ಶಿವಮೊಗ್ಗ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಜೆಡಿಎಸ್ ವರಿಷ್ಠರೂ ಆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹತ್ತಿರದ ಸಂಬಂಧಿ ಪಿ.ಟಿ. ಪರಮೇಶ್ ಅವರು ಬ್ಯಾಂಕ್ ಲಾಕರ್ಗಳಲ್ಲಿ ಇರಿಸಿದ್ದ 6.5 ಕೋಟಿ ರೂ. ನಗದು ಪತ್ತೆಯಾಗಿದೆ. ಪರಮೇಶ್ ಅವರು ಶಿವಮೊಗ್ಗದಲ್ಲಿ ಮಾರುತಿ ಕಾರು ಮಾರಾಟದ ಶ್ರುತಿ ಮೋಟಾರ್ಸ್ ಷೋ ರೂಂ ಹೊಂದಿದ್ದಾರೆ. ಷೋರೂಂ ಮತ್ತು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದ್ದರು. ಈ ಸಂದರ್ಭ ಅವರ ಬ್ಯಾಂಕ್ ಲಾಕರ್ಗಳನ್ನು…
ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ
March 29, 2019ಮೈಸೂರು, ಮಂಡ್ಯ, ಹಾಸನ ಸೇರಿ15 ಕಡೆ ಐಟಿ ದಾಳಿ ಜೆಡಿಎಸ್ ಸಚಿವರು, ನಾಯಕರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್; ಹುಟ್ಟುಹಬ್ಬದ ದಿನವೇ ನಾಗನಹಳ್ಳಿ ಬಳಿಯ ಕಾಂಗ್ರೆಸ್ ಮುಖಂಡ ಬಿ.ರೇವಣ್ಣ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮೈಸೂರು: ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆಯೇ ಜೆಡಿಎಸ್-ಕಾಂಗ್ರೆಸ್ ಮುಖಂಡರು, ಪಿಡಬ್ಲ್ಯೂಡಿ ಕಂಟ್ರಾಕ್ಟರ್ಗಳ ಮೈಸೂರು, ಮಂಡ್ಯ, ಹಾಸನ ಸೇರಿದಂತೆ 15 ಕಡೆ ಸಚಿವರು, ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಆಪ್ತ ಗುತ್ತಿಗೆದಾರರು, ಅಧಿಕಾರಿಗಳ ಮತ್ತು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ…
‘ದೋಸ್ತಿ’ ನಾಯಕರ ಪ್ರತಿಭಟನೆ
March 29, 2019ಬೆಂಗಳೂರು: ವಿರೋಧಪಕ್ಷಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಮತ್ತು ಸಚಿವರು ಐಟಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಐತಿಹಾಸಿಕ ಘಟನೆ ನಡೆಯಿತು. ಮುಖ್ಯಮಂತ್ರಿಗಳೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದು, ರಾಜ್ಯದ ಇತಿಹಾಸದಲ್ಲೇ ಮೊದಲಾಗಿದೆ. ಸಿಬಿಐ ತನಿಖೆ ವಿರೋಧಿಸಿ, ಪಶ್ಚಿಮ ಬಂಗಾಳದ ಮುಖ್ಯ ಮಂತ್ರಿಯವರು ಇತ್ತೀಚೆಗಷ್ಟೇ ಕೊಲ್ಕತ್ತಾದಲ್ಲಿ ಕೇಂದ್ರದ ವಿರುದ್ಧ ಸರಣಿ ಧರಣಿ ನಡೆಸಿದ್ದರು. ಇದು ಮಾಸುವ ಮುನ್ನವೇ…
ಬೇನಾಮಿ ಆಸ್ತಿ: ಡಿಕೆಶಿ ಬಂಧನ ಸಾಧ್ಯತೆ
January 8, 2019ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ 110 ಕೋಟಿ ರೂ.ಗೂ ಹೆಚ್ಚು ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸದ್ಯದಲ್ಲೇ ಅವರು ಬಂಧನವಾಗುವ ಸಾಧ್ಯತೆ ಇದೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ದಾಳಿ ವೇಳೆ ಲಭ್ಯವಾದ ಆಸ್ತಿಗಿಂತಲೂ ಹೆಚ್ಚಿನ ಆಸ್ತಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು…
ಕನ್ನಡ ಚಿತ್ರತಾರೆಯರು, ನಿರ್ಮಾಪಕರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
January 4, 2019ಬೆಂಗಳೂರು: ಹೊಸ ವರ್ಷದ ಸಂತಸದಲ್ಲಿದ್ದ ಕನ್ನಡ ಚಿತ್ರರಂಗದ ಹಲವು ದಿಗ್ಗಜರು ಇಂದು ಬೆಳಿಗ್ಗೆ ಕಣ್ತೆರೆಯುವ ಮುನ್ನವೇ ಆದಾಯ ತೆರಿಗೆ ಅಧಿಕಾರಿಗಳ ದಾಳಿಯಿಂದ ಆಘಾತಕ್ಕೆ ಒಳಗಾಗಿದ್ದಾರೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ದೊಡ್ಡ ಪ್ರಮಾಣ ದಲ್ಲಿ, ಆದಾಯ ತೆರಿಗೆ (ಐಟಿ) ಅಧಿಕಾರಿಗಳು, ಖ್ಯಾತ ನಟರಾದ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್, ಸುದೀಪ್, ಯಶ್ ಅವರ ತಾರಾ ಪತ್ನಿ ರಾಧಿಕಾ ಪಂಡಿತ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಜೊತೆಗೆ ಈ ಖ್ಯಾತ ನಟರನ್ನು ಹಾಕಿಕೊಂಡು ಭಾರೀ ಹಣ ಹೂಡಿಕೆ ಮಾಡಿ ದೊಡ್ಡ ಪ್ರಮಾಣದಲ್ಲಿ…
ಐಟಿ ದಾಳಿ ವೇಳೆ ಮಾಜಿ ಸಿಎಂ, ಪ್ರಭಾವಿ ರಾಜಕಾರಣಿ ಕುಟುಂಬದ ಆಸ್ತಿ ದಾಖಲೆ ಪತ್ತೆ
July 24, 2018ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪ್ರಭಾವಿ ರಾಜಕಾರಣಿಯೊಬ್ಬರ ಕುಟುಂಬಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿ ದಾಖಲೆಗಳು ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಪತ್ತೆಯಾಗಿವೆ. ಕಳೆದ ಎರಡು ದಿನಗಳ ಹಿಂದೆ ನಗರದ ಬೌರಿಂಗ್ ಇನ್ಸ್ಟಿಟ್ಯೂಟ್ ಸಂಸ್ಥೆಯ ಸದಸ್ಯ ರೊಬ್ಬರ ಲಾಕರ್ನಲ್ಲಿ ಈ ದಾಖಲೆಗಳು ಪತ್ತೆಯಾಗಿವೆ. ಈ ದಾಖಲೆಗಳ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಲಾಕರ್ ಮಾಲೀಕ ಅವಿನಾಶ್ ಕುಕ್ರೇಜ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ರಾಜ್ಯದ ಕೆಲವು ಪ್ರಭಾವಿ ರಾಜಕಾರಣಿ ಗಳು, ಬಿಲ್ಡರ್ಗಳು ಮತ್ತು ವ್ಯಾಪಾರಸ್ಥರಿಗೆ ಸೇರಿವೆ ಎಂಬ…