ಮೈಸೂರು,ಡಿ.8(ಆರ್ಕೆಬಿ)-ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿ ಸೊರಗಿ ನಿಂತಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಪುನಶ್ಚೇತನಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಾನಪದ ಅಭಿವೃದ್ಧಿ ಸಮಿತಿ ಮನವಿ ಮಾಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಾನಪದ ಅಭಿವೃದ್ಧಿ ಸಮಿತಿ ಸಂಚಾಲಕಿ ಡಾ.ಎಂ.ಕನ್ನಿಕಾ ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ಸಾಮಾಜಿಕ, ಆರ್ಥಿಕ, ಆಡಳಿತಾತ್ಮಕವಾಗಿ ಕರ್ನಾಟಕ ಜಾನಪದ ಅಕಾಡೆಮಿ ಕುಸಿದಿದೆ. ಇದರ ಪುನಶ್ಚೇತನಕ್ಕೆ, ಅಭಿವೃದ್ಧಿಗೆ 10 ಪ್ರಮುಖ ಅಂಶಗಳನ್ನು ಒಳಗೊಂಡ ಪಟ್ಟಿಯನ್ನು ಬಿಡುಗಡೆ ಮಾಡಿದರು. ಎಲ್ಲ ಪಿಯುಸಿ ಮತ್ತು ಬಿಎ ಕಲಾ…