ಮೈಸೂರು,ಡಿ.೧(ಆರ್ಕೆಬಿ)- ಕಾಂಗ್ರೆಸ್ ದುರಾಡಳಿತ ದಿಂದ ಬೇಸತ್ತಿರುವ ದಲಿತರು, ಹಿಂದುಳಿದವರು ಬಿಜೆಪಿ ಯತ್ತ ಮುಖ ಮಾಡಿದ್ದಾರೆ. ಇದೇ ರೀತಿ ಮುಂದುವರಿದರೆ ಕಾಂಗ್ರೆಸ್ಗೆ ಪ್ರಾದೇಶಿಕ ಪಕ್ಷದ ಮಾನ್ಯತೆ ಪಡೆದುಕೊಳ್ಳಲೂ ಸಾಧ್ಯವಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣ ದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಬುಧವಾರ ಆಯೋಜಿಸಿದ್ದ ಮೋರ್ಚಾದ ಮೈಸೂರು ನಗರ, ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಪ್ರಮುಖರ ಚಿಂತನಾ ಸಭೆಯನ್ನು…