ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ಮಕಾಡೆ ಮಲಗಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಂಸದ ಜಿ.ಎಸ್. ಬಸವ ರಾಜು ವಿರುದ್ಧ ಸೋಲನನುಭವಿಸಿದ್ದಾರೆ, ಆರಂಭಿಕ ಎಣಿಕೆ ಪ್ರಕ್ರಿಯೆಯಲ್ಲಿ ಮುನ್ನಡೆ ಸಾಧಿಸಿದ್ದ ದೇವೇಗೌಡರು ನಂತರ ನಿರಂತರ ಹಿನ್ನಡೆಗೆ ಬಂದು ಸೋಲನನುಭವಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಒಂದು ಬಾರಿಯೂ ಮುನ್ನಡೆ ಸಾಧಿಸದೇ ಎದುರಾಳಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ವಿರುದ್ಧ…
ಮೇ 21ರಂದು ಜೆಡಿಎಸ್ ಶಾಸಕಾಂಗ ಪಕ್ಷ ಸಭೆ
May 18, 2019ಬೆಂಗಳೂರು: ಲೋಕ ಸಭಾ ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲೂ ಮಹತ್ತರ ತಿರುವು ಗಳು ಪಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ, ಶಾಸಕರು ಮತ್ತು ಸಂಸದರ ಅಭಿಪ್ರಾಯ ಕೇಳಲು ಮುಂದಾಗಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುವ 2 ದಿನ ಮುನ್ನವೇ ಅಂದರೆ ಮೇ 21ರಂದು ತಮ್ಮ ಪಕ್ಷದ ಶಾಸಕಾಂಗ ಪಕ್ಷದ ಸಭೆ ಕರೆದಿ ದ್ದಾರೆ. ಅಂದು ನಡೆಯಲಿರುವ ಪಕ್ಷದ ಶಾಸಕಾಂಗ ಸಭೆಗೆ ತಪ್ಪದೆ ಹಾಜರಾಗು ವಂತೆ ಜೆಡಿಎಸ್ನ ಎಲ್ಲ ವಿಧಾನಸಭಾ ಸದಸ್ಯರು,…
ಮಂಡ್ಯ ಜನತೆಗೆ ಮತ್ತೊಬ್ಬ ಮಣ್ಣಿನ ಮಗನ ಸೃಷ್ಟಿಸುವ ಅವಕಾಶ ಸಿಕ್ಕಿದೆ
April 11, 2019ಮೈಸೂರು: ನಿಖಿಲ್ ವಯಸ್ಸಿನಲ್ಲಿ ಚಿಕ್ಕವ ನಾದರೂ ಜನಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡ ಬೇಕೆಂಬ ಬದ್ಧತೆ ಹೊಂದಿದ್ದಾನೆ. ಮತ್ತೊಬ್ಬ ಮಣ್ಣಿನ ಮಗನನ್ನು ಮಂಡ್ಯದ ಜನರೇ ಸೃಷ್ಟಿ ಮಾಡಬೇಕೆಂದು ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ತಾಯಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಬುಧವಾರ ಲೋಕಸಭಾ ಚುನಾವಣಾ ಹಿನ್ನೆಲೆ ಯಲ್ಲಿ ಏರ್ಪಡಿಸಲಾಗಿದ್ದ ಮಂಡ್ಯ ಜಿಲ್ಲೆ ಮೈಸೂರು ನಿವಾಸಿಗಳ ಒಕ್ಕೂಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ…
ದೇವೇಗೌಡರದ್ದು ರಾಕ್ಷಸ ಕುಟುಂಬ…!?
March 22, 2019ತುಮಕೂರು: “ದೇವೇಗೌಡರದ್ದು ರಾಕ್ಷಸ ಕುಟುಂಬವಿದ್ದಂತೆ. ಅವರು ಯಾವುದಕ್ಕೂ ಹೆದರುವುದಿಲ್ಲ. ಗೆಲ್ಲಲಿ, ಸೋಲಲಿ ಹೋರಾಟ ಮಾಡುತ್ತಾರೆ,” ಎಂದು ಅವರನ್ನು ಹೊಗಳುವ ಭರದಲ್ಲಿ ಜೆಡಿಎಸ್ ಸಚಿವ ಶ್ರೀನಿವಾಸ್ ಎಡವಟ್ಟಿನ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಲು ದೇವೇಗೌಡರು ಹೆದರುತ್ತಾರೆ. ಇದರಿಂದಾಗಿ ತುಮಕೂರಿನಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಎಂದು ಬಿಜೆಪಿ ಟೀಕಿಸಿತ್ತು. ಈ ಹೇಳಿಕೆಗೆ ತಿರುಗೇಟು ನೀಡಲು ಮುಂದಾದ ಅವರು, ದೇವೇಗೌಡ ಅವರ ಕುಟುಂಬಕ್ಕೆ ಬೈದರಾ ಅಥವಾ ಹೊಗಳಿದರಾ ಎಂಬ ಪ್ರಶ್ನೆ ಮಾಧ್ಯಮದವರಲ್ಲೇ ಉದ್ಭವಿಸಿದೆ. ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧೆ ಮಾಡು…
ಎಲ್ಲರೂ ಒಗ್ಗೂಡಿ ಪಕ್ಷ ಕಟ್ಟುವ: ಜೆಡಿಎಸ್ ಜಿಲ್ಲಾಧ್ಯಕ್ಷ ಗಣೇಶ್
March 13, 2019ಮಡಿಕೇರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿ ರುವುದರಿಂದ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯ ರ್ಥಿಯ ಗೆಲುವಿಗೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕಾರ್ಯ ನಿರ್ವ ಹಿಸಬೇಕೆ ಹೊರತು, ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಜಾತ್ಯಾತೀತ ಜನತಾದಳದ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಜಿಲ್ಲಾಧ್ಯಕ್ಷ ಸ್ಥಾನದ ಜವಬ್ದಾ ರಿಯನ್ನು ನನಗೆ ನೀಡಿದ್ದು, ಹಿರಿಯರ ಆಜ್ಞೆಯನ್ನು ಪಾಲಿಸು ವುದು ನನ್ನ ಕರ್ತವ್ಯವಾಗಿದೆ. ವರಿಷ್ಠರ ಸೂಚನೆಯಂತೆ ನಾನು ಜಿಲ್ಲಾಧ್ಯಕ್ಷ…
ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ
February 23, 2019ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಘಳಿಗೆಯಲ್ಲಿ ಜೆಡಿಎಸ್, ಬಿಜೆಪಿ ಯೊಂದಿ ಗಿನ ಮೈತ್ರಿ ಮುರಿದುಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ನಡುವೆ ಮಾತುಕತೆ ಫಲಶ್ರುತಿಯಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಏರ್ಪಟ್ಟಿರುವಂತೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮೂಲಕ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಅಧಿಕಾರ ಹಿಡಿಯಲು ಸಜ್ಜಾಗಿವೆ. ಕೆಲ ದಿನಗಳಿಂದ ಜೆಡಿಎಸ್ ವರಿಷ್ಠರೇ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾ ವಣೆಯ ಸಂಬಂಧ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳುತ್ತಾ ಬಂದಿದ್ದರು. ಇದರ…
ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
January 20, 2019ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…
ಲೋಕಸಭಾ ಚುನಾವಣೆ: ಗೌಡರ ಕುಟುಂಬದ ಮೂವರ ಸ್ಪರ್ಧೆ
January 12, 2019ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಸರ್ಕಾರದಲ್ಲಿ ಜೆಡಿಎಸ್ ಬಲ ಪ್ರದರ್ಶನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮೂವರು ಕಣಕ್ಕಿಳಿಯಲಿದ್ದಾರೆ. ಇದುವರೆಗೂ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಮಾತ್ರ ಹೊಸದಾಗಿ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿತ್ತು. ಆದರೆ ಇದೀಗ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಚುನಾವಣಾ ಕಣಕ್ಕೆ ಧುಮುಕುವ ಇಂಗಿತ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ನಿಖಿಲ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಸ್ಥಳೀಯ…
ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ
November 9, 2018ಬೆಂಗಳೂರು: ದೇಶದ ಪ್ರಜಾ ಪ್ರಭುತ್ವ, ಸಂವಿಧಾನ ರಕ್ಷಿಸುವ ನಿಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ತೃತೀಯ ರಂಗದ ಮುಂದಿನ ಕಾರ್ಯತಂತ್ರ ಕುರಿತಂತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲ ಒಂದಾಗಿದ್ದೇವೆ. ಎನ್ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು. ಇದಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು….
ಬಿಜೆಪಿ ಕೈತಪ್ಪಲಿದೆಯೇ ಬಳ್ಳಾರಿ?
November 5, 2018ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಲಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಜಯಗಳಿಸಲಿದ್ದಾರೆ ಎಂದು ಗುಪ್ತಚರ ಇಲಾಖೆಯು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಅದೇ ರೀತಿ ಬಳ್ಳಾರಿ ಲೋಕಸಭೆ ಮತ್ತು ಜಮ ಖಂಡಿ ವಿಧಾನಸಭಾ ಕ್ಷೇತ್ರಗಳಲ್ಲಿ…