ಮೈಸೂರು/ನಂಜನಗೂಡು: ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ಉಂಟಾದ ಪ್ರವಾಹದಿಂದ ಭತ್ತದ ಬೆಳೆ ಕೊಚ್ಚಿ ಹೋದ ಪರಿಣಾಮ ಕಪಿಲಾ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ರೈತನೊಬ್ಬನನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಭಾನುವಾರ ಬೆಳಿಗ್ಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುಪ್ಪರವಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದ ಬಸವಯ್ಯ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಗ್ರಾಮದ ಕೆಲ ಯುವಕರು ತಕ್ಷಣವೇ ನೀರಿನಿಂದ ಆವೃತವಾಗಿದ್ದ ಕಪಿಲಾ ನದಿ ಅಂಚಿನ ಗದ್ದೆಗೆ ಧಾವಿಸಿ ಮುಳುಗಲೆತ್ನಿಸಿದ ಬಸವಯ್ಯ…