ನಂಜನಗೂಡು: ಕಬಿನಿ ಜಲಾಶಯದಿಂದ ಕಳೆದ ಎರಡು ದಿನದಿಂದ ಸತತವಾಗಿ 80 ಸಾವಿರ ಕ್ಯೂಸೆಕ್ ನೀರು ಹೊರ ಬಿಟ್ಟ ಪರಿಣಾಮ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಪಿಲೆ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯವನ್ನು ಸ್ಪರ್ಶಿಸಿದೆ. ಇಂದು ಬೆಳಿಗ್ಗೆ ನೀರಿನ ಮಟ್ಟ ಹೆಚ್ಚಾಗಿದ್ದು, ಚಾಮರಾಜನಗರ ಬೈಪಾಸ್ ರಸ್ತೆಯನ್ನು ದಾಟಿ ಕಪಿಲಾ ನದಿಯ ನೀರು ಶ್ರೀಕಂಠೇಶ್ವರ ದೇವಾಲಯವನ್ನು ಭಾಗಶಃ ಆವರಿಸಿದೆ. ದೇವಾಲ ಯದ ಬಲ ಭಾಗದಲ್ಲಿರುವ ರಾಷ್ಟ್ರಪತಿ ರಸ್ತೆಗೂ ನೀರು ನುಗ್ಗಿದ್ದಲ್ಲಿ ದೇವಾಲಯ ಸಂಪೂರ್ಣವಾಗಿ ಜಲಾವೃತವಾಗುವ ಸಾಧ್ಯತೆ ಇದೆ. ದೇವಾಲಯದ ಪ್ರವೇಶ ದ್ವಾರದಲ್ಲಿ…