ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ನ ಎಸ್.ಎಲ್.ಬೋಜೇಗೌಡ ಆಯ್ಕೆ ಮೈಸೂರು: ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು, ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆ ಹಂತದಲ್ಲೇ ಭರ್ಜರಿ ಗೆಲುವು ದಾಖಲಿಸುವ ಮೂಲಕ ವಿಧಾನ ಪರಿಷತ್ಗೆ ಪುನರಾಯ್ಕೆಯಾಗಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಒಟ್ಟು 47,171 ಮತದಾನವಾಗಿತ್ತು. ಅಭ್ಯರ್ಥಿ ಗೆಲುವಿಗೆ 21526 ಖೋಟಾ ಮತಗಳ ಅಗತ್ಯವಿತ್ತು. ಹಾಗೆಯೇ ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲೇ ಆಯನೂರು ಮಂಜುನಾಥ್ 25,250 ಮತಗಳನ್ನು ಪಡೆದುಕೊಳ್ಳುವ ಮೂಲಕ ಅದ್ವಿತೀಯ ಗೆಲುವು ದಾಖಲಿಸಿದರು. ಪ್ರತಿಸ್ಪರ್ಧಿಗಳಾದ…
ಅಭಿವೃದ್ಧಿ ಕಾರ್ಯಗಳಿಗೆ ಜನತೆಯಿಂದ ಫುಲ್ ಮಾಕ್ರ್ಸ್ಶಾಸಕ ಕೆ.ಎಂ.ಶಿವಲಿಂಗೇಗೌಡ ಮೆಚ್ಚುಗೆ ನುಡಿ
June 11, 2018ಅರಸೀಕೆರೆ: ರಾಜಕಾರಣ ಕ್ಕಾಗಿ ನನ್ನ ಕ್ಷೇತ್ರದಲ್ಲಿ ಜಾತಿ ರಾಜಕಾರಣ ಮಾಡಿದ್ದಲ್ಲಿ ನಾನು ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಫುಲ್ ಮಾಕ್ರ್ಸ್ ನೀಡಿ ನನ್ನನ್ನು ಸತತ 3ನೇ ಬಾರಿ ಗೆಲ್ಲಿಸಿದ್ದಾರೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ನುಡಿದರು. ನಗರದ ಗೃಹ ಕಚೇರಿಯಲ್ಲಿ ತಾಲೂಕು ಬೇಡ ಜಂಗಮ ಸಮಾಜದ ವತಿಯಿಂದ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನ ಅಭಿವೃದ್ಧಿ ಕಾರ್ಯಗಳನ್ನು ಅರಿತು 3ನೇ ಬಾರಿ ದಾಖಲೆ ಮತಗಳ ಅಂತರಲ್ಲಿ ನನ್ನನ್ನು ಗೆಲ್ಲಿಸಿ ವಿಧಾನಸಭೆಗೆ ಕಳಿಸಿಕೊಟ್ಟಿ ರುವ ಕ್ಷೇತ್ರದ ಜನತೆಗೆ ನಾನು ಅಭಾರಿ…
ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ: ಮಂಜುನಾಥ್
June 10, 2018ಹನೂರು: ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್ ಕೃತಜ್ಞತಾ ಸಭೆಯನ್ನು ಜೆಡಿಎಸ್ ಪರಾಜಿತ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಕ್ಷೇತ್ರದ ಜನತೆ ನನ್ನನ್ನು ಮನೆ ಮಗನಂತೆ ಸ್ವಾಗತಿಸಿದರು. ನನಗೆ ತೋರಿದ ಅಭೂತಪೂರ್ವವಾದ ಬೆಂಬಲ ನನ್ನ ಜೀವನದಲ್ಲಿ ಸ್ಮರಣ ೀಯವಾದದ್ದು, ಕ್ಷೇತ್ರದ ಜನತೆ ಬದಲಾವಣೆ ಬಯಸಿ ನನಗೆ ಸುಮಾರು 45 ಸಾವಿರ ಮತಗಳನ್ನು ನೀಡಿದ್ದಾರೆ. ಸೋಲಿಗೆ ಧೃತಿಗೆಡದೆ ಕ್ಷೇತ್ರದಲ್ಲಿ ಗಟ್ಟಿಯಾಗಿ ನೆಲೆ ನಿಂತು ಮುಂಬರುವ ಎಲ್ಲ ಚುನಾವಣೆಗಳಿಗೆ ಪಕ್ಷದ ಸಂಘಟನೆಯನ್ನು…
ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ
June 9, 2018ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (ಈಗ ಮಾಜಿ) ಅವರನ್ನು ಮಣ ಸಿದ್ದ ಜಿ.ಟಿ. ದೇವೇಗೌಡ ಅವರಿಗೆ ಪ್ರಮುಖ ಖಾತೆ ಲಭಿಸುವ ನಿರೀಕ್ಷೆಯ ಲ್ಲಿದ್ದ ಅವರ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈಗ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದ ಜಿ.ಟಿ. ದೇವೇಗೌಡರಿಗೆ ಸಹಜವಾಗಿಯೇ ಪ್ರಬಲ ಖಾತೆ ಸಿಗುವ ಬಗ್ಗೆಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಭಾರೀ…
ಕೊಟ್ಟ ಮಾತಿನಂತೆ ಕುಮಾರಸ್ವಾಮಿಯವರು ನನ್ನನ್ನು ಮಂತ್ರಿ ಮಾಡಿದರು: ಸಾರಾ
June 9, 2018ಕೆ.ಆರ್.ನಗರ: ನನ್ನ ನೆಚ್ಚಿನ ನಾಯಕರಾದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೆ.ಆರ್.ನಗರ ತಾಲೂಕಿನ ಜನತೆಗೆ ಚುನಾವಣೆ ಸಂದರ್ಭ ದಲ್ಲಿ ನೀಡಿದ ಆಶ್ವಾಸನೆಯಂತೆ ನನ್ನನ್ನು ಸಚಿವನನ್ನಾಗಿ ಮಾಡಿ ಪ್ರವಾಸೋ ದ್ಯಮ ಮತ್ತು ರೇಷ್ಮೆ ಖಾತೆಯನ್ನು ನೀಡಿದ್ದು, ಅವರ ಆಶಯದಂತೆ ಈ ರಾಜ್ಯದ ಜನತೆಗೆ ಮತ್ತು ಸರ್ಕಾರಕ್ಕೆ ಹೆಸರು ತರುವ ರೀತಿ ಯಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ನೂತನ ಸಚಿವ ಸಾ.ರಾ.ಮಹೇಶ್ ಹೇಳಿದರು. ಸಚಿವರಾಗಿ ನೇಮಕಗೊಂಡ ನಂತರ ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಸಾ.ರಾ.ಮಹೇಶ್ ತಾಲೂಕಿನ ಜೆಡಿಎಸ್ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಸ್ವೀಕರಿಸಿ, ನಂತರ…
ನೂತನ ಸಚಿವ ಸಾ.ರಾ.ಮಹೇಶ್ಗೆ ಮೈಸೂರಲ್ಲಿ ಅದ್ಧೂರಿ ಸ್ವಾಗತ
June 8, 2018ಮೈಸೂರು: ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಕೆ.ಆರ್.ನಗರದ ಶಾಸಕ ಸಾ.ರಾ.ಮಹೇಶ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮೈಸೂರು-ಬೆಂಗಳೂರು ಮುಖ್ಯರಸ್ತೆ, ಟೋಲ್ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಪಟಾಕಿ ಸಿಡಿಸಿ, ಬೃಹತ್ ಹಾರ ಹಾಕಿ, ಹೂಗುಚ್ಛಗಳನ್ನು ನೀಡಿ, ಆರತಿ ಬೆಳಗಿ, ಜೈಕಾರ ಹಾಕಿ ಸಂಭ್ರಮದಿಂದ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಾ.ರಾ.ಮಹೇಶ್, ನಾನು ಕೆ.ಆರ್.ನಗರದ ಶಾಸಕನಾದರೂ ನೆಲೆಸಿರುವುದು ಮೈಸೂರಿನಲ್ಲಿ. ಇಷ್ಟೊಂದು ಸಂಭ್ರಮದಿಂದ ನನ್ನನ್ನು ಸ್ವಾಗತಿಸಿರುವುದು ಸಂತಸ ತಂದಿದೆ….
70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!
June 7, 2018ಮೇಲುಕೋಟೆಗೆ ಪ್ರಥಮ ಬಾರಿಗೆ ಮಂತ್ರಿಗಿರಿ- ಕಳಚಿದ ಸಚಿವ ಸ್ಥಾನವಿಲ್ಲದ ಕ್ಷೇತ್ರವೆಂಬ ಹಣೆಪಟ್ಟಿ ಸಕ್ಕರೆ ನಾಡಿಗೆ ಡಬಲ್ ಧಮಾಕ- ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣಗೆ ಸಚಿವ ಸ್ಥಾನ ನಾಗಯ್ಯ ಲಾಳನಕೆರೆ ಮಂಡ್ಯ: ಇದು ಪಾಂಡವಪುರ ಅಲಿಯಾಸ್ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ರಾಜಕೀಯ ವೃತ್ತಾಂತ. ಸ್ವಾತಂತ್ರ್ಯ ಬಂದ 70 ವರ್ಷಗಳ ಬಳಿಕ ಇದೀಗ ಶಾಪವಿಮೋಚನೆ ಪಡೆದ ಕ್ಷೇತ್ರ ವೆಂಬ ಕೀರ್ತಿಗೆ ಭಾಜನವಾಗುತ್ತಿರುವ ಪಾಂಡವಪುರ ರಾಜಕೀಯ ಚಿತ್ರಣ!ವಿಧಾನಸಭಾ ಕ್ಷೇತ್ರವಾಗಿದ್ದ ಪಾಂಡವ ಪುರ. 2008ರಲ್ಲಿ ನಡೆದ ಕ್ಷೇತ್ರ ವಿಂಗಡಣೆ ಯಿಂದಾಗಿ ಮೇಲುಕೋಟೆ ಕ್ಷೇತ್ರವಾಗಿ ನಾಮಕರಣಗೊಂಡಿತು….
ಜಿಟಿಡಿಯವರಿಗೆ ಇಂಧನ, ಲೋಕೋಪಯೋಗಿ ಖಾತೆ ನೀಡುವಂತೆ ಜೆಡಿಎಸ್ ಮುಖಂಡರ ಆಗ್ರಹ
June 5, 2018ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ಯಲ್ಲಿ ಪಕ್ಷ ಸಂಘಟನೆಯ ಅವಶ್ಯಕತೆ ಇರುವುದರಿಂದ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕ ಜಿ.ಟಿ.ದೇವೇಗೌಡರಿಗೆ ಪ್ರಬಲ ಇಲಾಖೆಗಳಾದ ಇಂಧನ ಅಥವಾ ಲೋಕೋಪಯೋಗಿ ಖಾತೆ ನೀಡುವಂತೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಚನೆಯಾಗಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಜಿ.ಟಿ.ದೇವೇಗೌಡ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ಪಕ್ಷದ ಹೈಕಮಾಂಡ್ ನಿರ್ಧರಿಸಿದೆ. ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕರಾಗಿರುವ ಜಿಟಿಡಿ ಅವರಿಗೆ…
ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ
June 5, 2018ಚಾಮರಾಜನಗರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಂಕ್ಚರ್ ಆಗಿರುವ ಗಾಡಿಯಾಗಿದೆ. ಈ ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ ಮಾಡುತ್ತಿದೆ ಎಂದು ಮಾಜಿ ಸಂಸದೆ ತೇಜಸ್ವಿನಿಗೌಡ ವ್ಯಂಗ್ಯ ವಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನ ದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅವಕಾಶವಾದಿಗಳ ಪಿತಾಮಹ ಎಂದು ಟೀಕಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ಖುಷಿಯಿಂದ ಹೇಳುತ್ತಿದ್ದರು. ಜತೆಗೆ, ವಯೋವೃದ್ಧರಿಗೆ ಮಾಸಿಕ…
`ಪುಟಗೋಸಿ ಜೆಡಿಎಸ್’ ಹೇಳಿಕೆಗೆ ಖಂಡನೆ
June 5, 2018ಮಂಡ್ಯ: `ಪುಟಗೋಸಿ ಜೆಡಿಎಸ್’ ಎಂದು ಟೀಕಿಸಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ನಗರದಲ್ಲಿಂದು ಜೆಡಿಎಸ್ ಕಾರ್ಯಕರ್ತರು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ಪುಟಗೋಸಿ ಕಳುಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ಬೆಳಿಗ್ಗೆ ನಗರದ ಮುಖ್ಯ ಅಂಚೆ ಕಚೇರಿ ಬಳಿ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಅನಂತ ಕುಮಾರ್ ಹೆಗಡೆ ಅವರಿಗೆ ಪುಟಗೋಸಿ ಗಳನ್ನು ಕೊರಿಯರ್ ಮಾಡಿದರು. ಈ ಹಿಂದೆ ಅನಂತಕುಮಾರ್ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಶಾಸಕರ ಅಭಿನಂದನಾ…