ಸರಗೂರು, ಏ. 17 (ನಾಗೇಶ್)- ಇಲ್ಲಿಗೆ ಸಮೀಪದ ಹಾಲಗಡ ಬಳಿ ಚಿರತೆ ಕಳೇಬರ ಪತ್ತೆಯಾಗಿದೆ. ಹಾಲಗಡ ಮತ್ತು ಇಟ್ನಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಕಪಿಲಾ ನದಿ ಸಮೀಪ ನಿರ್ಮಾಣ ಹಂತದಲ್ಲಿರುವ ಸೇತುವೆಯ ಪಿಲ್ಲರ್ ಬಳಿ 3ರಿಂದ 4 ವರ್ಷದ ಚಿರತೆ ಕಳೇಬರ ಪತ್ತೆ ಯಾಗಿದೆ. ಪಶುವೈದ್ಯ ಡಾ.ಮಹೇಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಚಿರತೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಗಾಂಗ ಮಾದರಿಯನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ಎಸಿಎಫ್ ಪರಮೇಶ್ವರ್, ಸರಗೂರು ಆರ್ಎಫ್ ಮಧು ಹಾಗೂ ಅರಣ್ಯ ಸಿಬ್ಬಂದಿ…
ಮೈಸೂರು
ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ
July 21, 2018ಹೆಚ್.ಡಿ.ಕೋಟೆ: ಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ಕಬಿನಿಗೆ ನಿಗಧಿತ ಸಮಯಕ್ಕಿಂತ ತಡವಾಗಿ ಬಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತುಂತುರು ಮಳೆ ನಡುವೆ ತುಂಬಿದ ಕಪಿಲಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಸುಮಾರು ಎರಡೂವರೆ ಗಂಟೆ ತಡವಾಗಿ ಬಂದ ಮುಖ್ಯಮಂತ್ರಿಗಳು, ಬಾಗಿನ ಅರ್ಪಿಸಿದ ನಂತರ ಜಲಾಶಯದಲ್ಲಿ ಕೆಲಸ ಮಾಡುವ ನೌಕರರಿಗೆ ಸಮವಸ್ತ್ರಗಳನ್ನು ನೀಡಿದರು. ಪತ್ರಕರ್ತರು ಮಾತನಾಡಿಸಲು ಮುಂದಾದಾಗ ಕೈಸನ್ನೆಯಲ್ಲಿ “ಏನೂ ಇಲ್ಲ” ಎಂದು ಹೇಳಿ ಸ್ವಲ್ಪ ಹೊತ್ತಿನಲ್ಲೇ ನಿರ್ಗಮಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡ,…