ಮೈಸೂರು: ಪ್ರತ್ಯೇಕ ಲಿಂಗಾ ಯತ ಧರ್ಮದ ವಿಚಾರವಾಗಿ ಹಿಂದಿನ ಸರ್ಕಾರ ಕೈಗೊಂಡ ನಿರ್ಧಾರದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಅಂದಿನ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇ ಕಾರಣ ಎಂಬರ್ಥದಲ್ಲಿ ಸಚಿವ ಡಿಕೆಶಿ ಧರ್ಮ ಸಮ್ಮೇಳನವೊಂದ ರಲ್ಲಿ ಹೇಳಿಕೆ ನೀಡಿದ್ದರು. ಆದರೆ, ಈ ಶಿಫಾರಸ್ಸು,…
ಗದ್ದಲ, ವಿರೋಧದ ನಡುವೆ ಜಾಗತಿಕ ಲಿಂಗಾಯಿತ ಮಹಾಸಭಾ ಉದ್ಘಾಟನೆ
July 27, 2018ಚಾಮರಾಜನಗರ: ಗೊಂದಲ-ಗದ್ದಲ, ತೀವ್ರ ವಿರೋಧದ ನಡುವೆ ನಗರದಲ್ಲಿ ಗುರುವಾರ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟ ಕದ ಉದ್ಘಾಟನೆ ಹಾಗೂ ಜಾಗೃತಿ ಸಮಾವೇಶ ನಡೆಯಿತು. ಜಾಗತಿಕ ಲಿಂಗಾಯಿತ ಮಹಾಸಭಾದ ಆಶ್ರಯದಲ್ಲಿ ನಗರದ ಶ್ರೀ ಶಿವಕುಮಾರ ಸ್ವಾಮಿ ಭವನದಲ್ಲಿ ಮಹಾಸಭಾದ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಸಾಣೇಹಳ್ಳಿ ಶ್ರೀ ತರಳಬಾಳು ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕೂಡಲ ಸಂಗ ಮದ ಶ್ರೀ ಬಸವ ಮೃತ್ಯುಂಜಯ…
ಕಾರ್ಯಕ್ರಮದ ಆರಂಭದಲ್ಲಿ ಗೊಂದಲ-ಗದ್ದಲ
July 27, 2018ಚಾಮರಾಜನಗರ: ಇಂದಿಲ್ಲಿ ನಡೆದ ಜಾಗತಿಕ ಲಿಂಗಾಯಿತ ಮಹಾಸಭಾದ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಜಾಗೃತಿ ಸಮಾವೇಶದ ಕಾರ್ಯಕ್ರಮ ಆರಂಭದಲ್ಲಿಯೇ ಗೊಂದಲದ ಗೂಡಾಯಿತು. ಕಾರ್ಯಕ್ರಮ ಆರಂಭಗೊಂಡು ಸ್ವಾಗತ ಆರಂಭವಾಯಿತು. ಈ ವೇಳೆ ವೇದಿಕೆಯ ಮುಂಭಾಗದಲ್ಲಿಯೇ ಕುಳಿತಿದ್ದ ವೀರ ಶೈವ ಮಹಾಸಭಾದ ಪದಾಧಿಕಾರಿಗಳು, ಸದಸ್ಯರು ಹಾಗೂ ಕೆಲವರು ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗಲೂ ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಕಾರ್ಯಕ್ರಮ ರೂಪಿಸಿದ್ದ ಸಂಘಟಕರೂ ಸಹ ಘೋಷಣೆಗಳನ್ನು ಕೂಗತೊಡಗಿದರು. ಈ ವೇಳೆ ಗದ್ದಲ-ಗೊಂದಲ ಉಂಟಾಯಿತು. ಸ್ಥಳದಲ್ಲಿದ್ದ ಪೊಲೀಸರು ಇಬ್ಬರನ್ನೂ ಎಷ್ಟೇ ಸಮಾಧಾನಿಸಿದರೂ ಸಹ…