ನವದೆಹಲಿ: ಜೈನಮುನಿ ತರುಣ್ ಸಾಗರ್ ದೀರ್ಘಕಾಲದ ಅನಾರೋಗ್ಯದ ನಂತರ ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಜಾಂಡೀಸ್ನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಪೂರ್ವ ದೆಹಲಿಯ ಕೃಷ್ಣ ನಗರ ಪ್ರದೇಶದಲ್ಲಿರುವ ರಾಧಾಪುರಿ ಜೈನ ದೇವಸ್ಥಾನದಲ್ಲಿ ಅವರು ಆಶ್ರಮ ಹೊಂದಿ ದ್ದರು. ಅವರ ಅಂತಿಮ ಕ್ರಿಯೆಗಳು ಉತ್ತರ ಪ್ರದೇಶದ ಮುರುದ್ ನಗರದ ತರುಣ್ ಸಾಗರಮ್ನಲ್ಲಿ ನಡೆಸಲಾಗುತ್ತದೆ. ಮಧ್ಯಪ್ರದೇಶದ ದಹೊಹ್ ಜಿಲ್ಲೆಯಲ್ಲಿ 1967ರ ಜೂನ್ 26ರಂದು ಜನಿಸಿದ್ದ ತರುಣ್ ಸಾಗರ್ ಅವರು…