿಂದ ಅನರ್ಹ ಗೊಂಡ ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಪ್ರಕಟಣೆ ಗೊಂಡ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ನಾಯಕರಾದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ಆರ್.ಎಲ್ಜಾಲಪ್ಪ ಅವರ ಶಿಕ್ಷಣ ಸಂಸ್ಥೆ, ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿತೈಷಿಯಾಗಿ, ಅವರ ಎಲ್ಲಾ ಆಗು ಹೋಗುಗಳ ಬಗ್ಗೆ ಹೊಣೆಗಾರಿಕೆ, ಚುನಾ ವಣಾ ವೆಚ್ಚ ಎಲ್ಲವನ್ನು ಜಾಲಪ್ಪ ಭರಿಸುತ್ತಿದ್ದರು. ಅಷ್ಟೇ ಅಲ್ಲ ಅವರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ…
ಹಿಂಸೆಗೆ ಪ್ರಚೋದಿಸುವುದು ದುರದೃಷ್ಟಕರ: ಐಟಿ ತಿರುಗೇಟು
March 29, 2019ಬೆಂಗಳೂರು:ನಾವು ಯಾವುದೇ ಶಾಸಕ ಅಥವಾ ಸಂಸದರನ್ನು ಗುರಿಯಾಗಿಸಿ ಕೊಂಡು ದಾಳಿ ನಡೆಸಿಲ್ಲ, ಕಾನೂನು ಅಡಿಯಲ್ಲಿ ದಾಳಿ ಮಾಡಿದ್ದೇವೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ದಾಳಿ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಐಟಿ ಇಲಾಖೆ, ಜವಾಬ್ದಾರಿಯುತ ಹುದ್ದೆಯಲ್ಲಿರುವವರು ಹಿಂಸೆಗೆ ಪ್ರಚೋದಿಸುವಂತಹ ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದು ತಿರುಗೇಟು ನೀಡಿದೆ. ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆದಿದೆ ಎಂಬ ಜೆಡಿಎಸ್, ಕಾಂಗ್ರೆಸ್ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಆದಾಯ ತೆರಿಗೆ ಇಲಾಖೆ, ವಿಶ್ವಾಸಾರ್ಹ ಮೂಲಗಳ ಆಧಾರದ ಮೇಲೆ…
ಸ್ಯಾಂಡಲ್ವುಡ್ ನಟರು, ನಿರ್ಮಾಪಕರ ಬಳಿ 109 ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಪತ್ತೆ
January 7, 2019ಬೆಂಗಳೂರು: ಕನ್ನಡ ಚಿತ್ರರಂಗದ ನಟರು ಮತ್ತು ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ನಡೆಸಿದ ದಾಳಿ ವೇಳೆ 109 ಕೋಟಿ ರೂ. ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿದ್ದು, 2.85 ಕೋಟಿ ನಗದು ಹಾಗೂ 25.3 ಕೆ.ಜಿ. ಚಿನ್ನಾಭರಣ ಸೇರಿ ಒಟ್ಟು 11 ಕೋಟಿ ರೂ. ಜಪ್ತಿ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ತನಿಖಾ ತಂಡ ಭಾನುವಾರ ಸಂಜೆ ಅಧಿಕೃತವಾಗಿ ಘೋಷಿಸಿದೆ. ಚಿತ್ರನಟರಾದ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ವಿಜಯ್ ಕಿರಂಗದೂರು,…
ಹವಾಲ ಸುಳಿಯಲ್ಲಿ ಡಿಕೆಶಿ
June 21, 2018ಕಾಂಗ್ರೆಸ್ ಹೈಕಮಾಂಡ್ಗೆ ಕೋಟಿ ಕೋಟಿ ಸಾಗಿಸಿದ ಆರೋಪ ಡಿಕೆಶಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹವಾಲ ಚಟುವಟಿಕೆಯಲ್ಲಿ ತೊಡಗಿಸಿ ಕೊಂಡಿರುವುದನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಹಚ್ಚಿದೆ. ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ 25 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾ ಗಿದೆ. ಈ ಹಣವನ್ನು ಕಾಂಗ್ರೆಸ್ ವರಿಷ್ಠರಿಗೆ ಹವಾಲ ಮೂಲಕ ರವಾನಿಸಲಾಗಿದೆ ಎಂದು ಆರೋಪಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರೋಧಿಗಳು ಈ ಪ್ರಕರಣವನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ….
ಮೈಸೂರು ಗುತ್ತಿಗೆದಾರನ ಮನೆ ಮೇಲೆ ಐಟಿ ದಾಳಿ: 6.76 ಕೋಟಿ ನಗದು ವಶ
April 27, 2018ಮೈಸೂರು: ಇತ್ತೀಚಿನ ದಿನಗಳಲ್ಲಿ ಎಟಿಎಂಗಳಲ್ಲಿ ಹಣದ ಅಭಾವದ ಹಿನ್ನೆಲೆ ಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಳು ರಾಜ್ಯಾದ್ಯಂತ ಕಾರ್ಯಾಚರಣೆ ಆರಂಭಿಸಿದ್ದು, ಈ ಮಧ್ಯೆ ಮೈಸೂರಿನ ಗುತ್ತಿಗೆದಾರನ ಮನೆಯ ಮೇಲೂ ದಾಳಿ ನಡೆಸಿ 6.76 ಕೋಟಿ ರೂ. ವಶಪಡಿಸಿ ಕೊಂಡಿದ್ದಾರೆ. ಮೈಸೂರಿನ ಗುತ್ತಿಗೆದಾರ ಮರಿಸ್ವಾಮಿ ಎಂಬುವರು ತನ್ನ ಮನೆಯಲ್ಲಿ ಮಲಗುವ ಮಂಚದ ಕೆಳಗೆ ಭಾರೀ ಮೊತ್ತದ ನಗದನ್ನು ಬಚ್ಚಿಟ್ಟು, ಸಿಕ್ಕಿಬಿದ್ದಿದ್ದು, ಯಾವ ಉದ್ದೇಶಕ್ಕಾಗಿ ಈ ಹಣವನ್ನು ಮನೆಯಲ್ಲೇ ಸಂಗ್ರಹಿಸಿಡಲಾಗಿತ್ತು ಎಂಬುದು ವಿಚಾರಣೆಯ ನಂತರ ತಿಳಿಯಬೇಕಾಗಿದೆ. ಈ ಸಂಬಂಧ…