ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಚಾಮರಾಜನಗರ ಕ್ಷೇತ್ರದ ಬಿಜೆಪಿಯಲ್ಲಿ ಕಾಣ ಸಿಕೊಂಡಿದ್ದ ಭಿನ್ನಮತ ಕೊನೆಗೂ ಶಮನಗೊಂಡಿದೆ. ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರನ್ನು ಪಕ್ಷದ ಹೈಕಮಾಂಡ್ ಕಣಕ್ಕೆ ಇಳಿಸುತ್ತಿದ್ದಂತೆಯೇ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಎಸ್.ಬಾಲರಾಜು, ಮುಖಂಡರಾದ ಕಿನಕಹಳ್ಳಿ ರಾಚಯ್ಯ ಹಾಗೂ ಡಿ.ಎನ್.ನಟರಾಜು ಮುನಿಸಿಕೊಂಡಿದ್ದರು. ಈಗ ಇವರೆಲ್ಲರ ಮುನಿಸನ್ನು ಹೊಗಲಾಡಿಸಲಾಗಿದೆ. ಈ ಮೂಲಕ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಾಂಗ್ರೆಸ್ ಬಹಿರಂಗವಾಗಿ ತೋರ್ಪಡಿಸಿದೆ. ಅದೇ ರೀತಿ ಚಾಮರಾಜನಗರ ಕ್ಷೇತ್ರದ…
ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ
April 25, 2018ಚಾಮರಾಜನಗರ: ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ರಾಜ್ಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ನಗರ ಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ಬಿಎಸ್ಪಿ ತೊರೆದು ಕಾಂಗ್ರೆಸ್ ಸೇರಿದರು. ಸಂಸದ ಆರ್.ಧ್ರುವನಾರಾಯಣ್ ಅವರು ನಂಜುಂಡಸ್ವಾಮಿಗೆ ಪಕ್ಷದ ಶಲ್ಯ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧ್ರುವನಾರಾಯಣ್, ಬಿಎಸ್ಪಿ ಪಕ್ಷದಲ್ಲಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಆರ್.ಪಿ.ನಂಜುಂಡಸ್ವಾಮಿ ಇಂದು ಆ ಪಕ್ಷ ತೊರೆದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದಾರೆ ಎಂದರು. ಆರ್.ಪಿ.ನಂಜುಂಡಸ್ವಾಮಿ ಮಾತನಾಡಿ, ಕಳೆದ 18 ವರ್ಷಗಳಿಂದ ನಾನು ಬಿಎಸ್ಪಿ ಪಕ್ಷದ…
ಹುಣಸೂರು: ವಿವಿಧ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
April 25, 2018ಹುಣಸೂರು: ಹುಣ ಸೂರು ವಿಧಾನಸಭಾ ಕ್ಷೇತ್ರದಿಂದ ನಿನ್ನೆ ಬಿಜೆಪಿ ಅಭ್ಯರ್ಥಿ ರಮೇಶ್ ಕುಮಾರ್, ಸಮಾಜವಾದಿ ಪಕ್ಷದ ಅಭ್ಯರ್ಥಿ ಸತ್ಯ ನಾರಾಯಣ್, ಭಾರತೀಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಲ್ಲೇಶ್, ಪಕ್ಷೇತರ ಅಭ್ಯರ್ಥಿ ಗಳಾದ ಕಲ್ಲಹಳ್ಳಿಯ ರಾಜಣ್ಣ, ಹರೀಶ್ ಹಾಗೂ ಲಕ್ಷ್ಮಣ ನಾಮಪತ್ರ ಸಲ್ಲಿಸಿದರು. ಪಕ್ಷದ ಕಚೇರಿಯಿಂದ ಕಾರ್ಯಕರ್ತ ರೊಡಗೂಡಿ ಮೆರವಣ ಗೆಯಲ್ಲಿ ಹೊರಟು ಉಪವಿಭಾಗಾಧಿಕಾರಿ ಕಚೇರಿಗೆ ಸಾಗಿ ಉಪವಿಭಾಗಾಧಿಕಾರಿ ನಿತೀಶ್ ಅವರಿಗೆ ರಮೇಶ್ ಕುಮಾರ್ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಯೋಗಾನಂದಕುಮಾರ್, ಎಸ್ಸಿ ಮೋರ್ಚಾ…
ಬಿಜೆಪಿಗೆ ಅಧಿಕಾರ ಶತಸಿದ್ಧ: ಶ್ರೀರಾಮುಲು
April 25, 2018ಗುಂಡ್ಲುಪೇಟೆ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಂಸದ ಶ್ರೀರಾಮುಲು ಹೇಳಿದರು. ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 36 ವರ್ಷಗಳಿಂದ ತಳವಾರ ಮತ್ತು ಪರಿವಾರ ಸಮುದಾಯ ಅನುಭವಿಸುತ್ತಿದ್ದ ಕಷ್ಟವನ್ನು ಅರಿತು ಈ ಸಮುದಾಯವನ್ನು ಎಸ್ಟಿಗೆ ಸೇರಿಸುವುದರೊಂದಿಗೆ ಕೇಂದ್ರ ಸರ್ಕಾರ ಅನುಕೂಲವನ್ನು ಮಾಡಿಕೊಟ್ಟಿದೆ. ಇದಕ್ಕೆ ನಾವು ಚಿರಋಣ ಯಾಗಿರಬೇಕು ಎಂದರು. ಕ್ಷೇತ್ರದಲ್ಲಿರುವ ನಾಯಕ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಬಿ.ಜೆ.ಪಿ.ಯ ಪರವಾಗಿ ತಮ್ಮ ಒಲವನ್ನು ತೋರುತ್ತಿದ್ದು,…
ಮತ್ತೊಂದು ನಾಮಪತ್ರ ಸಲ್ಲಿಸಿದ ಪರಿಮಳಾ
April 25, 2018ಕೊಳ್ಳೇಗಾಲ: ಹನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ಇಂದು ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಅವರ ಪುತ್ರ ಡಾ.ಪ್ರೀತನ್ ನಾಗಪ್ಪ ಅವರು ಬಿಜೆಪಿಯಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಪರಿಮಳಾ ನಾಗಪ್ಪ ಅವರು ಸಹಾ ನಾಮಪತ್ರ ಸಲ್ಲಿಸಿದ್ದರು. ಪುನಃ ಮಂಗಳ ವಾರ ಚುನಾವಣಾಧಿಕಾರಿಗಳಿಗೆ ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ. ಒಗ್ಗೂಡಿ ಚರ್ಚೆಸಿದ ಪರಿಮಳಾ-ವಿಷ್ಣು: ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿ ಹೊರಬಂದ ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರು ನಾಮಪತ್ರ ಸಲ್ಲಿಸಲು ಆಗಮಿಸಿದ್ದೆ…
ರಣಾಂಗಣವಾಯ್ತು ನಂ.ಗೂಡು ಬಿಜೆಪಿ ಸಮಾವೇಶ
April 24, 2018“ನನ್ನ ಮಗ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ, ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ…” ಯಡಿಯೂರಪ್ಪರ ಈ ಹೇಳಿಕೆಯಿಂದ ಕಾರ್ಯಕರ್ತರ ದಾಂಧಲೆ, ವೇದಿಕೆಯಲ್ಲಿ ಪೀಠೋಪಕರಣ ಧ್ವಂಸ, ಪುಡಿ ಪುಡಿಯಾದ ಕುರ್ಚಿಗಳು, ಹಲವು ವಾಹನಗಳು ಜಖಂ, ಪೊಲೀಸ್ ಭದ್ರತೆಯಲ್ಲಿ ನಿರ್ಗಮಿಸಿದ ನಾಯಕರು, ಕೆಲವೇ ಕ್ಷಣದಲ್ಲಿ ರಣಾಂಗಣವಾದ ಸಮಾವೇಶ ಸ್ಥಳ, ಪೊಲೀಸರಿಂದ ಲಾಠಿ ಚಾರ್ಜ್ ಮೈಸೂರು: ಸಿಎಂ ತವರು ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ನಿದ್ದೆಗೆಡಿಸಿದ್ದ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಸುವ…
ಟಿಕೆಟ್ ನೀಡದಿದ್ದಲ್ಲಿ ಮೈಸೂರು, ಚಾ.ನಗರದಲ್ಲಿ ಬಿಜೆಪಿಗೆ ಹಿನ್ನಡೆ
April 24, 2018ಮೈಸೂರು: ಮೈಸೂರಿನ ವರುಣಾ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದ್ದರಿಂದ ಬಿ.ವೈ. ವಿಜಯೇಂದ್ರ ಅವ ರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗದು. ಪಕ್ಷದ ನಾಯ ಕರು ವಿಜಯೇಂದ್ರ ಅವರಿಗೇ ಟಿಕೆಟ್ ನೀಡುತ್ತಾರೆಂಬ ಸಂಪೂರ್ಣ ಭರವಸೆ ನಮ್ಮಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಮಪತ್ರ ಸಲ್ಲಿಸುವ ಹಂತದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ಖಚಿತವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವರು ಘೋಷಿಸಿದ್ದರ ಪರಿಣಾಮ ನಂಜನಗೂಡಲ್ಲಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದ ಸಾವಿರಾರು ಕಾರ್ಯಕರ್ತರು, ಯಡಿಯೂರಪ್ಪ ಅವರು…
ಮುಖ್ಯಮಂತ್ರಿ ಮಾಡೋರು ರಾಜ್ಯದ ಆರೂವರೆ ಕೋಟಿ ಜನರು: ಕುಮಾರಸ್ವಾಮಿ
April 24, 2018ಮೈಸೂರು: ಮುಖ್ಯ ಮಂತ್ರಿ ಮಾಡುವವರು ಈ ರಾಜ್ಯದ ಆರೂವರೆ ಕೋಟಿ ಜನರು. ನಾನೇ ಸಿಎಂ ಎಂದು ಸ್ವಯಂ ಘೋಷಿಸಿಕೊಳ್ಳುವಷ್ಟು ದೊಡ್ಡವನಲ್ಲ ನಾನು ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡು ತ್ತಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೋದಲ್ಲೆಲ್ಲಾ ಹೇಳುತ್ತಿದ್ದಾರೆ. ಮತ್ತೊಂದೆಡೆ ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರು ಮುಂದಿನ 24 ದಿನದೊಳಗೆ ನಾನೇ ಮುಖ್ಯಮಂತ್ರಿಯಾಗಿ…
ಪ್ರೆಸಿಡೆಂಟ್ ಹೋಟೆಲ್ನಲ್ಲಿ ಬಿಜೆಪಿ ಕಾರ್ಯಕರ್ತರ ದಾಂಧಲೆ; ಪೊಲೀಸರಿಂದ ಲಾಠಿ ಪ್ರಹಾರ, ಹೆದ್ದಾರಿ ಸಂಚಾರ ಬಂದ್
April 24, 2018ಮೈಸೂರು: ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಉಳಿದುಕೊಂಡಿದ್ದ ಮೈಸೂರಿನ ಪ್ರೆಸಿಡೆಂಟ್ ಹೋಟೆಲ್, ಕಾರ್ಯಕರ್ತರ ಆಕ್ರೋಶದಿಂದ ರಣಾಂಗಣ ವಾಗಿ ಮಾರ್ಪಟ್ಟಿತ್ತು. ನಂಜನಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ಯಡಿ ಯೂರಪ್ಪನವರು ಮೈಸೂರಿಗೆ ಬಂದು ಈ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಈ ವಿಷಯ ತಿಳಿದ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಹೋಟೆಲ್ ಮುಂಭಾಗ ಜಮಾಯಿಸಿದರು. ಸಮಯ ಕಳೆದಂತೆ ಕಾರ್ಯಕರ್ತರ ಸಂಖ್ಯೆ ಹೆಚ್ಚಾ ಯಿತು. ಹೊಟೆಲ್ನ ಒಳ ಪ್ರಾಂಗಣದಲ್ಲಿದ್ದ ಯಡಿಯೂರಪ್ಪನವರ ಬಳಿ ತೆರಳಿದ ಕಾರ್ಯಕರ್ತರು,…
ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ಸಂದೇಶ್ ಸ್ವಾಮಿ, ಪ್ರೊ.ಕೆ.ಎಸ್.ರಂಗಪ್ಪ, ಎಲ್.ನಾಗೇಂದ್ರ, ಹರೀಶ್ಗೌಡ ನಾಮಪತ್ರ ಸಲ್ಲಿಕೆ
April 24, 2018ಮೈಸೂರು: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಂತೆ ಮೈಸೂರಿನಲ್ಲಿಂದು ನಾಮಪತ್ರ ಸಲ್ಲಿಸಿದವರಲ್ಲಿ ನರಸಿಂಹ ರಾಜ ಕ್ಷೇತ್ರದಿಂದ ಕಾಂಗ್ರೆಸ್ನ ಸಚಿವ ತನ್ವೀರ್ಸೇಠ್, ಬಿಜೆಪಿಯ ಸಂದೇಶ್ ಸ್ವಾಮಿ, ಕೃಷ್ಣರಾಜ ಕ್ಷೇತ್ರದಿಂದ ಕಾಂಗ್ರೆಸ್ನ ಶಾಸಕ ಎಂ.ಕೆ. ಸೋಮಶೇಖರ್, ಚಾಮರಾಜ ಕ್ಷೇತ್ರದಿಂದ ಜೆಡಿಎಸ್ನ ಪ್ರೊ.ಕೆ.ಎಸ್.ರಂಗಪ್ಪ, ಬಿಜೆಪಿಯ ಎಲ್.ನಾಗೇಂದ್ರ ಪ್ರಮುಖರು. ಈ ಎಲ್ಲ ಪ್ರಮುಖರು ನಾಮಪತ್ರ ಸಲ್ಲಿಸಲು ಭಾರೀ ಮೆರವಣಿಗೆಯಲ್ಲಿ ಸಾಗಿದ ಹಾದಿಯಲ್ಲಿ ಮೈಸೂರಿನ ಹಲವೆಡೆ ಟ್ರಾಫಿಕ್ ಜಾಮ್ ಆಗಿತ್ತು. ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಕ್ಷೇತ್ರ ಚುನಾವಣಾಧಿಕಾರಿ ಗಳ ಕಚೇರಿಗೆ…