ಮೈಸೂರು, ಮೇ 23(ಪಿಎಂ)- ಕೊರೊನಾ ಸೋಂಕು ಮೈಸೂರು ಜಿಲ್ಲೆ ಯಲ್ಲಿ ಹೆಚ್ಚು ಕಾಣಿಸಿಕೊಳ್ಳಲು ಕಾರಣ ವಾದ ನಂಜನಗೂಡು ಕೈಗಾರಿಕಾ ಪ್ರದೇಶದ ಜುಬಿಲಂಟ್ ಕಾರ್ಖಾನೆ ವಿರುದ್ಧ ಕ್ರಿಮಿ ನಲ್ ಪ್ರಕರಣ ದಾಖಲಿಸಿ, ತನಿಖೆಯನ್ನು ಅಂತಾರಾಷ್ಟ್ರೀಯ ಮಟ್ಟದ ತನಿಖಾ ಸಂಸ್ಥೆಗೆ ವಹಿಸಬೇಕು. ಕಾರ್ಖಾನೆಯಿಂದಾಗಿ ಕೊರೊನಾ ಸೋಂಕಿನ ಕಷ್ಟಕ್ಕೆ ಸಿಲುಕಿದವ ರಿಗೆ ಕಂಪನಿಯೇ ಪರಿಹಾರ ಭರಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಮೈಸೂರಿನ ನಜರ್ಬಾದ್ ಪಿಡಬ್ಲ್ಯೂಡಿ ಅತಿಥಿಗೃಹದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ಪ್ರಕರಣದಲ್ಲಿ…