ಮೈಸೂರು: ಕಡಕೊಳ ಗ್ರಾಮದಲ್ಲಿ ಕಲುಷಿತ ನೀರಿನಿಂದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣದ ಬಳಿಕ ಎಚ್ಚೆತ್ತಿರುವ ತಾಲೂಕು ಪಂಚಾಯಿತಿ ಆಡಳಿತ ಮೈಸೂರು ತಾಲೂಕಿನ ಎಲ್ಲಾ ಗ್ರಾಮಗಳ ನೀರಿನ ಟ್ಯಾಂಕ್ ಮತ್ತು ಕಿರು ನೀರು ಸರಬರಾಜು ಟ್ಯಾಂಕ್ಗಳ ಸ್ವಚ್ಛತಾ ಅಭಿಯಾನಕ್ಕೆ ಮುಂದಾಗಿದೆ. ಫೆ.1ರಿಂದ 10ರವರೆಗೆ ತಾಲೂಕಿನ 37 ಗ್ರಾಮ ಪಂಚಾ ಯಿತಿಗಳ ವ್ಯಾಪ್ತಿಯ 186 ಗ್ರಾಮಗಳ ಎಲ್ಲಾ ನೀರಿನ ಟ್ಯಾಂಕ್ಗಳು ಹಾಗೂ ಕಿರು ನೀರು ಸರಬರಾಜು ವ್ಯವ ಸ್ಥೆಯ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಲು ಗ್ರಾಮ ಪಂಚಾ ಯಿತಿಗಳಿಗೆ ಸೂಚನೆ ನೀಡಲಾಗಿದೆ…