ಮಳೆ ನೀರು ಚರಂಡಿ ಮೇಲೆ ನಿರ್ಮಿಸಿರುವ ಅನಧಿಕೃತ ಮನೆಗಳ ತೆರವಿಗೆ ಸೂಚನೆ ಮೈಸೂರು: ಮೈಸೂರಿನ ಟಿ.ಕೆ.ಲೇಔಟ್ನಲ್ಲಿ ಮಳೆ ನೀರು ಚರಂಡಿ ಮೇಲೆ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳು ಹಾಗೂ ಮೀನಿನ ಕಬಾಬ್ ಅಂಗಡಿಯನ್ನು ತಕ್ಷಣ ತೆರವುಗೊಳಿಸಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೆಳಿಗ್ಗೆ ಮೈಸೂರಿನ ಹಿಂದಿನ 23ನೇ ವಾರ್ಡ್(ಹಾಲಿ 43ನೇ ವಾರ್ಡ್)ನಲ್ಲಿ ಪಾದಯಾತ್ರೆ ನಡೆಸಿದ ವೇಳೆ ಟಿ.ಕೆ.ಲೇಔಟ್ನ ಮಳೆ ನೀರು ಚರಂಡಿಯನ್ನು ಮುಚ್ಚಿಹಾಕಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿರುವುದು ಕಂಡು ಬಂತು. ಅಲ್ಲದೆ, ಶಾಸಕರು…
ಮೈಸೂರು ಕೋರ್ಟ್ ಹಿಂಭಾಗದ ಅಕ್ರಮ ಮನೆ ತೆರವಿಗೆ ಶಾಸಕ ರಾಮದಾಸ್ ಸೂಚನೆ
July 31, 2018ಮೈಸೂರು: ಮೈಸೂರು ನ್ಯಾಯಾಲಯದ ಹಿಂಭಾಗದ ಸರ್ಕಾರದ ಖರಾಬು ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ತೆರವುಗೊಳಿಸುವಂತೆ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಬೆಳಿಗ್ಗೆ ವಾರ್ಡ್ ನಂ 48ನೇ ವಾರ್ಡಿನ ಜಯನಗರ ಮತ್ತಿತರೆ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಿಂದ ಸಮಸ್ಯೆ ಆಲಿಸಿದ ಅವರು, ನ್ಯಾಯಾಲಯದ ಹಿಂಭಾಗದಲ್ಲಿ ಸರ್ಕಾರದ ಖರಾಬು ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿರುವುದು, ದನಕರುಗಳನ್ನು ಕಟ್ಟಿರುವುದು ಗಮನಕ್ಕೆ ಬಂದಿದೆ. ಕೂಡಲೇ ಸರ್ಕಾರಿ ಜಾಗದಲ್ಲಿ ಯಾವುದೇ ಕಟ್ಟಡವಿದ್ದರೆ ಅದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ…
72.5 ಲಕ್ಷ ವೆಚ್ಚದ 5 ಕಾಮಗಾರಿಗೆ ಶಾಸಕ ರಾಮದಾಸ್ ಚಾಲನೆ
July 30, 2018ಮೈಸೂರು: ಮೈಸೂರಿನ ವಾರ್ಡ್ ನಂ.64ರಲ್ಲಿ ಸುಮಾರು 72.5 ಲಕ್ಷ ರೂ.ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎ. ರಾಮದಾಸ್ ಭಾನುವಾರ ಚಾಲನೆ ನೀಡಿದರು. ಈ ವಾರ್ಡಿನಲ್ಲಿ ಪಾದಯಾತ್ರೆ ನಡೆಸಿದ ವೇಳೆ ಸಾರ್ವಜನಿಕರು ತುರ್ತು ಆಗಬೇಕಿದ್ದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕೆಂದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ವಿವೇಕಾನಂದ ವೃತ್ತದ ಬಸ್ ನಿಲ್ದಾಣದ ಸಮೀಪ 10 ಲಕ್ಷ ರೂ. ವೆಚ್ಚದ ಸಾರ್ವಜನಿಕರ ಶೌಚಾಲಯ ನಿರ್ಮಾಣ, 15 ಲಕ್ಷ ವೆಚ್ಚದಲ್ಲಿ ಶನಿದೇವರ ದೇವ ಸ್ಥಾನದಿಂದ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಅಭಿವೃದ್ಧಿ, 27.5 ಲಕ್ಷ…
54ನೇ ವಾರ್ಡ್ನಲ್ಲಿ ಶಾಸಕ ರಾಮದಾಸ್ ಪಾದಯಾತ್ರೆ: ಬೆಟ್ಟದ ಪಾದದ ಬಳಿ ಅನಧಿಕೃತ ಶೆಡ್ ತೆರವಿಗೆ ಸೂಚನೆ
July 29, 2018ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಶನಿವಾರ, 54ನೇ ವಾರ್ಡ್ನಲ್ಲಿ ಪಾದಯಾತ್ರೆ ನಡೆಸಿ, ಸಾರ್ವಜನಿಕ ಕುಂದು-ಕೊರತೆ ಪರಿಶೀಲಿಸಿದರು. ಚಾಮುಂಡಿ ಬೆಟ್ಟದ ಪಾದದಿಂದ ಪಾದಯಾತ್ರೆ ಆರಂಭಿಸಿದ ಅವರು, ಅಲ್ಲಿ ಅಕ್ರಮವಾಗಿ ಶೆಡ್ ಹಾಕಿಕೊಂಡು ವಾಹನ ನಿಲುಗಡೆಗೆ ಬಾಡಿಗೆ ನೀಡಿದ್ದಾರೆಂದು ಸಾರ್ವಜನಿಕರಿಂದ ದೂರು ಕೇಳಿ ಬಂದಿದ್ದು, ಕೂಡಲೇ ಅನಧಿಕೃತ ಶೆಡ್ ತೆರವುಗೊಳಿಸಿ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಹಾಗೂ ಶೌಚಾಲಯ ನಿರ್ಮಾಣ ಮಾಡಿಸಬೇಕು. ಮಳೆ ನೀರು ಚರಂಡಿಯನ್ನು ಮುಚ್ಚಿ, ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಮುಡಾ…
ಜು.21ಕ್ಕೆ ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದ ಯೋಜನೆಗಳ ಮಾಹಿತಿ ನೀಡಲು ಸಭೆ
July 18, 2018ಮೈಸೂರು: ಮಹಿಳಾ ಸಂಘ-ಸಂಸ್ಥೆಗಳ ಸದಸ್ಯರು ಮನೆಯಲ್ಲಿ ಸ್ವಂತ ಉದ್ಯೋಗ ಆರಂಭಿಸಲು ಆರ್ಥಿಕ ಸಹಾಯ ಸೇರಿದಂತೆ ಸರ್ಕಾರದ ಯೋಜನೆ ಗಳ ಸಂಬಂಧ ಮಾಹಿತಿ ಒದಗಿಸಲು ಜು.21 ರಂದು ಲೀಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಏರ್ಪಡಿಸುವುದಾಗಿ ಮಾಜಿ ಸಚಿವರೂ ಆದ ಶಾಸಕ ಎಸ್.ಎ. ರಾಮದಾಸ್ ಹೇಳಿದರು. ಮೈಸೂರಿನ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯ 15 ಮತ್ತು 17ನೇ ವಾರ್ಡಿನಲ್ಲಿ (ಈಗ 59ನೇ ವಾರ್ಡ್) ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸಂಬಂಧ ಮಂಗಳವಾರ ಪಾದಯಾತ್ರೆ ನಡೆಸಿದ ಅವರು,…
ಪಾದಚಾರಿ ಮಾರ್ಗ, ಮಾಂಸಹಾರಿ ಫಾಸ್ಟ್ಫುಡ್ ತೆರವಿಗೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ
June 28, 2018ಶಾಸಕ ರಾಮದಾಸರ ಮುಂದುವರೆದ ಪಾದಯಾತ್ರೆ ಮೈಸೂರು: ಕೆ.ಆರ್.ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಪಾದಚಾರಿ ಮಾರ್ಗವನ್ನು ತೆರವುಗೊಳಿಸುವುದರೊಂದಿಗೆ ರಸ್ತೆ ಬದಿಗಳಲ್ಲಿ ಮಾಂಸಹಾರಿ ಫಾಸ್ಟ್ಫುಡ್ಗಳಿಗೆ ಅನುಮತಿ ನೀಡಬಾರದೆಂದು ಶಾಸಕ ಎಸ್.ಎ.ರಾಮದಾಸ್ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆಯ 3ನೇ ವಾರ್ಡ್ನಲ್ಲಿ (ಪುನರ್ ವಿಂಗಡಣೆ ಬಳಿಕ 49ನೇ ವಾರ್ಡ್) ಬುಧವಾರ ಬೆಳಿಗ್ಗೆ 6.30ರಿಂದ ನ್ಯಾಯಾಲಯದ ಮುಂಭಾಗವಿರುವ ಮನುವನ ಪಾರ್ಕ್ನಿಂದ ಪಾದಯಾತ್ರೆ ಆರಂಭಿಸಿದ ಅವರು, ವಾಯುವಿಹಾರಿಗಳು, ಯೋಗಪಟುಗಳು, ದೈಹಿಕ ಕಸರತ್ತು ಮಾಡುವವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಗೀತಾ ರಸ್ತೆ, ಆರ್ಟಿಓ ವೃತ್ತ, ಲಕ್ಷ್ಮೀಪುರಂ, ಮದ್ವಾಚಾರ್ ರಸ್ತೆ,…
ಪಾದಯಾತ್ರೆ ಮೂಲಕ ಶಾಸಕ ರಾಮದಾಸ್ರಿಂದ ನಾಗರಿಕರ ಸಮಸ್ಯೆಗಳ ಪರಿಹಾರ ಸೂತ್ರ
June 27, 2018ಮೈಸೂರು: ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 2ರಲ್ಲಿ ಮಂಗಳವಾರ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಜನಸ್ಪಂದನಾ ಯಾತ್ರೆ ನಡೆಸಿ, ನಾಗರಿಕ ಸಮಸ್ಯೆಗಳನ್ನು ಆಲಿಸಿ ನಿಗದಿತ ಸಮಯದೊಳಗೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾರ್ಡ್ ಸಂಖ್ಯೆ 2ರ (ಪುನರ್ ವಿಂಗಡಣೆ ಬಳಿಕ ವಾರ್ಡ್ ಸಂಖ್ಯೆ-50) ವ್ಯಾಪ್ತಿಯಲ್ಲಿ ಪಾಲಿಕೆ, ಸ್ಲಂ ಬೋರ್ಡ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳೊಂದಿಗೆ ಪಾದಯಾತ್ರೆ ಮೂಲಕ ನಾಗರಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಒಳಚರಂಡಿ ವ್ಯವಸ್ಥೆ, ರಸ್ತೆ ದುರಸ್ತಿ ಸೇರಿದಂತೆ ನಾನಾ ಮೂಲಭೂತ…
14ನೇ ವಾರ್ಡ್ನಲ್ಲಿ ಶಾಸಕ ಎಸ್.ಎ.ರಾಮದಾಸ್ ಪಾದಯಾತ್ರೆ
June 25, 2018ಮೈಸೂರು: ಮೈಸೂರಿನ ಕೆಆರ್ ಕ್ಷೇತ್ರ ವ್ಯಾಪ್ತಿಯ 14ನೇ ವಾರ್ಡಿನಲ್ಲಿ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ.ರಾಮದಾಸ್ ಶನಿವಾರ ಪಾದಯಾತ್ರೆ ನಡೆಸಿ, ನಾಗರಿಕರ ಕುಂದು-ಕೊರತೆ ಆಲಿಸಿದರು. ವಾರ್ಡ್ ವ್ಯಾಪ್ತಿಯ ಮಧುವನ ಬಡಾವಣೆಯ ಬೀದಿ ದೀಪ ನಿರ್ವಹಣೆ, ಕುಡಿಯುವ ನೀರು ಸರಬರಾಜು ಹಾಗೂ ನಿವೇಶನಗಳ ಸಂಬಂಧ ಕೇಳಿ ಬಂದ ಸಮಸ್ಯೆಗಳನ್ನು ಆಲಿಸಿದ ಶಾಸಕರು, ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಧುವನ ಬಡಾವಣೆಯ ಬೀದಿದೀಪಗಳ ನಿರ್ವಹಣಾ ವೆಚ್ಚವನ್ನು ನಿವಾಸಿಗಳಿಂದ ಸಂಗ್ರಹಿಸದೇ ಚೆಸ್ಕಾಂನಿಂದಲೇ ನಿರ್ವಹಣೆ ಮಾಡುವಂತೆ…
ಕೆ.ಆರ್.ಕ್ಷೇತ್ರದ ನಾಗರಿಕ ಸಮಸ್ಯೆಗಳ ನೀಲನಕ್ಷೆ ಸಿದ್ಧಪಡಿಸಿ
June 17, 2018ವಿವಿಧ ಇಲಾಖೆ ಅಧಿಕಾರಿಗಳಿಗೆ ಶಾಸಕ ರಾಮದಾಸ್ ಸೂಚನೆ ಜೂ.22ರಿಂದ ವಾರ್ಡ್ವಾರು ಪಾದಯಾತ್ರೆ ಮೂಲಕ ಸಮಸ್ಯೆಗೆ ಪರಿಹಾರ ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ನೀರು ಸರಬರಾಜು, ಒಳಚರಂಡಿ, ರಸ್ತೆ ಸೇರಿದಂತೆ ವಿವಿಧ ನಾಗರಿಕ ಮೂಲ ಸಮಸ್ಯೆ ಬಗ್ಗೆ ವಾರ್ಡ್ವಾರು ನೀಲನಕ್ಷೆ ತಯಾರಿಸುವಂತೆ ಶಾಸಕ ಎಸ್.ಎ.ರಾಮದಾಸ್, ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿದ್ಯಾರಣ್ಯಪುರಂನಲ್ಲಿರುವ ತಮ್ಮ ಕಚೇರಿಯಲ್ಲಿ ಕೆ.ಆರ್.ಕ್ಷೇತ್ರದಲ್ಲಿ ಮುಂದಿನ ಒಂದು ವರ್ಷದ ಅವಧಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತಂತೆ ನಗರ ಪಾಲಿಕೆ, ವಾಣಿವಿಲಾಸ ನೀರು ಸರಬರಾಜು, ಒಳಚರಂಡಿ, ಅರಣ್ಯ, ತೋಟಗಾರಿಕಾ,…
ಸಾಕಷ್ಟು ಕೆಲಸ ಮಾಡಿದ್ದರೂ ಮತದಾರರು ನನ್ನನ್ನು ಏಕೆ ಸೋಲಿಸಿದರೋ ಗೊತ್ತಿಲ್ಲ
May 29, 2018ಮೈಸೂರು: ನಾನು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಕ್ಷೇತ್ರದ ಜನತೆ ನನ್ನನ್ನು ಏಕೆ ಸೋಲಿಸಿದರೋ ಗೊತ್ತಿಲ್ಲ. ಆದರೂ ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಸೋಲು ಗೆಲುವು ಸಹಜ. ಹಾಗೆಂದು ಎದೆಗುಂದದೆ ಮತದಾರರ ಸಮಸ್ಯೆಗಳಿಗೆ ಸ್ಪಂದಿಸಿ, ಜನರಿಗಾಗಿ ಹೋರಾಟ ಮುಂದುವರಿಸುತ್ತೇನೆ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಶಾಸಕ ಅವಧಿಯಲ್ಲಿ ತಾವು ರಸ್ತೆ, ಒಳಚರಂಡಿ, ಉದ್ಯಾನವನಗಳ ಅಭಿವೃದ್ಧಿ ಸೇರಿದಂತೆ ಶೇ.90ರಷ್ಟು ಅಭಿವೃದ್ಧಿಪರ ಕೆಲಸಗಳನ್ನು…