ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆಬಿತ್ತು. ಏಪ್ರಿಲ್ 18 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಅಂತ್ಯಗೊಳ್ಳುವ 48 ಗಂಟೆ ಮುಂಚಿತವಾಗಿ, ಅಂದರೆ ಇಂದು ಸಂಜೆ 6 ಗಂಟೆಗೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯಗೊಂಡಿತು. ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು ಸೇರಿದಂತೆ ಮೊದಲ ಹಂತದ ಚುನಾವಣಾ ಸ್ಪರ್ಧಾ ಕಣದಲ್ಲಿರುವ ಎಲ್ಲಾ 14 ಲೋಕಸಭಾ ಕ್ಷೇತ್ರಗಳ…
ದೋಸ್ತಿ ಜಂಟಿ ಪ್ರಚಾರಕ್ಕೆ ಇಂದು ಚಾಲನೆ
March 31, 2019ಬೆಂಗಳೂರು: ದೋಸ್ತಿ ಪಕ್ಷ ಗಳು ಅಧಿಕೃತವಾಗಿ ಜಂಟಿ ಚುನಾವಣಾ ಪ್ರಚಾರಕ್ಕೆ ನಾಳೆಯಿಂದ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಬೃಹತ್ ಸಮಾವೇಶದ ಮೂಲಕ ದೋಸ್ತಿ ಪ್ರಚಾರಕ್ಕೆ ನಾಂದಿ ಹಾಡಲಿದ್ದಾರೆ. ನಾಳೆ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನದ ಆವರಣದಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ನ ಎಲ್ಲಾ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬಂದ ಸಂದರ್ಭದಲ್ಲಿ ಮೇ 23ರಂದು…
ಇಂದಿನಿಂದ ರಾಜ್ಯದಲ್ಲಿ ಮೊದಲ ಹಂತದ ಹಣಾಹಣಿ
March 30, 2019ಬೆಂಗಳೂರು: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ, ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಪೂರ್ಣ ಗೊಂಡು, ಮೊದಲ ಹಂತದ ಚುನಾವಣೆಗೆ ಸ್ಪಷ್ಟ ಚಿತ್ರಣ ಹೊರಬಿದ್ದಿದೆ. ಕಾಂಗ್ರೆಸ್ ವರಿಷ್ಠರಿಗೆ ತೀವ್ರ ತಲೆನೋವು ತಂದಿದ್ದ ತುಮ ಕೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಮುದ್ದಹನುಮೇ ಗೌಡ ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆಯುವುದರೊಂದಿಗೆ ಮೈತ್ರಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಲ್ಲಿ ಕಣಕ್ಕಿಳಿದಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಮುದ್ದಹನುಮೇಗೌಡರ ನಿರ್ಧಾರದಿಂದ ನಿರಾಳ ರಾಗಿದ್ದಾರೆ. ಮೊದಲ ಹಂತದಲ್ಲಿ ನಡೆಯುತ್ತಿರುವ…