ಮೈಸೂರು: ಮೈಸೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಹಿರಿಯ ನಟ ದಿ. ಅಂಬರೀಶ್ ಹಾಗೂ ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಹಲವಾರು ಮುಖಂ ಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಅಗಲಿದ ನಾಯಕರ ಆತ್ಮಕ್ಕೆ ಶಾಂತಿ ಕೋರಿದರು. ಕಾಂಗ್ರೆಸ್ ಭವನದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ದಿ.ಅಂಬರೀಶ್ ಹಾಗೂ ಜಾಫರ್ ಷರೀಫ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಶ್ರದ್ಧಾಂಜಲಿ ಸಭೆಯಲ್ಲಿ ಸಂಸದ ಆರ್.ಧ್ರುವ ನಾರಾಯಣ್ ಮಾತನಾಡಿ, ಹಿರಿಯ ನಟ ಅಂಬ ರೀಶ್…