Tag: Karnataka Bandh

ಕುಶಾಲನಗರದಲ್ಲಿ ನೀರಸ ಪ್ರತಿಕ್ರಿಯೆ
ಕೊಡಗು

ಕುಶಾಲನಗರದಲ್ಲಿ ನೀರಸ ಪ್ರತಿಕ್ರಿಯೆ

May 29, 2018

ಕುಶಾಲನಗರ:  ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಹೋಬಳಿಯಲ್ಲಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಎಲ್ಲ ಅಂಗಡಿಮುಂಗಟ್ಟುಗಳು ತೆರೆದಿದ್ದವು. ಕೆಎಸ್‍ಆರ್‍ಟಿಸಿ ಬಸ್‍ಗಳು ಸೇರಿದಂತೆ ಆಟೋರೀಕ್ಷಾ ಮತ್ತು ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿಗಳ ಸಂಚಾರ ಎಂದಿನಂತೆ ನಡೆಯಿತು. ಆದರೆ ಖಾಸಗಿ ಬಸ್‍ಗಳ ಸಂಚಾರ ಕ್ಷೀಣ ಸಿತ್ತು. ಚಿತ್ರಮಂದಿರ, ಹೋಟೆಲ್‍ಗಳು, ಔಷಧಿ ಅಂಗಡಿ, ಹಾಲಿನ ಅಂಗಡಿಗಳು ಎಂದಿನಂತೆ ವ್ಯಾಪಾರ ನಡೆಸಿದವು. ಜನಸಂಚಾರ ಕೂಡ ಎಂದಿನಂತೆ ಇತ್ತು. ಶಾಲಾ ಕಾಲೇಜುಗಳ ಆರಂಭದ ಮೊದಲ ದಿನವಾದ ಇಂದು ಎಂದಿನಂತೆ…

ಜಿಲ್ಲಾದ್ಯಂತ ಕರ್ನಾಟಕ ಬಂದ್ ಸಂಪೂರ್ಣ ವಿಫಲ
ಮಂಡ್ಯ

ಜಿಲ್ಲಾದ್ಯಂತ ಕರ್ನಾಟಕ ಬಂದ್ ಸಂಪೂರ್ಣ ವಿಫಲ

May 29, 2018

ಮಂಡ್ಯ: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಮಂಡ್ಯ ಜಿಲ್ಲಾದ್ಯಂತ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿ ಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಬಂದ್‍ಗೆ ಕರೆ ನೀಡಿದ್ದರು. ಹೀಗಾಗಿ ಸೋಮ ವಾರ ನಡೆದ ರಾಜ್ಯ ಬಂದ್‍ಗೆ ಯಾವುದೇ ಸಂಘಟನೆ ಬೆಂಬಲ ಸೂಚಿಸದ ಹಿನ್ನೆಲೆ ಯಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತ ವಾಗಿದೆ. ಮಂಡ್ಯ, ಮದ್ದೂರು, ಮಳವಳ್ಳಿ,…

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಇಂದು ಸ್ವಯಂ ಪ್ರೇರಿತ ರಾಜ್ಯ ಬಂದ್‍ಗೆ ಕರೆ ನೀಡಿದ ಬಿಜೆಪಿ: ಮೈಸೂರಲ್ಲಿ ಬಂದ್‍ಗೆ ಬೆಂಬಲ ಡೌಟು
ಮೈಸೂರು

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಇಂದು ಸ್ವಯಂ ಪ್ರೇರಿತ ರಾಜ್ಯ ಬಂದ್‍ಗೆ ಕರೆ ನೀಡಿದ ಬಿಜೆಪಿ: ಮೈಸೂರಲ್ಲಿ ಬಂದ್‍ಗೆ ಬೆಂಬಲ ಡೌಟು

May 28, 2018

ಮೈಸೂರು: ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಮೇ 28ರಂದು ಬಿಜೆಪಿ ಕರೆ ನೀಡಿರುವ ರಾಜ್ಯಾದ್ಯಂತ ಸ್ವಯಂ ಪ್ರೇರಿತ ಬಂದ್‍ಗೆ ಮೈಸೂರು ನಗರದಲ್ಲಿ ಬೆಂಬಲ ದೊರೆಯುವುದು ಬಹುತೇಕ ಅನುಮಾನವಾಗಿದ್ದು, ಹೀಗಾಗಿ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ರಾಜ್ಯ ಕಬ್ಬು ಬೆಳೆಗಾರರ ಸಂಘ ಬಂದ್‍ಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಒಂದೆಡೆ ರೈತ ಸಂಘಟನೆಗಳೇ ಬಂದ್‍ನಿಂದ ಹಿಂದೆ ಸರಿದಿದ್ದು, ಮೈಸೂರು ಹೋಟೆಲ್ ಮಾಲೀಕರ ಸಂಘ ಸೇರಿದಂತೆ…

ಮೈಸೂರಲ್ಲಿ ಸ್ವಯಂ ಘೋಷಿತ ಬಂದ್‍ಗೆ ಬಿಜೆಪಿ ಕರೆ
ಮೈಸೂರು

ಮೈಸೂರಲ್ಲಿ ಸ್ವಯಂ ಘೋಷಿತ ಬಂದ್‍ಗೆ ಬಿಜೆಪಿ ಕರೆ

May 28, 2018

ಮೈಸೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿರುವಂತೆ ತಕ್ಷಣವೇ ರೈತರ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಮೇ 28ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಾದ್ಯಂತ ಸ್ವಯಂ ಘೋಷಿತ ಬಂದ್‍ಗೆ ಕರೆ ನೀಡಿದ್ದಾರೆ. ವಿಧಾನಸಭಾ ಚುನಾವಣೆ ಬಾಕಿ ಉಳಿದಿರುವ ಬೆಂಗಳೂರು ನಗರ ಹೊರತುಪಡಿಸಿ ರಾಜ್ಯಾದ್ಯಂತ ಸ್ವಯಂ ಘೋಷಿತ ಬಂದ್‍ಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ…

ಸ್ವಯಂಪ್ರೇರಿತ ಬಂದ್‍ಗೆ ವರ್ತಕರಿಗೆ ಮನವಿ
ಹಾಸನ

ಸ್ವಯಂಪ್ರೇರಿತ ಬಂದ್‍ಗೆ ವರ್ತಕರಿಗೆ ಮನವಿ

May 28, 2018

ಬೇಲೂರು: ರಾಜ್ಯದ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ರೈತರ ಹಿತದೃಷ್ಟಿಯಿಂದ ವರ್ತಕರು ಸ್ವಯಂ ಪ್ರೇರಿತರಾಗಿ ಸೋಮವಾರ ಬಂದ್ ಆಚರಿಸಿ ಸಹಕಾರ ನೀಡುವಂತೆ ವರ್ತಕರಲ್ಲಿ ಮನವಿ ಮಾಡಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕೊರಟಿಕೆರೆ ಪ್ರಕಾಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಬದುಕು ಹಸನಾಗಿದ್ದರೆ ನಾಡಿನ ಪ್ರತಿಯೊಬ್ಬರ ಬದುಕು ಉತ್ತಮ ವಾಗಿರುತ್ತದೆ. ರೈತರ ಆರ್ಥಿಕತೆ ಅಚ್ಚುಕಟ್ಟಾ ಗಿದ್ದರೆ ವರ್ತಕರ ವ್ಯವಹಾರವೂ ಉತ್ತಮ ವಾಗಿರುತ್ತದೆ. ಇದನ್ನು ಅರಿತು ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ್ದೇವೆ. ಇದಕ್ಕೆ ಪೂರಕವಾಗಿ ರೈತರ…

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

May 28, 2018

 ಗುಂಡ್ಲುಪೇಟೆಯಲ್ಲಿ ಉತ್ತಮ  ಉಳಿದೆಡೆ ಪ್ರತಿಭಟನೆಗೆ ಮಾತ್ರ ಸೀಮಿತ  ಎಂದಿನಂತೆ ಸಂಚರಿಸಿದ ವಾಹನಗಳು   ಸಾಲ ಮನ್ನಾಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ ಚಾಮರಾಜನಗರ: ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜ ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿ ಭಟನಾ ಮೆರವಣ ಗೆ ನಡೆಸಿದರು. ಕೊಳ್ಳೇಗಾಲದಲ್ಲಿ ಬೈಕ್ ರ್ಯಾಲಿ ನಡೆಸಲಾ ಯಿತು. ಹನೂರಿನಲ್ಲಿ ಪರಿಮಳಾ ನಾಗಪ್ಪ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಗುಂಡ್ಲುಪೇಟೆಯಲ್ಲಿ ಬಂದ್‍ಗೆ…

ಬಿಜೆಪಿಯಿಂದ ನಾಳೆ ಕೊಡಗು ಬಂದ್‍ಗೆ ಕರೆ
ಕೊಡಗು

ಬಿಜೆಪಿಯಿಂದ ನಾಳೆ ಕೊಡಗು ಬಂದ್‍ಗೆ ಕರೆ

May 27, 2018

ಮಡಿಕೇರಿ:  ಮುಖ್ಯಮಂತ್ರಿಯಾದರೂ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ ಮಾಡದ ಕುಮಾರಸ್ವಾಮಿ ಸರ್ಕಾರದ ವಿರುದ್ದ ಮೇ.28 ರಂದು ಕೊಡಗು ಜಿಲ್ಲಾ ಬಂದ್‍ಗೆ ಬಿಜೆಪಿ ಕರೆ ನೀಡಿದೆ. ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕುಮಾರಸ್ವಾಮಿ ಅಧಿಕಾರಕ್ಕೆ ಬಂದ 24 ಗಂಟೆಯೊಳಗಾಗಿ ರಾಷ್ಟ್ರಿಕೃತ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕಿತ್ತು. ಆದರೆ ಈಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೂ ತಾನು ರೈತರಿಗೆ ನೀಡಿದ ಭರವಸೆಯನ್ನು ಮರೆತು ಬಿಟ್ಟಿದ್ದಾರೆ. ರೈತರ ಬಗೆಗಿನ ಕುಮಾರಸ್ವಾಮಿ ಕಾಳಜಿಯ ನಿಜಬಣ್ಣ…

1 2
Translate »